ಅಮೆರಿಕದಲ್ಲಿ  ತುಳು ಭಾಷಿಕರ ಕೂಟ ಆಟ


Team Udayavani, May 5, 2021, 1:29 PM IST

Tulu in America

ತುಳುನಾಡಿನಿಂದ ವಲಸೆ ಬಂದು ಉತ್ತರ ಅಮೆರಿಕದ ವಿವಿಧ ಪ್ರದೇಶಗಳಲ್ಲಿ ನೆಲೆಸಿರುವ ತುಳು ಭಾಷಿಕರು ಎ. 14ರಂದು ಸೌರಮಾನ ಯುಗಾದಿ ಹಬ್ಬದ ಸಂದರ್ಭದಲ್ಲಿ ‘ಆಟ’ಎಂಬ ಸಂಘಟನೆಯ ಉದ್ಘಾಟನ ಸಮಾರಂಭದಲ್ಲಿ ಸಂಭ್ರಮ ಸಡಗರದಿಂದ ಪಾಲ್ಗೊಂಡರು.

ಅಮೆರಿಕದಲ್ಲಿ ನೆಲೆಸಿರುವ ಮುಂದಿನ ತಲೆಮಾರಿನವರಿಗೂ ತುಳು ಭಾಷೆ, ಸಂಸ್ಕೃತಿ ಮತ್ತು ಪರಂಪರೆಯ ಪರಿಚಯ ಮತ್ತು ಅಭಿಮಾನ ಉಳಿಸಿ ಬೆಳೆಸುವ ಸದುದ್ದೇಶದಿಂದ ಹುಟ್ಟು ಹಾಕಿರುವ ಈ ಸಂಘಟನೆಯ ಪೂರ್ಣ ಹೆಸರು “ಅಖೀಲ ಅಮೆರಿಕೊದ ತುಳುವೆರೆ ಅಂಗಣ (All American Tulu Association)’.

ಪ್ರಸ್ತುತ ಕೋವಿಡ್‌ ಪರಿಸ್ಥಿತಿಯಿಂದಾಗಿ ಜೂಮ್‌ ಮೂಲಕ ವರ್ಚುವಲ್‌ ಆಗಿ ನಡೆದ ಈ ಕಾರ್ಯಕ್ರಮದಲ್ಲಿ ಸಂಘದ ಸಂಸ್ಥಾಪನಾ ಅವಧಿಗೆ (ದ್ವೆ „ವಾರ್ಷಿಕ) ನೇಮಕಗೊಂಡ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಅವರ ಕುಟುಂಬದವರಲ್ಲದೇ, ನಿರ್ದೇಶಕ ಮಂಡಳಿ, ಪ್ರಾದೇಶಿಕ ರಾಯಭಾರಿ ಮತ್ತು ಸಲಹಾ ಮಂಡಳಿಯ ಸದಸ್ಯರೆಲ್ಲರೂ ತಮ್ಮ ತಮ್ಮ ಮನೆಯ ಚಾವಡಿಯಿಂದಲೇ ಕಾರ್ಯಕ್ರಮದಲ್ಲಿ  ಪಾಲ್ಗೊಂಡು ಮನೆಯ ದೇವರ ಮಂಟಪದೆದುರು ದೀಪ ಬೆಳಗುವ ಮೂಲಕ ತುಳು ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಯನ್ನು ಧ್ಯೇಯೋದತ್ತವಾಗಿರಿಸಿಕೊಂಡ “ಆಟ’ದ ಉದ್ಘಾಟನೆಗೆ ಸಾಕ್ಷಿಯಾದರು.

