ವಸತಿ ರಹಿತರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ


Team Udayavani, Apr 29, 2021, 4:45 AM IST

ವಸತಿ ರಹಿತರ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ತಾತ್ಕಾಲಿಕ ಆಶ್ರಯ

ಮಹಾನಗರ : ಲಾಕ್‌ಡೌನ್‌ ಮಾದರಿಯ ಕರ್ಫ್ಯೂನಿಂದಾಗಿ ಸ್ತಬ್ಧವಾಗಿ ರುವ ನಗರದಲ್ಲಿ ಕಳೆದ ಬಾರಿಯ ಲಾಕ್‌ಡೌನ್‌ನಂತೆ ಈ ಬಾರಿ ತಾತ್ಕಾಲಿಕ ಪುನರ್ವ ಸತಿ ಕಲ್ಪಿಸಿಲ್ಲ. ಆದರೆ ನಗರದಲ್ಲಿರುವ 2 “ನಗರ ವಸತಿ ರಹಿತರ ಆಶ್ರಯ ಕೇಂದ್ರ’ಗಳು ತಾತ್ಕಾಲಿಕ ಆಶ್ರಯಕ್ಕೆ ಲಭ್ಯ ಇವೆ.

ಮಹಾನಗರ ಪಾಲಿಕೆ ಆಡಳಿತದ ಅಡಿಯಲ್ಲಿ ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ ಸರಕಾರೇತರ ಸೇವಾ ಸಂಸ್ಥೆಯ ನಿರ್ವಹಿಸುವ ಎರಡು ಆಶ್ರಯ ಕೇಂದ್ರಗಳು ನಗರದ ಬಂದರು ಪ್ರದೇಶ ಮತ್ತು ಉರ್ವದಲ್ಲಿವೆ.

ಉರ್ವ ಮಹಿಳಾ ಸಮುದಾಯ ಭವನದಲ್ಲಿರುವ ಆಶ್ರಯ ಕೇಂದ್ರವನ್ನು ಮಹಿಳೆ ಯರಿಗೆ ಮೀಸಲಿರಿಸಲಾಗಿದೆ. ಬಂದರು ದಕ್ಕೆ ಬಳಿಯ ಆಶ್ರಯ ಕೇಂದ್ರದಲ್ಲಿ ಪ್ರಸ್ತುತ 16 ಮಂದಿ ನಿರಾಶ್ರಿತರು ಉಳಿದುಕೊಂಡಿದ್ದು, ಇಲ್ಲಿ ಸುಮಾರು 75 ಮಂದಿಗೆ ತಾತ್ಕಾಲಿಕ ಆಶ್ರಯ ಒದಗಿಸಿಕೊಡಬಹುದಾಗಿದೆ. ಲಾಕ್‌ಡೌನ್‌ ಮಾದರಿಯ ಕರ್ಫ್ಯೂ ಸಂದರ್ಭ ಊರಿಗೆ ಹೋಗಲು ಸಾಧ್ಯ ವಾಗದೆ ಅಸಹಾಯಕರಾಗಿರುವವರು ಇಲ್ಲಿ ವಾಸ್ತವ್ಯ ಮಾಡಲು ಅವಕಾಶವಿದೆ. ಉರ್ವ ದಲ್ಲಿರುವ ಆಶ್ರಯ ಕೇಂದ್ರದಲ್ಲಿ ಈಗ ನಾಲ್ವರು ಮಹಿಳೆಯರು ಮಾತ್ರ ಆಶ್ರಯ ಪಡೆದುಕೊಂಡಿದ್ದು, ಇಲ್ಲಿ ಸುಮಾರು 15 ಮಂದಿಗೆ ಆಶ್ರಯ ಒದಗಿಸಬಹುದಾಗಿದೆ ಎನ್ನುತ್ತಾರೆ ಈ ಆಶ್ರಯ ಕೇಂದ್ರಗಳ ನಿರ್ವಾಹಕರು.

