![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2021, 5:05 PM IST
ನವದೆಹಲಿ:ಮೇ 2ರಂದು ನಡೆಯಲಿರುವ ಪಂಚರಾಜ್ಯ ವಿಧಾನಸಭಾ ಚುನಾವಣಾ ಮತ ಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅಭ್ಯರ್ಥಿಗಳು ಕೋವಿಡ್ ನೆಗೆಟಿವ್ ವರದಿ ಅಥವಾ ಎರಡು ಬಾರಿ ಲಸಿಕೆ ಪಡೆದ ದಾಖಲೆಯನ್ನು ಅಗತ್ಯವಾಗಿ ತೋರಿಸಬೇಕು, ಇಲ್ಲದಿದ್ದಲ್ಲಿ ಮತಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ಇಲ್ಲ ಎಂದು ಚುನಾವಣಾ ಆಯೋಗ ಬುಧವಾರ(ಏಪ್ರಿಲ್ 28) ತಿಳಿಸಿದೆ.
ಇದನ್ನೂ ಓದಿ:ರಸ್ತೆಗೆ ತೆಗ್ಗುತೋಡಿ ಸಂಚಾರ ಬಂದ್ : “ಮಹಾ’ ಜನ ಕಳ್ಳಮಾರ್ಗಗಳಲ್ಲಿ ಬಾರದಂತೆ ಕ್ರಮ’
ಮೇ 2ರಂದು ಪಶ್ಚಿಮಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪಾಂಡಿಚೇರಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತಎಣಿಕೆ ನಡೆಯಲಿದ್ದು, ಅಂದು ಯಾವುದೇ ರೀತಿಯ ವಿಜಯೋತ್ಸವ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾ ಆಯೋಗ ಈಗಾಗಲೇ ನಿರ್ದೇಶನ ನೀಡಿದೆ.
ಇಂದು ಮತ್ತೆ ಹೊಸ ಆದೇಶವನ್ನು ಹೊರಡಿಸಿರುವ ಚುನಾವಣಾ ಆಯೋಗ, ಮತಎಣಿಕೆ (ಮೇ2) ಕೇಂದ್ರದ ಹೊರಭಾಗದಲ್ಲಿ ಸಾರ್ವಜನಿಕರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಅಭ್ಯರ್ಥಿಗಳು ಮತ್ತು ಅವರ ಏಜೆಂಟರುಗಳು ಕೋವಿಡ್ ನೆಗೆಟಿವ್ ವರದಿ ತೋರಿಸಿದ ನಂತರವಷ್ಟೇ ಮತಎಣಿಕೆ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದು ಎಂದು ಹೇಳಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.