ಜಾಗತಿಕ ಪಿಡುಗಿನ ಸಂಕಷ್ಟದ ಸಮಯದಲ್ಲಿ ಸಂಪೂರ್ಣ ವಿಶ್ವವೇ ಆತಂಕದ ಕಾರ್ಮೋಡದಡಿಯಲ್ಲಿ ಬದುಕುತ್ತಿರುವಾಗ ತುಳು ಭಾಷೆ, ಸಂಸ್ಕೃತಿ, ಭೌಗೋಳಿಕಮೂಲದ ಜನರನ್ನೆಲ್ಲ  ಒಗ್ಗೂಡಿಸಿ ಜತೆಯಲ್ಲೇ ತುಳುನಾಡಿನ ಹಿರಿಮೆ ಒಳಿತಿಗೆ ದೂರದ ಅಮೆರಿಕದಿಂದ ಶ್ರಮಿಸಲು ಅಧ್ಯಕ್ಷ ಭಾಸ್ಕರ ಶೇರಿಗಾರ್‌ ಅವರ ದೂರದರ್ಶಿತ್ವ ಮತ್ತು ಕಲ್ಪನೆಯೇ ಕಾರಣ. ಅದಕ್ಕೆ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ಕಾರ್ಯಕಾರಿ ಸಮಿತಿ, ನಿರ್ದೇಶಕ ಮಂಡಳಿ, ಪ್ರಾದೇಶಿಕ ರಾಯಭಾರಿ ಮತ್ತು ಸಲಹಾ ಸಮಿತಿಯ ಸದಸ್ಯರದ್ದು.

ಅಮೆರಿಕದಲ್ಲಿ ಅಥವಾ ವಿದೇಶದಲ್ಲಿ ಹುಟ್ಟಿ ಬೆಳೆಯುತ್ತಿರುವ ತುಳು ಭಾಷಿಗರನ್ನು ಸಾಧ್ಯವಾದಷ್ಟು ಮಟ್ಟಿಗೆ ತುಳು ಭಾಷೆಯಲ್ಲಿಯೇ ಮಾತಾಡಲು ಪ್ರೇರಣೆ ಮಾಡುವ ಮೂಲ ಉದ್ದೇಶವಿಟ್ಟುಕೊಂಡು, ತುಳು ಸಂಸ್ಕೃತಿ ಮತ್ತು ಓದು ಬರಹದತ್ತ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸುವ ಗುರಿಯನ್ನು ಸಂಘದ ಸದಸ್ಯರು ಅನುಮೋದಿಸಿದ್ದು ಉದ್ಘಾಟನ ಸಂಜೆಯ “ಪಟ್ಟಾಂಗ’ ಅವಧಿಯಲ್ಲಿ  ವ್ಯಕ್ತವಾಯಿತು. ಮುಂಬರುವ ದಿನಗಳಲ್ಲಿ  ಅಮೆರಿಕದ ಉದ್ದಗಲಕ್ಕೂ ಹರಡಿರುವ ತುಳುನಾಡು ಮೂಲದವರನ್ನೆಲ್ಲ “ಆಟ’ದ ಸದಸ್ಯತ್ವ ಪಡೆಯಲು ಪ್ರೋತ್ಸಾಹಿಸಿ ಸಂಘದ ಮೂಲ ಉದ್ದೇಶವನ್ನು ಈಡೇರಿಸುವತ್ತ ಗಮನಹರಿಸಲು ನಿರ್ಧರಿಸಲಾಯಿತು.

ಪದಾಧಿಕಾರಿಗಳ ನೇಮಕ

ಮೊದಲ ದ್ವೈ ವಾರ್ಷಿಕ ಅವಧಿಗೆ ಅಧ್ಯಕ್ಷರಾಗಿ “ಆಟ’ ಸಂಸ್ಥಾಪನೆಗೆ ನಾಂದಿ ಹಾಡಿದ ಭಾಸ್ಕರ ಶೇರಿಗಾರ (ಬಾಸ್ಟನ್‌), ಉಪಾಧ್ಯಕ್ಷರಾಗಿ ಶಿರೀಶ್‌ ಶೆಟ್ಟಿ (ಅಟ್ಲಾಂಟ), ಕಾರ್ಯದರ್ಶಿಯಾಗಿ ಪ್ರಕಾಶ ಉಡುಪ (ಆಸ್ಟಿನ್‌), ಜಂಟಿ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ (ಬಾಸ್ಟನ್‌), ಖಜಾಂಚಿಯಾಗಿ ಸುಭಾಸ್‌ ಶೆಟ್ಟಿ (ಕ್ಯಾಲಿಫೋರ್ನಿಯಾ), ಜಂಟಿ ಖಜಾಂಚಿಯಾಗಿ ಫ್ರೆಡ್ರಿಕ್‌ ಫೆರ್ನಾಂಡಿಸ್‌ (ಬಾಸ್ಟನ್‌) ಮತ್ತು ನಿರ್ದೇಶಕ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಆಳ್ವ (ಕ್ಯಾಲಿಫೋರ್ನಿಯಾ) ಇವರು ನೇಮಕಗೊಂಡರು.

