ಮಲಾಡ್‌ ಪರಿಸರದಲ್ಲಿ 2,200 ಹಾಸಿಗೆಗಳ ಕೋವಿಡ್‌ ಜಂಬೋ ಸೆಂಟರ್‌


Team Udayavani, May 3, 2021, 1:36 PM IST

Covid Jumbo Center with 2,200 beds in Malad environment

ಮುಂಬಯಿ: ಮಲಾಡ್‌ ಪರಿಸರದಲ್ಲಿ ಅತ್ಯಾಧುನಿಕ 2,200 ಹಾಸಿಗೆಗಳ ಕೊರೊನಾ ಚಿಕಿತ್ಸಾ ಕೇಂದ್ರವನ್ನು ನಿರ್ಮಿಸಲು ಮುಂಬಯಿ ಮಟ್ರೋ ಪಾಲಿಟನ್‌ ಪ್ರದೇಶ ಪ್ರಾಧಿಕಾರ (ಎಂಎಂಆರ್‌ಡಿಎ)ಯು ಈಗಾಗಲೇ ಟೆಂಡರ್‌ ಘೋಷಿಸಿದ್ದು, ಮೇ 7ರಂದು ಟೆಂಡರ್‌ ತೆರೆಯಲಾಗುವುದು ಎಂದು ಎಂಎಂಆರ್‌ಡಿಎ ಅಧಿಕಾರಿ ಗಳು ತಿಳಿಸಿದ್ದಾರೆ.

ಕೋವಿಡ್‌ ಸೆಂಟರ್‌ ನಿರ್ಮಾ ಣಕ್ಕೆ ಸುಮಾರು 65 ಕೋ. ರೂ. ವೆಚ್ಚ ಅಂದಾಜಿಸಲಾಗಿದೆ.ಆದರೆ ಟೆಂಡರ್‌ ಪ್ರಕ್ರಿಯೆ ಅಂತಿಮಗೊಳ್ಳ ದ ಕಾರಣ ವೆಚ್ಚವನ್ನು ನಿರ್ಧರಿಸಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊರೊನಾ 2ನೇ ಅಲೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗಿ ಆರೋಗ್ಯ ವ್ಯವಸ್ಥೆಯ ಮೇಲೆ ಭಾರೀ ಒತ್ತಡವನ್ನುಂಟು ಮಾಡಿದೆ.

ಕೊರೊನಾ 3ನೇ ಅಲೆಯ ಸಾಧ್ಯತೆಯನ್ನು ವ್ಯಕ್ತಪಡಿಸುತ್ತಿರು ವುದರಿಂದ ಮುಂಬಯಿ ಮನಪಾವು ಮಲಾಡ್‌ ಪರಿಸರ ದಲ್ಲಿ 2,200 ಹಾಸಿಗೆಗಳ ಜಂಬೋ ಕೋವಿಡ್‌ ಕೇಂದ್ರಗಳನ್ನು ನಿರ್ಮಿ ಸುವ ಕೆಲಸವನ್ನು ಎಂಎಂಆರ್‌ಡಿಎಗೆ ಹಸ್ತಾಂತರಿಸಿದೆ. ಎಂಎಂ ಆರ್‌ಡಿಎ ಈ ಜಂಬೋ ಆಸ್ಪತ್ರೆಯ ನಿರ್ಮಾಣಕ್ಕಾಗಿ ಟೆಂಡರ್‌ ಪ್ರಕ್ರಿಯೆ ಹೊರಡಿಸಿತ್ತು. 2,200 ಹಾಸಿಗೆಗಳ ಪೈಕಿ 1,400 ಹಾಸಿಗೆಗಳು ಆಮ್ಲಜನಕ ವ್ಯವಸ್ಥೆ ಹೊಂದಿದ್ದರೆ, ಐಸಿಯು ಹಾಸಿಗೆಗಳ ಸಂಖ್ಯೆಯು 200ರಷ್ಟು, ಸಾಮಾನ್ಯ ರೋಗಿಗಳಿಗೆ 600 ಹಾಸಿಗೆಗಳನ್ನು ನಿರ್ಮಿಸಲಾಗುವುದು. ಇದಲ್ಲದೆ ಈ ಕೋವಿಡ್‌ ಜಂಬೋ ಕೇಂದ್ರದಲ್ಲಿ 18 ಡಯಾಲಿಸಿಸ್‌ ಘಟಕಗಳು, ಪ್ರಯೋಗಾಲಯಗಳು, ಸಿಟಿ ಸ್ಕ್ಯಾನ್‌ ವ್ಯವಸ್ಥೆಗಳು ಮತ್ತು ಕೋವಿ ಡ್‌ ಪರೀಕ್ಷಾ ಯಂತ್ರಗಳ ಸೌಲಭ್ಯ ಗಳನ್ನು ಒದಗಿಸಲಾಗುವುದು.

ಮಲಾಡ್‌ ಪರಿಸರದಲ್ಲಿ ಜಂಬೋ ಕೋವಿಡ್‌ ಸೆಂಟರ್‌ ನಿರ್ಮಿಸಲಿರುವ ಮೈದಾನದಲ್ಲಿ ಮಳೆಗಾಲದಲ್ಲಿ ನೀರು ತುಂಬು ತ್ತದೆ. ಆದರೆ ಜಮೀನು ಖಾಸಗಿ ಒಡೆತನದಲ್ಲಿ ಇರುವುದರಿಂದ ಅದನ್ನು ಭರ್ತಿ ಮಾಡುವಂತೆ ಎಂಎಂಆರ್‌ಡಿಎ ಬಿಎಂಸಿಗೆ ಸೂಚಿಸಿತ್ತು. ಇದರ ಕಾಮಗಾರಿ ಯನ್ನು ಪ್ರಾರಂಭಿಸಿದ್ದ ಮನಪಾ ಎಂಎಂಆರ್‌ಡಿಎಗೆ ಹಸ್ತಾಂತರಿಸಿದ ಬಳಿಕ 15ರಿಂದ 20 ದಿನಗಳಲ್ಲಿ ಕೋವಿಡ್‌ ಜಂಬೋ ಕೇಂದ್ರ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಎಂಎಂಆರ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕಾಗಿ ಈಗಾಗಲೇ ಎಲ್ಲ ಟೆಂಡರ್‌ ಸ್ವೀಕರಿಸಲಾಗಿದ್ದು, ಮೇ 7ರಂದು ಟೆಂಡರ್‌ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗು ವುದು. ಮನಪಾ ವತಿಯಿಂದ ಮೈದಾನವನ್ನು ಸ್ವಾಧೀನಪಡಿಸಿ ಕೊಂಡ ಬಳಿಕ ಜಂಬೋ ಕೋವಿಡ್‌ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.