![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 24, 2021, 7:10 AM IST
ಹೊಸದಿಲ್ಲಿ : ಲಾಕ್ಡೌನ್ ಮಾದರಿಯ ನಿರ್ಬಂಧ ಮತ್ತು ಆರ್ಥಿಕ ಚಟುವಟಿಕೆ ಸ್ಥಗಿತದಿಂದ ಸಂಕಷ್ಟಕ್ಕೀಡಾಗುವ ದೇಶದ ಕಡು ಬಡವರ್ಗಕ್ಕೆ ಉಚಿತ ಆಹಾರ ಧಾನ್ಯ ಒದಗಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮೇ ಮತ್ತು ಜೂನ್ ತಿಂಗಳುಗಳಲ್ಲಿ ಬಡವರಿಗೆ 5 ಕೆ.ಜಿ. ಆಹಾರ ಧಾನ್ಯವನ್ನು ಉಚಿತವಾಗಿ ನೀಡುವುದಾಗಿ ಶುಕ್ರವಾರ ಘೋಷಿಸಿದೆ.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (ಪಿಎಂಜಿಕೆಎವೈ)ಯ ಅನ್ವಯ ಸಾರ್ವಜನಿಕ ವಿತರಣ ವ್ಯವಸ್ಥೆಯ ಫಲಾನುಭವಿಗಳಿಗೆ 2 ತಿಂಗಳ ಕಾಲ ಹೆಚ್ಚುವರಿ 5 ಕೆ.ಜಿ. ಆಹಾರಧಾನ್ಯ ಒದಗಿಸಲಾಗುವುದು. ಆದರೆ ಈ ಬಾರಿ ದ್ವಿದಳ ಧಾನ್ಯಗಳನ್ನು ನೀಡುವುದಿಲ್ಲ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣ ವ್ಯವಸ್ಥೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಗುತ್ತಿರುವ 5 ಕೆ.ಜಿ. ಆಹಾರಧಾನ್ಯದ ಜತೆಗೆ ಹೆಚ್ಚುವರಿಯಾಗಿ ಈ ಆಹಾರಧಾನ್ಯ ದೊರೆಯಲಿದೆ.
80 ಕೋಟಿ ಜನರಿಗೆ ಅನುಕೂಲ
ರಾಷ್ಟ್ರೀಯ ಆಹಾರ ಭದ್ರತ ಕಾಯ್ದೆಯಡಿ ನೋಂದಣಿಯಾದ 80 ಕೋಟಿ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ. ಕಳೆದ ವರ್ಷ ಲಾಕ್ಡೌನ್ ಅವಧಿಯಲ್ಲಿ ಕೇಂದ್ರ ಸರಕಾರವು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಜಾರಿ ಮಾಡಿತ್ತು. ಆರಂಭದಲ್ಲಿ ಜುಲೈವರೆಗೆ 3 ತಿಂಗಳು ಉಚಿತ ಆಹಾರ ಧಾನ್ಯ ನೀಡಲಾಗಿತ್ತು. ಬಳಿಕ ನವೆಂಬರ್ವರೆಗೆ ವಿಸ್ತರಿಸಲಾಗಿತ್ತು. ಆಗ ಪ್ರತೀ ಕುಟುಂಬಕ್ಕೆ ತಿಂಗಳಿಗೆ 5 ಕೆ.ಜಿ. ಗೋಧಿ, ಅಕ್ಕಿ, 1 ಕೆ.ಜಿ. ದ್ವಿದಳ ಧಾನ್ಯ ವಿತರಿಸಲಾಗುತ್ತಿತ್ತು. ಈ ವರ್ಷ ಕೇವಲ ಆಹಾರಧಾನ್ಯಗಳನ್ನು ಮಾತ್ರ ನೀಡಲಾಗುತ್ತದೆ. 2 ತಿಂಗಳ ಈ ಯೋಜನೆಗೆ 80 ಲಕ್ಷ ಟನ್ ಧಾನ್ಯದ ಅಗತ್ಯವಿದ್ದು, 26 ಸಾವಿರ ಕೋಟಿ ರೂ. ವೆಚ್ಚವಾಗಲಿದೆ ಎಂದು ಪಾಂಡೆ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.