![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 24, 2021, 11:47 AM IST
ಟೋಕಿಯೊ(ಜಪಾನ್) : ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಟೋಕಿಯೊದ ಜೊತೆಗೆ ಕ್ಯೋಟೋ, ಒಸಾಕಾ ಮತ್ತು ಹ್ಯೋಗೊದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ ಎಂದು ಜಪಾನ್ ಪ್ರಧಾನಿ ಯೋಶಿಹಿಡಾ ಸುಗಾ ಖಚಿತಪಡಿಸಿದ್ದಾರೆ.
ಕ್ಯೋಟೋ, ಒಸಾಕಾ ಮತ್ತು ಹ್ಯೋಗೊದಲ್ಲಿ ಪ್ರದೇಶದಲ್ಲಿನ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಏಪ್ರಿಲ್ 25 ರಿಂದ ಮೇ 11 ರವರೆಗೆ ಈ ಸ್ಥಳಗಳಲ್ಲಿ ತುರ್ತು ಪರಿಸ್ಥಿತಿ ಮುಂದುವರಿಯಲಿದೆ ಎಂದು ವರದಿಯಾಗಿದೆ. ಕಳೆದ ಜನವರಿಯಲ್ಲಿ ದೇಶದ ಅನೇಕ ಸ್ಥಳಗಳಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಅದಕ್ಕೆ ಹೋಲಿಸಿದ್ರೆ ಈ ಬಾರಿಯ ತುರ್ತು ಪರಿಸ್ಥಿತಿ ತುಂಬಾ ಕಠಿಣ ಎನ್ನಲಾಗುತ್ತಿದೆ.
ಜಪಾನ್ ದೇಶದಲ್ಲಿ ಕೋವಿಡ್ ಸೋಂಕಿನಿಂದ 10000 ಜನ ಮಾತ್ರ ಸಾವನ್ನಪ್ಪಿದ್ದಾರೆ. ಕಳೆದ ಬಾರಿ ತುರ್ತು ಪರಿಸ್ಥಿತಿ ವೇಳೆ ಸೋಂಕಿನ ಸಂಖ್ಯೆ ಕಡಿಮೆ ಇತ್ತು. ನಂತರ ತುರ್ತು ಪರಿಸ್ಥಿತಿ ತೆಗೆದೆ ಮೇಲೆ ಮತ್ತೆ ಸೋಂಕಿನ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಜಪಾನ್ ಸರ್ಕಾರ ತುರ್ತು ಪರಿಸ್ಥಿತಿಯನ್ನು ಜಾರಿ ಮಾಡಿದೆ.
ಟೋಕಿಯೊದಲ್ಲಿ ಮಾತ್ರ ಶುಕ್ರವಾರ 759 ಪ್ರಕರಣಗಳು ದಾಖಲಾಗಿವೆ. ಒಸಾಕಾದಲ್ಲಿ ಹೊಸದಾಗಿ 1162 ಪ್ರಕರಣಗಳು ದಾಖಲಾಗಿವೆ. ಒಸಾಕಾದಲ್ಲಿ ಅನಾರೋಗ್ಯದ ರೋಗಿಗಳಿಗೆ ಈಗ ಹಾಸಿಗೆಗಳು ಕಡಿಮೆಯಾಗುತ್ತಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.