ಸ್ವಯಂ ಲಾಕ್‌ಡೌನ್‌ ಅನಿವಾರ್ಯ


Team Udayavani, Apr 26, 2021, 6:40 AM IST

ಸ್ವಯಂ ಲಾಕ್‌ಡೌನ್‌ ಅನಿವಾರ್ಯ

ಕೋವಿಡ್‌ ವೈರಸ್‌ ಮಿತಿಮೀರಿ ಹಬ್ಬುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ ಸಿಗುತ್ತಿಲ್ಲ. ದಿನೇದಿನೆ ಸೋಂಕು ಪೀಡಿತರು ಮತ್ತು ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಕೊರೊನಾದಿಂದಾಗಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಸ್ಥರು ತಾವು ನಿರ್ಲಕ್ಷ್ಯ ತೋರಿದ ಪರಿಣಾಮ ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡಿದ್ದೇವೆ ಎಂಬ ತಪ್ಪಿಗೆ ಪಶ್ಚಾತ್ತಾಪ ಪಡುತ್ತಿದ್ದಾರೆ.

ತಮ್ಮ ಆತ್ಮೀಯರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟುತ್ತಿದೆ. ಒಂದೆಡೆ ಪುನಃ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು ಎಂಬ ಅಭಿಪ್ರಾಯ ಎಲ್ಲೆಡೆ ಕೇಳಿಬರುತ್ತಿದೆ. ಇನ್ನೊಂದೆಡೆ ಲಾಕ್‌ಡೌನ್‌ ಆದರೆ ಜೀವನ ನಡೆಸುವುದು ಹೇಗೆ ಎಂಬ ಭಯ ಸಾಮಾನ್ಯ ಜನರನ್ನು ಕಾಡುತ್ತಿದೆ. ಸರಕಾರವು ಈ ಪರಿಸ್ಥಿತಿಯನ್ನು ನಿಭಾಯಿಸಲು ಹರಸಾಹಸ ಪಡುತ್ತಿದೆ. ಈಗಿನ ಪರಿಸ್ಥಿತಿಯನ್ನು ಗಮನಿಸಿದಾಗ ಸರಕಾರ ಮತ್ತು ಜನರ ನಿರ್ಲಕ್ಷ್ಯ, ಅಸಡ್ಡೆ ಹಾಗೂ ಅತಿರೇಕದ ನಡೆ, ಧೋರಣೆಗಳು ಈ ಎಲ್ಲ ಅವಾಂತರಕ್ಕೆ ಕಾರಣ ಎಂದರೆ ಅದು ಅತಿಶಯೋಕ್ತಿಯಾಗಲಾರದು. ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದಾಗ ಪ್ರತಿಯೊಬ್ಬ ನಾಗರಿಕ ಮತ್ತು ನಮ್ಮನ್ನಾಳುವವರ ಮನಃಸ್ಥಿತಿ ಕೂಡ ಬದಲಾಗಬೇಕಿದೆ.

ಕೋವಿಡ್‌ ಎಂಬುದು ಒಂದು ದೊಡ್ಡ ಮಹಾಮಾರಿ ಎನ್ನುವುದು ಪ್ರತಿಯೊಬ್ಬನಿಗೂ ಗೊತ್ತು. ಜೀವಕ್ಕಿಂತ ಯಾವುದು ಕೂಡ ಹೆಚ್ಚಲ್ಲ. ದಿನೇದಿನೆ ಕೊರೊನಾ ಹಾಟ್‌ಸ್ಪಾಟ್‌ ಏರಿಯಾಗಳು ಹೆಚ್ಚಾಗುತ್ತಿವೆ. ಸರಕಾರವು ಕಾಲ ಕಾಲಕ್ಕೆ ಪಾಲಿಸಬೇಕಾದ ಕೊರೊನಾ ಸುರಕ್ಷತ ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡುತ್ತಿದೆ. ಈಗ ಕಾಲ ಮಿಂಚಿ ಹೋಗಿದೆ. ಪ್ರತಿಯೊಬ್ಬರು ತಮ್ಮದೇ ಆದ ಸುರಕ್ಷತ ನಿಯಮಗಳನ್ನು ರೂಪಿಸಿಕೊಂಡು ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ದೊಡ್ಡ ಮನಸ್ಸು ಮಾಡುವುದು ಅತ್ಯಗತ್ಯವಾಗಿದೆ.

