ಮನೆಯಲ್ಲಿರುವ ಸೋಂಕಿತರ ಮೇಲೆ ನಿಗಾ ಇರಿಸಿ
Team Udayavani, May 3, 2021, 11:05 PM IST
ಶಿವಮೊಗ್ಗ: ಕೆಲ ಕೊರೊನಾ ಸೋಂಕಿತರು ಐಸೋಲೇಷನ್ ಆಗದೆ ಸುಖಾಸುಮ್ಮನೆ ಮನೆಯಿಂದ ಹೊರಗಡೆ ತಿರುಗಾಡುತ್ತಿದ್ದು, ಅಂಥವರ ಮೇಲೆ ನಿಗಾ ಇರಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ತಾಲೂಕು ಮಟ್ಟದ ಕೊರೊನಾ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಮನೆಯಲ್ಲಿಯೇ ಆರೈಕೆ ಮಾಡಿಕೊಳ್ಳುತ್ತಿರುವ ಸೋಂಕಿತರು ಹೊರಗೆ ಹೋಗದಂತೆ ಎಚ್ಚರ ವಹಿಸುವುದರ ಜತೆಗೆ ಇಲಾಖೆಯಿಂದ ಆಗಾಗ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬೇಕು. ಯಾರೊಬ್ಬರೂ ತಮ್ಮನ್ನು ನೋಡಿಕೊಳ್ಳುತ್ತಿಲ್ಲವೆಂಬ ಅನಾಥ ಪ್ರಜ್ಞೆ ಹೋಗಲಾಡಿಸಬೇಕಿದೆ ಎಂದರು. ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ ಮಾತನಾಡಿ, ಕೊರೊನಾ ಚಿಕಿತ್ಸೆಗೆ ಸಂಬಂ ಧಿಸಿದ ಔಷಧಗಳು ಮೆಗ್ಗಾನ್ ಆಸ್ಪತ್ರೆಯಿಂದ ಹೊರಗೆ ಹೋಗುತ್ತಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ರೋಗಿಯ ಕೇಸ್ಶೀಟ್ನಲ್ಲಿ ಬರೆದ ಔಷಧ ವಾರ್ಡ್ಗೆ ತಲುಪುತ್ತಿಲ್ಲ. ಈ ರೀತಿ ಔಷಧ ದುರ್ಬಳಕೆಯಾದರೆ ರೋಗಿಗಳಿಗೆ ಔಷಧ ಲಭ್ಯವಾಗುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮೆಗ್ಗಾನ್ನಿಂದ ಔಷಧ ಹೊರಗೆ ಹೋಗುತ್ತಿದೆ ಎಂಬುದು ಗಂಭೀರ ಆರೋಪ. ತಕ್ಷಣ ಅಲ್ಲಿಗೆ ತಂಡ ಕಳುಹಿಸಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದರು.
ನಗರದ 10 ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್ ಕೋವಿಡ್ ರೋಗಿಗಳಿಗೆ ನೀಡಬೇಕು ಎಂದು ಆದೇಶಿಸಲಾಗಿದೆ. ಆದರೆ ಗ್ರಾಮೀಣ ಭಾಗದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳಿಗೆ ಬೆಡ್ ಮೀಸಲಿಲ್ಲ. ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿ ಕೊಂಡರೆ ಗ್ರಾಮೀಣ ಭಾಗದ ಪಿಎಚ್ ಸಿ ಮತ್ತು ಸಿಎಚ್ ಗಳಲ್ಲಿ ಎಚ್ ಎಫ್ ಎನ್ ಸಿ ನೀಡಲಾಗಿದೆ. ಟ್ರಯಾಜ್ ಸೆಂಟರ್ ತೆರೆಯಲಾಗುತ್ತಿದೆ. ಕುಂಸಿ, ಆಯನೂರಿನ ಭಾಗದಲ್ಲಿ ತೆರೆಯಲಾಗುತ್ತದೆ ಎಂದು ಅ ಧಿಕಾರಿಗಳು ಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.