ಕೋವಿಡ್ ಸಂಕಷ್ಟದಲ್ಲಿಯೂ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದ ದೈತ್ಯ ಐಟಿ ಕಂಪೆನಿಗಳು..!


Team Udayavani, May 5, 2021, 3:16 PM IST

Indias top four it firms to hire over 1-lakh employees in fy22 despite raging pandemic

ನವ ದೆಹಲಿ : ದೇಶ ಒಂದಡೆ ಕೋವಿಡ್ ಸೋಂಕಿನ  ಪರಿಣಾಮದಿಂದ ತತ್ತರಿಸಿ ಹೋಗುತ್ತಿದ್ದರೇ, ಇನ್ನೊಂದೆಡೆ ಉದ್ಯೋಗದ ಸಮಸ್ಯೆ ಮತ್ತಷ್ಟು ಹೆಚ್ಚುತ್ತಿದೆ. ಕೋವಿಡ್ ನ ದವಡೆಗೆ ಸಿಲುಕಿ ಉದ್ಯೋಗ ಕಳೆದುಕೊಂಡು ಭವಿಷ್ಯದ ಚಿಂತನೆಯಲ್ಲಿ ಹಣೆಗೆ ಕೈಯಿಟ್ಟು ಕೂತಿರುವ ಸಾವಿರ ಸಾವಿರ ನಿರುದ್ಯೋಗಿಗಳ ಪಾಲಿಗೆ ಇದು ಕೊಂಚ ಸಿಹಿ ಸುದ್ದಿಯಾಗಲಿದೆ ಎನ್ನುವುದರಲ್ಲಿ ಅನುಮಾನವಿಲ್ಲ.

ಹೌದು, ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಸಂದರ್ಭದಲ್ಲಿ ದೇಶದ ಪ್ರತಿಷ್ಠಿತ ಅಗ್ರಮಾನ್ಯ ದೈತ್ಯ ನಾಲ್ಕು ಐಟಿ ಕಂಪೆನಿಗಳಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಹಾಗೂ ಹೆಚ್ ಸಿ ಎಲ್  ಕಂಪನಿಗಳು ಈ ವರ್ಷ 1 ಲಕ್ಷ  ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆಯಿರುವುದಾಗಿ ಒಂದು ವರದಿ ತಿಳಿಸಿದೆ.

ಓದಿ : ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಕೆ ಬಗ್ಗೆ ಕೇಂದ್ರ ಸಚಿವರ ಜೊತೆ ಶೆಟ್ಟರ್ ಮಾತುಕತೆ

ಐಟಿ ಕಂಪೆನಿಗಳಾದ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಮತ್ತು ಹೆಚ್ ಸಿಎಲ್ ಟೆಕ್ ನಂತಹ ಕಂಪನಿಗಳು, ಯುರೋಪ್, ಅಮೆರಿಕಾ, ಮತ್ತು ಮಧ್ಯ-ಪೂರ್ವ ರಾಷ್ಟ್ರಗಳಲ್ಲಿ ಮಾರುಕಟ್ಟೆ ಮತ್ತೆ ಪ್ರಾರಂಭಿಸಿರುವುದರಿಂದ ಈ ವರ್ಷ ಹೊಸ 1  ಲಕ್ಷ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಬಹುತೇಕ ಎಲ್ಲಾ ಲಕ್ಷಣಗಳಿವೆ.

ಕ್ಲೌಡ್ ಕಂಪ್ಯೂಟಿಂಗ್, ಡಾಟಾ ಅನಾಲಿಟಿಕ್ಸ್, ಸೈಬರ್ ಸೆಕ್ಯೂರಿಟಿ, ಮೆಷಿನ್ ಲರ್ನಿಂಗ್ ನಂತಹ ಕ್ಷೇತ್ರಗಳಲ್ಲಿ ಕೌಶಲ್ಯಕ್ಕೆ ಬೇಡಿಕೆ, 2021ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಅವಧಿಯಲ್ಲಿ ಆಕರ್ಷಕ ವೇತನಕ್ಕೆ ಕಾರಣವಾಗಿದ್ದು, ಉತ್ತಮ ವೇತನ, ಸವಲತ್ತು ಸಿಗುವ ಕಡೆಗೆ ತೆರಳಲು ನೌಕರರು ನಿರ್ಧರಿಸಿದ್ದಾರೆ.