ತಾತ್ಕಾಲಿಕ ಆಶ್ರಯ
ನಗರದಲ್ಲಿ ಕಾರ್ಮಿಕರಾಗಿದ್ದು, ವಸತಿ ಇಲ್ಲದವರಿಗೆ ತಾತ್ಕಾಲಿಕವಾಗಿ ಗರಿಷ್ಠ 90 ದಿನಗಳವರೆಗೆ ಆಶ್ರಯ ನೀಡುವ ಉದ್ದೇಶದಿಂದ ಈ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಇಲ್ಲಿ ವಾಸ್ತವ್ಯ ಇರುವವರಿಗೆ ಊಟ, ತಿಂಡಿಯ ಅಗತ್ಯವಿದ್ದರೆ ಅದನ್ನು ಕೂಡ ಒದಗಿಸಿಕೊಡಲಾ ಗು ತ್ತ ದೆ. ಕೊರೊನಾ ಹಿನ್ನೆಲೆಯಲ್ಲಿ ಅವರನ್ನು ಪ್ರತ್ಯೇಕವಾಗಿ ಇರಿಸಿ ಅನಂತರ ಅವರ ತಪಾ ಸಣೆ ನಡೆಸಲಾಗುತ್ತದೆ ಎಂದು ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ ಅಧ್ಯಕ್ಷ ಎನ್‌.ಪಿ. ಶೆಣೈ ಅವರು “ಉದಯವಾಣಿ’ ಗೆ ತಿಳಿಸಿದ್ದಾರೆ.

ಶಾಶ್ವತ ಆಶ್ರಯ ಕೇಂದ್ರಗಳಿಲ್ಲ
ನಗರದಲ್ಲಿ ನಿರಾಶ್ರಿತರಿಗಾಗಿ ಪ್ರತ್ಯೇಕ ಆಶ್ರಯ ಕೇಂದ್ರಗಳಿಲ್ಲ. ನಗರ ವಸತಿ ರಹಿತರ ಆಶ್ರಯ ಕೇಂದ್ರಗಳಲ್ಲಿ ತಾತ್ಕಾಲಿಕ ವಾಗಿ ಉಳಿದುಕೊಳ್ಳಬಹುದು. ಆದರೆ ತೀರಾ ಅನಾರೋಗ್ಯ ಪೀಡಿತರು, ಮಾನಸಿಕ ಅಸ್ವಸ್ಥರು ಮೊದಲಾದವರಿಗೆ ಇಲ್ಲಿ ಆಶ್ರಯ ನೀಡುವುದು ಕಷ್ಟ.

ಲಾಕ್‌ಡೌನ್‌ ವೇಳೆ ಆಶ್ರಯ
ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕವಾದ ತಾತ್ಕಾಲಿಕ ಆಶ್ರಯ ಕೇಂದ್ರಗಳಿದ್ದು, ಇಲ್ಲಿ ಸಾಮಾನ್ಯವಾಗಿ ಕೆಲಸಕ್ಕೆ ಹೋಗಿ ರಾತ್ರಿ ಉಳಿದುಕೊಳ್ಳುವವರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಈಗ ಲಾಕ್‌ಡೌನ್‌ ಇರುವುದರಿಂದ ಇತರ ನಿರಾಶ್ರಿತರಿಗೂ ಇಲ್ಲಿ ತಾತ್ಕಾಲಿಕ ಆಶ್ರಯ ಪಡೆದುಕೊಳ್ಳಬಹುದು. ಯಾರಿಗಾದರೂ ನಗರದಲ್ಲಿ ಆಶ್ರಯ ಸಿಗದೇ ಇದ್ದರೆ ಅಂತವರಿಗೆ ಅವಕಾಶ ನೀಡಲಾಗುವುದು.
-ಎನ್‌.ಪಿ.ಶೆಣೈ, ಅಧ್ಯಕ್ಷರು, ಸುವರ್ಣ ಕರ್ನಾಟಕ ಜನಸ್ನೇಹಿ ವೇದಿಕೆ, ಮಂಗಳೂರು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.