![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 25, 2021, 10:07 PM IST
ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ನಗರದ ಬ್ಯಾಂಕ್ ರೋಡ್ನಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ್ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಹೆಸ್ಕಾಂ ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.
ಕ್ಷಣಮಾತ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಏಜೆನ್ಸಿಯಲ್ಲಿದ್ದ 7 ಗ್ಯಾಸ್ ಸಿಲಿಂಡರ್ಗಳ ಪೈಕಿ ಒಂದು ಸ್ಫೋಟ್ಗೊಂಡಿದೆ. ಪರಿಣಾಮ ಏಜೆನ್ಸಿ ಗಾಜು ಪುಡಿಪುಡಿಯಾಗಿದ್ದು, ಬೆಂಕಿ ಹೊತ್ತಿ ಉರಿದಿದೆ.
ಇದನ್ನೂ ಓದಿ :ಲಸಿಕೆ ಸ್ವೀಕಾರಕ್ಕೆ ನೋಂದಣಿ ಕಡ್ಡಾಯ : ಮೇ 1ರಿಂದ ಮೂರನೇ ಹಂತದ ಲಸಿಕೆ ವಿತರಣೆ
ಈ ನಡುವೆ ಗ್ಯಾಸ್ ಏಜೆನ್ಸಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಭಯ ಭೀತರಾಗಿದ್ದ ಹಿಂಭಾಗದ ಜನರು ಮನೆಯಿಂದ ಹೊರಗೋಡಿದ್ದರು. ಸಂತೋಷ ಕಮಿತ್ಕರ್, ನಾಗರಾಜ ಕಮಿತ್ಕರ್ ಸೇರಿದಂತೆ 7 ಕುಟುಂಬಸ್ಥರು ಮನೆ ತೊರೆದು, ಮಕ್ಕಳು ಮರಿಗಳೊಂದಿಗೆ ಬಹು ದೂರ ಓಡಿದ್ದಾರೆ, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರಾದ ಅನ್ವರ್ ಶಿರಹಟ್ಟಿ, ಉಮರ್ ಫಾರೂಕ್ ಹುಬ್ಬಳ್ಳಿ ಹಾಗೂ ರಫೀಕ್ ಅಬ್ಬಿಗೇರಿ ಸೇರಿದಂತೆ ಮತ್ತಿತರರು ಬೆಂಕಿ ನಂದಿಸುವ ಕಾರ್ಯಕ್ಕೆ ಸಾಥ್ ನೀಡಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.