ಅರ್ಹರೆಲ್ಲರೂ ಲಸಿಕೆ ಪಡೆಯಿರಿ, ಕೋವಿಡ್ ನಿಗ್ರಹಕ್ಕೆ ನಿಯಮ ಪಾಲಿಸಿ: ಎಂ.ಬಿ.ಪಾಟೀಲ್


Team Udayavani, May 1, 2021, 3:34 PM IST

ಅರ್ಹರೆಲ್ಲರೂ ಲಸಿಕೆ ಪಡೆಯಿರಿ, ಕೋವಿಡ್ ನಿಗ್ರಹಕ್ಕೆ ನಿಯಮ ಪಾಲಿಸಿ: ಎಂ.ಬಿ.ಪಾಟೀಲ್

ವಿಜಯಪುರ: ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ, ವ್ಯಕ್ತಿಗತ ಅಂತರ ಕಾಯುವುದು, ಮಾಸ್ಕ್ ಧಾರಣೆ ಹಾಗೂ ಸ್ಯಾನಿಟೈಸ್ ಬಳಸುವಂತಹ ಕೋವಿಡ್ ನಿಯಮ ಪಾಲನೆಯಿಂದ ಮಾತ್ರ ಸೋಂಕು ನಿಯಂತ್ರಣ ಸಾಧ್ಯ. ಈ ವಿಷಯದಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಮಾಜಿ ಸಚಿವರಾದ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ಮನವಿ ಮಾಡಿದರು.

ಶನಿವಾರ ತಮ್ಮ ತವರು ಕ್ಷೇತ್ರ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ ಕೋವಿಡ್ ಲಸಿಕಾ ಅಭಿಯಾನ ಅಂಗವಾಗಿ ಬಬಲೇಶ್ವರ, ತಿಕೋಟಾ ಸೇರಿದಂತೆ ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಮಮದಾಪುರ ಲಸಿಕಾ ಕೇಂದ್ರದಲ್ಲಿ ಮಾತನಾಡಿದ ಅವರು, ಕೋವಿಡ್ ಎರಡನೇ ಅಲೆಯ ಸೋಂಕು ಅತ್ಯಂತ ಮಾರಕವಾಗಿದ್ದು ರೋಗದ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬೇಡಿ ಎಂದು ಜನರಿಗೆ ಸಲಹೆ ನೀಡಿದರು.

ಇಂದಿನಿಂದ 18 ವರ್ಷದ ಮೇಲ್ಪಟ್ಟವರಿಗೂ ಕೋವಿಡ್ ಲಸಿಕೆ ನೀಡಲು ನಿರ್ಧರಿಸಿತ್ತು. ಆದರೆ ಲಸಿಕೆ ಅಭಾವದಿಂದಾಗಿ ಕೇವಲ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಅಗತ್ಯ ಪ್ರಮಾಣದ ಲಸಿಕೆ ಲಭ್ಯವಾಗುತ್ತಲೇ ಸಮೀಪದ ಆರೋಗ್ಯ ಕೇಂದ್ರಗಳಿಗೆ,  ಅಥವಾ ಲಸಿಕಾ ಅಭಿಯಾನ ನಿಗದಿ ಪಡಿಸಿದ ಶಾಲೆಗಳಿಗೆ ಭೇಟಿ ನೀಡಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ಮರಣಮೃದಂಗ: ದೆಹಲಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ವೈದ್ಯ ಸೇರಿದಂತೆ 8ಮಂದಿ ಸಾವು

ವಿಶೇಷವಾಗಿ ಯುವಕರು ತಮ್ಮ ಮನೆಯಲ್ಲಿನ, ಕುಟುಂಬ ವರ್ಗದವರ, ನಿಮ್ಮ ಓಣಿಯ 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯುವಂತೆ ಗಮನಹರಿಸಿ,‌ ಲಸಿಕೆ ಪಡೆದವರಿಗೆ ಲಸಿಕೆ ಕೊಡಿಸಲು ಮುಂದಾಗಬೇಕು. ಇದು ನಿಮ್ಮ ಸಾಮಾಜಿಕ ಹೊಣೆಗಾರಿಕೆಯೂ ಹೌದು ಎಂದು ಕಿವಿ ಮಾತು ಹೇಳಿದರು.

ಮಮದಾಪುರ ವಿರಕ್ತಮಠದ ಅಭಿನವ ಮುರುಘೇಂದ್ರ ಶ್ರೀಗಳು, ಮುಖಂಡರಾದ ಮಲ್ಲಿಕಾರ್ಜುನ ಗಂಗೂರ, ಲಕ್ಷ್ಮಣ ತೇಲಿ, ಅನೀಲ ನಾಯಕ ವೈದ್ಯಾಧಿಕಾರಿ ಡಾ.ಸಮೀರ ಜಂಬಗಿ, ಪಿಡಿಓ ಮಹೇಶ ಕಗ್ಗೊಡ ಉಪಸ್ಥಿತರಿದ್ದರು.

ಲಸಿಕೆ ಪಡೆಯಲು ಬರುವ ಎಲ್ಲರಿಗೂ ಲಘು ಪಾನೀಯ, ಬಿಸ್ಕಟ್‍ ಒದಗಿಸಲು ವ್ಯವಸ್ಥೆ ಮಾಡಿ. ಇದಕ್ಕೆ ತಗುಲುವ ವೆಚ್ಚವನ್ನು ನಾನೇ ಸ್ವಂತ ಖರ್ಚಿನಲ್ಲಿ ಭರಿಸಲಿದ್ದು, ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸ್ಥಳೀಯ ವೈದ್ಯರಿಗೆ ಸೂಚಿಸಿದರು.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.