ಸ್ವಯಂ ಲಾಕ್‌ಡೌನ್‌: ಕೋವಿಡ್‌ ಸೋಂಕು ವಾಯುವೇಗದಲ್ಲಿ ಎಲ್ಲೆಡೆ ಹರಡುತ್ತಿದೆ. ಸರಕಾರ ಯಾವಾಗ ಲಾಕ್‌ಡೌನ್‌ ಘೋಷಣೆ ಮಾಡುತ್ತದೆ ಎಂದು ಜನರು ಎದುರು ನೋಡುತ್ತಿದ್ದಾರೆ. ಸರಕಾರ ಯಾವ ವಿಚಾರಗಳಲ್ಲಿ ರಿಯಾಯಿತಿಯನ್ನು ನೀಡಬಹುದು ಎಂಬುದರ ಬಗ್ಗೆ ಕುತೂಹಲದಿಂದ ಕಾಯುತ್ತಿದ್ದಾರೆ. ಇದು ಮನುಷ್ಯನ ಜೀವನ್ಮರಣದ ವಿಚಾರವಾಗಿರುವುದರಿಂದ ಇಲ್ಲಿ ನಾವು ಸರಕಾರ ಲಾಕ್‌ಡೌನ್‌ ಅಧಿಸೂಚನೆ ಹೊರಡಿಸಲು ಕಾಯುವುದು ಮೂರ್ಖತನ ಎನ್ನದೆ ಬೇರೆ ದಾರಿಯಿಲ್ಲ. ಈ ಸೋಂಕನ್ನು ತಡೆಯುವುದು ಸರಕಾರದ ಜವಾಬ್ದಾರಿ ಮಾತ್ರ ಅಲ್ಲ. ಅದರಲ್ಲಿ ನಮ್ಮ ಪಾತ್ರವಿರುವುದರಿಂದ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಉಳಿವಿಗಾಗಿ ಸ್ವಯಂ ಲಾಕ್‌ಡೌನ್‌ನ್ನು ಘೋಷಣೆ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ.

ಕನಿಷ್ಠ ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು
ಕೊರೊನಾ ನಿಯಂತ್ರಣಕ್ಕೆ ಬರಬೇಕಾದರೆ ವೇಗವಾಗಿ ಸೋಂಕಿತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಬಹುತೇಕರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ಹೆದರುತ್ತಿದ್ದಾರೆ. ಇದರಿಂದ ಸೋಂಕಿತರನ್ನು ಪತೆ‌¤ಹಚ್ಚಲು ಸಾಧ್ಯವಾಗುತ್ತಿಲ್ಲ. ಅದಲ್ಲದೇ ಕೋವಿಡ್‌ ಸೋಂಕು ಯಾವಾಗ ಬಂದು ನಮ್ಮ ದೇಹ ಸೇರುತ್ತದೆ ಎನ್ನುವುದನ್ನು ನಿರೀಕ್ಷೆ ಮಾಡಲು ಅಸಾಧ್ಯವಾಗಿರುತ್ತದೆ. ಆದುದರಿಂದ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ಕನಿಷ್ಠ ತಿಂಗಳಿಗೊಮ್ಮೆ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಕೊರೊನಾವನ್ನು ನಿಯಂತ್ರಣಕ್ಕೆ ತರಬಹುದಾಗಿದೆ.

