ಎಲ್ ಪಿ ಜಿ ಕನೆಕ್ಷನ್ ಇನ್ನಷ್ಟು ಸಲಭಗೊಳಿಸಿದ ಪೆಟ್ರೋಲಿಯಂ ಸಚಿವಾಲಯ..!
Team Udayavani, Apr 25, 2021, 12:59 PM IST
ಸಾಂದರ್ಭಿಕ ಚಿತ್ರ
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಅಟ್ಟಹಾಸ ಜಾಸ್ತಿಯಾಗುತ್ತಿದೆ. ಮತ್ತೆ ಇಡೀ ದೇಶಕ್ಕೆ ದೇಶವೇ ಸಂಪೂರ್ಣ ಲಾಕ್ಡೌನ್ ಆಗುತ್ತದೆಯೇ ಎಂಬ ಭಯದಲ್ಲಿ ಜನರಿದ್ದಾರೆ. ಈ ನಡುವೆ ಪೆಟ್ರೋಲಿಯಂ ಸಚಿವಾಲಯವು ಹೊಸ ಎಲ್ ಪಿ ಜಿ ಕನೆಕ್ಷನ್ ನಿಯಮಗಳನ್ನು ಸುಲಭಗೊಳಿಸಿದೆ.
ಹೌದು, ನಿವಾಸ ಪ್ರಮಾಣ ಪತ್ರ ನೀಡದೆಯೂ ಕೂಡ ಇನ್ಮುಂದೆ ದೇಶದ ಯಾವುದೇ ಮೂಲೆಯಲ್ಲಿ ಬೇಕಾದರೂ ನೀವು ಅಡುಗೆ ಅನಿಲವನ್ನು ಪಡೆಯಬಹುದಾಗಿದೆ.
ಒಂದು ಐಡಿ ಫ್ರೂಫ್ ಇದ್ದರೆ ಸಾಕು ನಿಮಗೆ ಎಲ್ ಪಿ ಜಿ ಸಂಪರ್ಕ ಸಿಗಲಿದೆ. ಪೆಟ್ರೋಲಿಯಂ ಸಚಿವಾಲಯ ಈ ಹಿನ್ನೆಲೆಯಲ್ಲಿ ಎಲ್ಲಾ ತೈಲ ಕಂಪನಿಗಳಿಗೆ ನಿರ್ದೇಶನ ನೀಡಿದೆ. ಸದ್ಯದಲ್ಲೇ ಗ್ರಾಹಕರಿಗೆ ಈ ನಿರ್ದೇಶನ ಜಾರಿ ಆಗಲಿದೆ.
ಓದಿ : ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ: ವಿಷ ಸೇವಿಸಿ ಪ್ರೇಮಿಗಳಿಬ್ಬರು ಆತ್ಮಹತ್ಯೆ!
ಈ ಕುರಿತಾಗಿ ಮಾತನಾಡಿರುವ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಕೇಂದ್ರ ಸರ್ಕಾರ ಎರಡು ವರ್ಷಗಳಲ್ಲಿ ಒಂದು ಕೋಟಿ ಜನರಿಗೆ ಉಚಿತ ಎಲ್ ಪಿ ಜಿ ಗ್ಯಾಸ್ ನೀಡುವ ಉದ್ದೇಶ ಇಟ್ಟುಕೊಂಡಿದೆ. ನಮ್ಮದು ಪ್ರಗತಿಶೀಲ ಅರ್ಥವ್ಯವಸ್ಥೆ. ಶ್ರೀಮಂತ ದೇಶಗಳ ಆರ್ಥಿಕತೆಗೆ ಹೋಲಿಸಿದರೆ ನಮ್ಮ ಆದ್ಯತೆಗಳು ಬೇರೆ ಎಂದು ಅವರು ಹೇಳಿದ್ದಾರೆ.
ಇನ್ನು, ಕಾರ್ಬನ್ ಮುಕ್ತ ದೇಶಕ್ಕಾಗಿ ನಮ್ಮ ಸರ್ಕಾರ ಬದ್ಧವಾಗಿದೆ. ಹಾಗಾಗಿ ವಾತಾವರಣಕ್ಕೆ ಹಾನಿ ಉಂಟುಮಾಡುವ ವಸ್ತುಗಳನ್ನು ಭಾರತ ಕಡಿಮೆ ಬಳಸಲಿದೆ. ಸಾಧ್ಯವಾದಷ್ಟು ಹೆಚ್ಚು ಪರಿಸರ ಸ್ನೇಹಿ ಇಂಧನ ಬಳಸಲು ಭಾರತ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಧಾನ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಭಾರತ ತನ್ನ ಅಗತ್ಯದ ಶೇ. 40 ರಷ್ಟು ಇಂಧನವನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ಪಡೆಯಲಿದೆ ಎಂದು ಪ್ರಧಾನ್ ಹೇಳಿದ್ದಾರೆ.
ಓದಿ : ಕೋವಿಡ್ ಸಂಕಷ್ಟ : ಮೇ 3ರವರೆಗೆ ದೆಹಲಿ ಲಾಕ್ ಡೌನ್ ವಿಸ್ತರಣೆ : ಅರವಿಂದ್ ಕೇಜ್ರಿವಾಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.