ಇನ್ನು, ಸುದ್ದಿ ಸಂಸ್ಥೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ  ಉದ್ಯಮ ಕ್ಷೇತ್ರದ ವೀಕ್ಷಕರು ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ  ಅನೇಕ ಕಂಪನಿಗಳು ಡಿಸೆಂಬರ್ 2021ರವರೆಗೂ ಮನೆಯಿಂದ ಕೆಲಸ (ವರ್ಕ್ ಫ್ರಮ್ ಹೋಮ್)ಮಾಡಲು ನೀಡಿರುವುದರಿಂದ ಮುಂಬರುವ ತಿಂಗಳುಗಳಲ್ಲಿ ಕ್ಲೈಂಟ್ ಜಿಯೋಗ್ರಾಫಿಸ್ ಐಟಿ ಕಂಪನಿಯಲ್ಲೂ ನೇಮಕ ಏರಿಕೆಯಾಗುವ ಸಾಧ್ಯತೆಯಿರುವುದಾಗಿ ತಿಳಿಸಿದ್ದಾರೆ.

ಇನ್ಫೋಸಿಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಬಿ. ಪ್ರವೀಣ್ ರಾವ್ ಪ್ರತಿಕ್ರಿಯಿಸಿ,  ಐಟಿ ಕಂಪನಿಗಳ ನಾಲ್ಕನೇ ತ್ರೈಮಾಸಿಕ ವಿಶ್ಲೇಷಣೆ ಪ್ರಕಾರ, 2021ರ ಹಣಕಾಸು ವರ್ಷದಲ್ಲಿ ನೌಕರರ ನಿವ್ವಳ ಸೇರ್ಪಡೆ ಕಳೆದ  ಹಣಕಾಸು ವರ್ಷದಲ್ಲಿದ್ದ 49 ಸಾವಿರದಿಂದ 73 ಸಾವಿರಕ್ಕೆ ಹೆಚ್ಚಾಗಿದೆ. ದೇಶ ಹಾಗೂ ಹೊರದೇಶಗಳಲ್ಲಿ 26 ಸಾವಿರ ನೌಕರರನ್ನು ನೇಮಕ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಟಿಸಿಎಸ್ ಕಂಪೆನಿಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಂದ್ ಪ್ರತಿಕ್ರಿಯಿಸಿ, 2022ರ ಹಣಕಾಸು ವರ್ಷದಲ್ಲಿ ಸಂಸ್ಥೆ ಸುಮಾರು 40 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಯೋಜನೆಯಲ್ಲಿ ಇದೆ ಎಂದು ತಿಳಿಸಿದ್ದಾರೆ.

ಥಿಯೆರಿ ಡೆಲಾಪೋರ್ಟೆ ವಿಪ್ರೋದ ಸಿಇಒ ಆದ ನಂತರ ಪ್ರಸ್ತಕ ಹಣಕಾಸು ವರ್ಷದಲ್ಲಿ  ಹೊಸದಾಗಿ 10 ಸಾವಿರ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದ್ದಾರೆ.ಈ ವರ್ಷದ 15 ಸಾವಿರ ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ನೊಯ್ಡಾ ಮೂಲದ ಹೆಚ್ ಸಿಎಲ್ ಕಂಪನಿ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಓದಿ : ಬೆಡ್ ಬ್ಲಾಕಿಂಗ್ ಪ್ರಕರಣ: ಇಬ್ಬರು ವೈದ್ಯರು ಸೇರಿ ಎಂಟು ಮಂದಿ ಸಿಸಿಬಿ ವಶಕ್ಕೆ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.