ಕಡ್ಡಾಯವಾಗಿ ಲಸಿಕೆ ಪಡೆಯುವುದು” ಸದ್ಯಕ್ಕೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್‌-19 ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ತಿಂಗಳ ಆರಂಭದಿಂದ 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಲಸಿಕೆಯನ್ನು ನೀಡಲು ಸರಕಾರ ನಿರ್ಧರಿಸಿದೆ. ಆದರೆ ಈಗ ಲಸಿಕೆಯ ಉಪಯೋಗಕ್ಕಿಂತ ಅದರ ಅಡ್ಡ ಪರಿಣಾಮದ ಬಗ್ಗೆ ಎಲ್ಲಡೆ ಚರ್ಚೆಯಾಗುತ್ತಿದೆ. ಇದರಿಂದ ಹೆಚ್ಚಿನವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದು ಸಾಮಾನ್ಯವಾಗಿದೆ. ಯಾವುದೇ ಲಸಿಕೆ ಪಡೆದುಕೊಂಡರೂ ಕೆಲವರಿಗೆ ನೆಗಡಿ, ಜ್ವರ, ತಲೆ ನೋವು, ಚುಚ್ಚು ಮದ್ದು ನೀಡಿದ ಜಾಗದಲ್ಲಿ ನೋವು, ಊತ ಕಾಣಿಸಿಕೊಳ್ಳುತ್ತವೆ. ಇವನ್ನು ಲಸಿಕೆಯ ಅಡ್ಡ ಪರಿ ಣಾಮ ಎನ್ನಲು ಸಾಧ್ಯವಿಲ್ಲ ಎಂದು ನುರಿತ ವೈದರು ಅಭಿಪ್ರಾಯಪ ಟ್ಟಿದ್ದಾರೆ. ಕೋವಿಡ್‌ ಲಸಿಕೆ ಪಡೆದವರಿಗೂ ಇದೇ ಲಕ್ಷಣ ಕಾಣುತ್ತವೆ ಹೊರತು ಇದನ್ನು ಹೊರತುಪಡಿಸಿ ಬೇರೆ ಲಕ್ಷಣ ಕಾಣುವುದು ತೀರ ಅಪರೂಪವಾಗಿದೆ. ಆದುದರಿಂದ ಒಳ್ಳೆಯ ಉದ್ದೇಶ ಇಟ್ಟುಕೊಂಡು ಕಡ್ಡಾಯವಾಗಿ ಲಸಿಕೆ ಪಡೆಯುವುದು ನಮ್ಮ ಆದ್ಯ ಕರ್ತವ್ಯವಾಗಿದೆ.

ಅನಗತ್ಯ ಓಡಾಟ ಕಡಿಮೆ ಮಾಡಿ: ಕೊರೊನಾ ವೈರಸ್‌ ಸಾಂಕ್ರಾಮಿಕ ಸಮಯದಲ್ಲೂ ಜನರು ಬೇಕಾಬಿಟ್ಟಿಯಾಗಿ ನಗರಗಳಲ್ಲಿ ಓಡಾಡುತ್ತಿರುವುದು ವಿಷಾದನೀಯ. ಜನರ ಅನಗತ್ಯ ಓಡಾಟವೇ ಈ ಸೋಂಕು ಎಲ್ಲ ಕಡೇ ವಾಯುವೇಗದಲ್ಲಿ ಹಬ್ಬಲು ದಾರಿ ಮಾಡಿಕೊಟ್ಟಿದೆ. ಹೆಚ್ಚಿನ ಕಡೆ ಜನರು ಸಾಮಾಜಿಕ ಅಂತರ ವನ್ನು ಕಾಯ್ದುಕೊಳ್ಳುತ್ತಿಲ್ಲ. ಕೋವಿಡ್‌ ಹರಡ ದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮನೆಯ ಯಾವನೇ ಸದಸ್ಯ ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ಕಟ್ಟೆಚ್ಚರವನ್ನು ಪ್ರತೀ ಕುಟುಂಬವು ಸ್ವಯಂ ಪ್ರೇರಿತವಾಗಿ ನಿರ್ಧಾ ರವನ್ನು ತೆಗೆದುಕೊಳ್ಳಬೇಕು. ನಾನು ನನ್ನನ್ನು ನಂಬಿರುವ ಕುಟುಂಬದ ಸದಸ್ಯರ ಆರೋಗ್ಯ ಮತ್ತು ಪ್ರಾಣವನ್ನು ರಕ್ಷಣೆ ಮಾಡಲು ನಾವೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕು ಎನ್ನುವ ನಿರ್ಧಾರಕ್ಕೆ ಬರಬೇಕು.

