ಸುದ್ದಿಯನ್ನು ಖಚಿತ ಪಡಿಸಿಕೊಳ್ಳದೆ ವರದಿ ಮಾಡಲು ಅಷ್ಟೊಂದು ಆತುರವೇಕೆ..? : ಸುಮಿತ್ರಾ ಮಹಾಜನ್


Team Udayavani, Apr 23, 2021, 12:01 PM IST

23-3

ನವ ದೆಹಲಿ : ಮೃತರಾಗಿದ್ದಾರೆ ಎಂದು ಸುದ್ದಿಯನ್ನು ಖಚಿತ ಪಡಿಸಿಕೊಳ್ಳದೆ ವರದಿ ಮಾಡಲು ಅಷ್ಟೊಂದು ಆತುರವೇಕೆ..? ಎಂದು ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಶುಕ್ರವಾರ (ಏಪ್ರಿಲ್ 23) ಕೇಳಿದ್ದಾರೆ.

ನಿನ್ನೆ(ಗುರುವಾರ, ಏಪ್ರಿಲ್ 22) ರಾತ್ರಿ ಲೋಕಸಭೆಯ ಮಾಜಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಮೃತರಾಗಿದ್ದಾರೆ ಎಂದು ಅನೇಕ ರಾಷ್ಟ್ರೀಯ ಸುದ್ದಿ ವಾಹಿನಿಗಳು ವರದಿ ಮಾಡಿರುವುದಕ್ಕೆ ಪ್ರತಿಕ್ರಿಯೆಯಾಗಿ ಮಹಾಜನ್ ಈ ರೀತಿ ಪ್ರಶ್ನಿಸಿದ್ದಾರೆ.

ಇನ್ನು, ಕಾಂಗ್ರೆಸ್ ಮುಖಂಡ ಶಶಿ ತರೂರ್ ಕೂಡ ಸಂತಾಪ ಸೂಚಿಸಿದ್ದರು, ಆದರೆ ಮಹಾಜನ್ ಅವರ ಸೊಸೆ ಮತ್ತು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ,  ಮಹಾಜನ್ ಅವರು  ಜೀವಂತವಾಗಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ತರೂರ್ ತಮ್ಮ ಟ್ವೀಟ್ ನನ್ನು ಡಿಲೀಟ್ ಮಾಡಿದ್ದಾರೆ.

ಇದನ್ನೂ ಓದಿ :  ಸಾಯಬೇಕೋ ಅಥವಾ ವ್ಯಾಪಾರ ಮಾಡಬೇಕೋ ನೀವು ತೀರ್ಮಾನ ಮಾಡಿ: ವ್ಯಾಪಾರಸ್ಥರಿಗೆ ಸಚಿವ ಈಶ್ವರಪ್ಪ

ಮಾಧ್ಯಮಗಳೊಂದಿಗೆ ಮಾತನಾಡಿದ ಸುಮಿತ್ರಾ,  ಪರಿಶೀಲನೆ ಮಾಡದೆ ಸುದ್ದಿ ವಾಹಿನಿಗಳು ನನ್ನ ನಿಧನದ ಬಗ್ಗೆ ವರದಿಯನ್ನು ಹೇಗೆ ಪಸರಿಸುತ್ತವೆ ? ನನ್ನ  ಸೊಸೆ ತರೂರ್ ಅವರ ಟ್ವಿಟ್ ನನ್ನು ನಿರಾಕರಿಸಿದರು. ಸ್ಪಷ್ಟ ಮಾಹಿತಿಯಿಲ್ಲದೆ ಘೋಷಿಸುವ, ಪಸರಿಸುವ ತುರ್ತು ಏನಿದೆ..? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು, ಸುಮಿತ್ರಾ ಮಹಾಜನ್ ಅವರ ಮಗ ಮಂದರ್, ವೀಡಿಯೋ ಮೂಲಕ ಮಾತನಾಡಿ, ತನ್ನ ತಾಯಿಯವರು ಆರೋಗ್ಯವಾಗಿದ್ದಾರೆ. ಅವರ ಬಗ್ಗೆ ಸುದ್ದಿ ವಾಹಿನಿಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಬಗ್ಗೆ ಗಮನ  ನೀಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ. ಅವರು ಆರೋಗ್ಯವಾಗಿದ್ದಾರೆ ಎಂದು ಕೂಡ ತಿಳಿಸಿದ್ದಾರೆ.

ತರೂರ್ ಸಂತಾಪ ಸೂಚಿಸಿ ಮಾಡಿದ್ದ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗಿಯಾ, ಮಹಾಜನ್ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕೈಲಾಶ್ ಅವರ ಮಾಹಿತಿಗೆ ಪ್ರತಿಕ್ರಿಯಿಸಿದ ಶಶಿ ತರೂರ್, ನಾನು ನನ್ನ ಟ್ವೀಟ್ ನನ್ನು ಡಿಲೀಟ್ ಮಾಡಿದ್ದೇನೆ. ಸುಳ್ಳು ಸುದ್ದಿಗಳನ್ನು ಹರಡಲು ಜನರನ್ನು ಏನು ಪ್ರೇರೇಪಿಸುತ್ತದೆ ಎನ್ನುವುದರ ಬಗ್ಗೆ ನನಗೆ ಆಶ್ಚರ್ಯವಾಗುತ್ತದೆ. ಸುಮಿತ್ರಾ ಜಿ ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕೆ ನನ್ನ ಶುಭಾಶಯಗಳು ”ಎಂದು ಅವರು ಮತ್ತೊಂದು ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

ಸುಮಿತ್ರಾ ಮಹಾಜನ್ ಅವರಿಗೆ ಸಣ್ಣ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದೋರ್ ನ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಈಗ ಅವರು ಗುಣಮುಖರಾಗಿದ್ದಾರೆ. ಅವರ ಕೋವಿಡ್ ವರದಿಯೂ ಕೂಡ ನೆಗೆಟಿವ್ ಬಂದಿದೆ ಎಂದು ಮಹಾಜನ್ ಅವರ ಆಪ್ತ ರಾಜೇಶ್ ಅಗರ್ ವಾಲ್ ಸುದ್ದಿ ಸಂಸ್ಥೆ ಪಿಟಿಐ ಗೆ ತಿಳಿಸಿದ್ದಾರೆ.

78 ವರ್ಷದ ಸುಮಿತ್ರಾ ಮಹಾಜನ್ ಅವರು 2014 ರಿಂದ 2019 ರವರೆಗೆ ಲೋಕಸಭಾ ಸ್ಪೀಕರ್ ಆಗಿದ್ದರು. ಈ ಹಿಂದೆ ಅವರು ಸಂಸತ್ತಿನಲ್ಲಿ ಇಂದೋರ್ ಲೋಕಸಭಾ ಕ್ಷೇತ್ರವನ್ನು ಎಂಟು ಬಾರಿ ಪ್ರತಿನಿಧಿಸಿದ್ದರು.

ಇದನ್ನೂ ಓದಿ : ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ ಬಿಎಸ್ ವೈ

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.