ಇದೇ ಅವಧಿಗೆ ಆಯ್ಕೆಗೊಂಡ ನಿರ್ದೇಶಕ ಮಂಡಳಿಯಲ್ಲಿ ಅಜಿತ್‌ ಭಾಸ್ಕರ್‌ ಶೆಟ್ಟಿ (ನ್ಯೂಯಾರ್ಕ್‌), ಡಾ| ಕೆ.ಪಿ. ಮೋಹನಚಂದ್ರ (ಕ್ಯಾಲಿಫೋರ್ನಿಯಾ), ಪ್ರಶಾಂತ ಕುಮಾರ್‌ (ಮಿಚಿಗನ್‌), ಪ್ರೀತಿ ಶೆಟ್ಟಿ (ಮಿನಿಯಾಪೊಲಿಸ್‌), ಡಾ| ರತ್ನಾಕರ ಶೇರಿಗಾರ್‌ (ವರ್ಜಿನಿಯಾ), ಶ್ರೀವತ್ಸ ಬಲ್ಲಾಳ (ಫಿಲಿಡೆಲ್ಫಿಯಾ), ಡಾ| ಸುಧಾಕರ್‌ ರಾವ್‌ (ಬಾಸ್ಟನ್‌) ಮತ್ತು ಉಮೇಶ್‌ ಅಸೈಗೋಳಿ (ನಾರ್ಥ್ ಕ್ಯಾರೊಲಿನಾ) ಇವರು ಸೇವೆ ಸಲ್ಲಿಸಲಿದ್ದಾರೆ.

ಸಲಹಾ ಸಮಿತಿಯ ಸದಸ್ಯರಾಗಿ ಡಾ| ಭೀಮ ಭಟ್‌ (ಫಿಲಡೆಲ್ಫಿಯಾ), ಡಾ| ಗುರುಪ್ರಸಾದ್‌ (ಫ್ಲೋರಿಡಾ), ಶ್ರೀಶ ಜಯ (ಚಿಕಾಗೊ), ಶ್ರೀವತ್ಸ ಜೋಶಿ (ವರ್ಜಿನಿಯಾ) ಮತ್ತು ಸುಧೀರ್‌ ಪ್ರಭು (ಬಾಸ್ಟನ್‌) ನೇಮಕವಾಗಿದ್ದಾರೆ. ಇದಲ್ಲದೆ ಪ್ರಾದೇಶಿಕ ರಾಯಭಾರಿಗಳಾಗಿ ಅನಿತಾ ನಾಯ್ಕ, ಅವಿಲ್‌ ಡಿ’ಸೋಜಾ, ಕುಮಾರ್‌ ಶೆಟ್ಟಿ , ಪವಿತ್ರಾ ಶೆಟ್ಟಿ , ಪ್ರಜ್ವಲ್‌ ಶೆಟ್ಟಿ , ಪ್ರಸನ್ನ ಲಕ್ಷ್ಮಣ್‌, ರಿತೇಶ್‌ ಶೆಟ್ಟಿ , ಸಂತೋಷ್‌ ಶೆಟ್ಟಿ , ಶ್ರೀವಲ್ಲಿ ರಾಯ್‌, ಸಿದ್ಧಾರ್ಥ ಶೆಟ್ಟಿ  ಮತ್ತು ಉಮಾಶಂಕರ್‌ ಕಡಂಬಾರ್‌ ಸಹ ನೇಮಕಗೊಂಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.