ಕೋವಿಡ್ ಲಸಿಕೆ ಪೂರೈಕೆಯಲ್ಲಿ ಸರ್ಕಾರ ವಿಫಲ


Team Udayavani, May 4, 2021, 8:33 PM IST

4-8

ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರ, ಜಿಲ್ಲಾಡಳಿತ ಕೋವಿಡ್‌ ಲಸಿಕೆ ಪೂರೈಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದು ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್‌ ದೂರಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ದಿನ ಸಾವಿರಾರು ಜನರು ಕೋವಿಡ್‌ ಲಸಿಕೆಗಾಗಿ ಲಸಿಕಾ ಕೇಂದ್ರಕ್ಕೆ ಅಲೆಯುವಂತಾಗಿದೆ. ಬೆಳಗ್ಗೆಯಿಂದ ಕಾಯುವುದು ಸಾಮಾನ್ಯವಾಗಿದೆ. ಲಸಿಕೆಗಳ ಬಗ್ಗೆ ಸರ್ಕಾರ, ಜಿಲ್ಲಾಡಳಿತ ಸರಿಯಾದ ಮಾಹಿತಿ ನೀಡಬೇಕು. ಕೇಂದ್ರಗಳ ಮುಂದೆ ಲಸಿಕೆ ಲಭ್ಯತೆಯ ಬಗ್ಗೆ ಪ್ರಚುರಪಡಿಸಬೇಕು. ಕೊರೊನಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುವ ಲಸಿಕೆಯನ್ನು ಸಮರ್ಪಕ ಪ್ರಮಾಣದಲ್ಲಿ ಪೂರೈಕೆ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಕೊರೊನಾ ನಿಯಂತ್ರಣಕ್ಕೆ ಲಸಿಕೆಯೇ ಸೂಕ್ತ ಪರಿಹಾರ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್‌ ಹೇರುವುದಕ್ಕೆ ಶ್ರಮ ವ್ಯಯ ಮಾಡುವ ಬದಲಿಗೆ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಸರ್ಕಾರ ಕೊರೊನಾ ಲಸಿಕೆ ನೀಡಿದ್ದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಕಡಿಮೆ ಆಗುತ್ತಿತ್ತು. ಆಸ್ಪತ್ರೆಯಲ್ಲಿ ಬೆಡ್‌, ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ ಕೊರತೆಯೇ ಕಂಡು ಬರುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

ಒಂದು ಮಾಹಿತಿ ಪ್ರಕಾರ ರಾಜ್ಯ ಸರ್ಕಾರ ಲಸಿಕೆ ಕಂಪನಿಗಳಿಗೆ 4,500 ಕೋಟಿ ರೂ. ನೀಡಬೇಕಿದೆ. ಅಷ್ಟೊಂದು ಹಣ ಕೊಡದೇ ಇದ್ದಾಗ ಯಾವ ಕಂಪನಿಗಳೂ ಲಸಿಕೆ ನೀಡುವುದಿಲ್ಲ. ಲಸಿಕೆ ಇಲ್ಲದಿದ್ದರೂ 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ನೀಡಲಾಗುವುದು ಎಂದು ಮಾಧ್ಯಮಗಳಲ್ಲಿ ಪ್ರಚಾರ ಪಡೆಯಲಾಯಿತು. ಇಂತಹ ಸುಳ್ಳು ಪ್ರಚಾರ ಏಕೆ ಎಂದು ಪ್ರಶ್ನಿಸಿದರು. ದಾವಣಗೆರೆ ಜಿಲ್ಲೆಗೆ ಪ್ರತಿ ದಿನಕ್ಕೆ 15 ಸಾವಿರ ಡೋಸ್‌ ಲಸಿಕೆ ಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಲಸಿಕೆ ಜಿಲ್ಲೆಗೆ ಕೊಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಕಲಬರುಗಿ ಸಂಸದರಿಗೆ ರೆಮ್‌ಡಿಸಿವರ್‌ ಇಂಜೆಕ್ಷನ್‌ ದೊರೆಯುವಾಗ ನಮ್ಮ ಸಂಸದರಿಗೆ ಲಸಿಕೆ ಸಿಗದಂತಾಗಿದೆ. ಕೂಡಲೇ ಎಲ್ಲ ಕಡೆ ಲಸಿಕೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಒಟ್ಟು 41 ವೆಂಟಿಲೇಟರ್‌ಗಳಲ್ಲಿ 20 ಕೆಲಸ ಮಾಡುತ್ತಿವೆ. 21 ವೆಂಟಿಲೇಟರ್‌ ಕಾರ್ಯ ನಿರ್ವಹಣೆಗೆ ಅಗತ್ಯ ಸಿಬ್ಬಂದಿ ಇಲ್ಲ ಎಂದು ಹೇಳಲಾಗುತ್ತಿದೆ. ಅಗತ್ಯ ಸಿಬ್ಬಂದಿಗೆ ನಿಯೋಜನೆಗೆ ಒಂದು ವರ್ಷ ಬೇಕು ಎಂದರೆ ಹೇಗೆ, ಮಹಾನಗರ ಪಾಲಿಕೆಯ ಸಹಾಯಕ ಎಂಜಿನಿಯರ್‌ ರಾಮಚಂದ್ರಪ್ಪ ಎಂಬುವವರು ವೆಂಟಿಲೇಟರ್‌ ಇಲ್ಲದೆ ತೀವ್ರ ಅಸ್ವಸ್ಥರಾಗಿದ್ದರು. ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಗಮನಕ್ಕೆ ತಂದ ನಂತರ ಎಸ್‌. ಎಸ್‌. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ ವ್ಯವಸ್ಥೆ ಮಾಡಲಾಯಿತು. ಸರ್ಕಾರಿ ಅಧಿಕಾರಿಗಳ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಗರಪಾಲಿಕೆ ಸದಸ್ಯರಾದ ಗಡಿಗುಡಾಳ್‌ ಮಂಜುನಾಥ್‌, ಕೆ. ಅಬ್ದುಲ್‌ ಲತೀಫ್‌, ಇಟ್ಟಿಗುಡಿ ಮಂಜುನಾಥ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Tiger-hu

Hunasuru: ಕೂಂಬಿಂಗ್ ವೇಳೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಎರಗಿದ ಹುಲಿ!

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ

1-chess–bg

Chess Olympiad; ಭಾರತಕ್ಕೆ ಅವಳಿ ಸ್ವರ್ಣ ಸಂಭ್ರಮ

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

Sampaje: ಸಹಪಾಠಿಯ ಮರ್ಮಾಂಗ ಎಳೆದ ವಿದ್ಯಾರ್ಥಿಗಳು!

POlice

Kasaragod: ಹಲ್ಲೆ ಪ್ರಕರಣ: ಕೇಸು ದಾಖಲು

ganja

Bajpe; ಗಾಂಜಾ ಸೇವನೆ; ಮೂವರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.