ಸ್ಥಳೀಯ ಸ್ವಯಂಪ್ರೇರಿತ ಟಾಸ್ಕ್ಪೋರ್ಸ್‌ಗಳ ರಚನೆ: ಕೋವಿಡ್‌ ಬಗ್ಗೆ ಹಲವಾರು ವದಂತಿಗಳು ಕೇಳಿಬರುತ್ತಿವೆ. ಈ ವದಂತಿಗಳಿಗೆ ಕಿವಿಗೊಡದೆ ಪ್ರತಿಯೊಬ್ಬರು ಸರಕಾರ ಮತ್ತು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸ ಲೇಬೇಕು. ಅದಲ್ಲದೇ ಕನಿಷ್ಠ ಪಕ್ಷ ನಮ್ಮ ಮನೆಯ ಅಕ್ಕಪಕ್ಕದ ಪರಿಸರದಲ್ಲಿ ಕೋವಿಡ್‌-19ರ ಬಗೆಗಿನ ಜಾಗೃತಿ ಯನ್ನು ಮೂಡಿಸುವ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕಿದೆ. ಇದಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಸಮಾನಮನಸ್ಕರ ಸ್ವಯಂಪ್ರೇರಿತ ಟಾಸ್ಕ್ಪೋರ್ಸ್‌ಗಳನ್ನು ರಚಿಸಿ ಕೋವಿಡ್‌ನ‌ ಕರಾಳತೆಯನ್ನು ತಿಳಿಸುವ ಕಾರ್ಯ ಆಗಬೇಕಾಗಿದೆ.

ಆಚರಣೆ, ಸಮಾರಂಭಗಳ ಸ್ವಯಂ ನಿಷೇಧ :
ಸರಕಾರ ಧಾರ್ಮಿಕ ಆಚರಣೆ, ಮದುವೆ ಮತ್ತು ಇತರ ಸಮಾರಂಭಗಳಿಗೆ ಇಂತಿಷ್ಟು ಜನ ಇರಬೇಕು ಎಂಬ ಮಿತಿಯನ್ನು ನಿರ್ಧರಿಸಿದರೂ ಸಹ ಒಂದು ಧಾರ್ಮಿಕ ಆಚರಣೆ ಅಥವಾ ಮದುವೆ ಸಮಾರಂಭಗಳಲ್ಲಿ ಭಾಗವಹಿಸದೆ ಇದ್ದಲ್ಲಿ ನಾವು ಕಳೆದುಕೊಳ್ಳುವುದು ಏನು ಇಲ್ಲ. ಆದುದರಿಂದ ಈ ಕೋವಿಡ್‌ ಮಾರಿ ಸಂಪೂರ್ಣ ಹತೋಟಿಗೆ ಬರುವವರೆಗೆ ನಾವೆಲ್ಲರೂ ಜನ ಸೇರುವ ಧಾರ್ಮಿಕ ಆಚರಣೆ, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳಿಗೆ ಸ್ವಯಂ ನಿಷೇಧ ಹೇರಿಕೊಳ್ಳುವುದರಿಂದ ಕೊರೊನಾ ಹರಡುವುದಕ್ಕೆ ತಡೆಯೊಡ್ಡಬಹುದು.

– ದಿಲೀಪ್‌ ಕುಮಾರ್‌ ಸಂಪಡ್ಕ, ಪುತ್ತೂರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.