![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 5, 2021, 9:11 PM IST
ಹೊನ್ನಾಳಿ: ರಾಜ್ಯದಲ್ಲಿ ಕೋವಿಡ್ ನಿಂದಾಗಿ ಸಾವು ಹೆಚ್ಚಾಗುತ್ತಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ರಾಜಕಿಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.
ಗುರುವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ನನಗೆ ಎರಡು ಖಾತೆ ಬೇಕು ಎಂದು ಡಾ.ಸುಧಾಕರ್ ಹಠ ಮಾಡಿ ಎರಡು ಖಾತೆಗಳನ್ನು ಪಡೆದರು. ಇದೇನಾ ಎರಡು ಖಾತೆಗಳನ್ನು ನಿಭಾಯಿಸುವ ವೈಖರಿ ಎಂದು ಅವರು ಕಿಡಿ ಕಾರಿದರು.
ಕೆಲ ಸಚಿವರ ದುರ್ವತನೆ, ನಡವಳಿಕೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದ್ದು ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚೆ ಕೂಡ ನಡೆಸಿದ್ದೇನೆ. ಮುಖ್ಯಮಂತ್ರಿಗಳ ವೇಗಕ್ಕೆ ಸರಿಯಾಗಿ ಸಚಿವ ಸಂಪುಟದ ಸಚಿವರು ಕೆಲಸ ಮಾಡುತ್ತಿಲ್ಲ. ಸಚಿವರು ಅವರಿಗೆ ಸಾಥ್ ನೀಡುವ ಮೂಲಕ ಕೊರೊನಾ ತಡೆಗೆ ಮುಂದಾಗಬೇಕಿದೆ ಎಂದರು.
ಕೊರೊನಾ ಅಲೆ ಅಬ್ಬರಿಸುತ್ತಿರುವ ಸಂದರ್ಭದಲ್ಲಿ ವಿಪಕ್ಷಗಳು ಸುಖಾ ಸುಮ್ಮನೆ ಟೀಕೆಗಿಳಿದು ಬೊಬ್ಬೆ ಹೊಡೆಯುತ್ತಿವೆ ಟೀಕಿಸುವ ಬದಲು ಆರೋಗ್ಯಕರ ಹಾಗೂ ವೈಜ್ಞಾನಿಕ ಸಲಹೆಗಳನ್ನು ನೀಡಲಿ ಎಂದು ಹೇಳಿದರು.
ಇದನ್ನೂ ಓದಿ:ಚೆನ್ನೈ : ಸರ್ಕಾರಿ ಆಸ್ಪತ್ರೆಯಲ್ಲಿ 13 ರೋಗಿಗಳ ಸಾವು : ಆಕ್ಸಿಜನ್ ಕೊರತೆ ಆರೋಪ
ಕೋವಿಡ್ ಸಂಬಂಧ ಚಾಮರಾಜನಗರದಲ್ಲಿ ನಡೆದ ಸಾವಿನ ಪ್ರಕರಣ ಹಾಗೂ ಬೆಂಗಳೂರು ನಗರದಲ್ಲಿ ಬೆಡ್ ಮಾರಾಟ ದಂಧೆಗಳು ತಲೆ ತಗ್ಗಿಸುವ ಪ್ರಕರಣಗಳು. ಇಂತಹ ಕೆಲಸ ಮಾಡಿದ ವ್ಯಕ್ತಿಗಳು ನಿಜವಾಗಿಯೂ ಪಾಪಿಗಳು. ಅವರಿಗೆ ಭಗವಂತನೇ ಶಿಕ್ಷಿಸಲಿ ಎಂದರು.
ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರಿಗೆ ದೂರವಾಣಿ ಮೂಲಕ ಸಾವು ಬದುಕಿನ ಹೋರಾಟದಲ್ಲಿರುವ ಜನರಿಗೆ ಸ್ಪಂದಿಸುವ ಕಾರ್ಯಮಾಡಿ ಎಂದು ಕರೆ ಮಾಡಿದರೆ ಕರೆಗಳನ್ನು ಸ್ವೀಕರಿಸಲಿಲ್ಲ. ನಂತರ ಸಂದೇಶಗಳನ್ನು ಹಾಕಿ ವಾಟ್ಸಾಪ್ ಮೂಲಕ ಕಳಿಸಿದ್ದೆ. ಇದ್ಯಾವುದಕ್ಕು ಉತ್ತರ ನೀಡಲಿಲ್ಲ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿಎಂ ಅವರ ಗಮನಕ್ಕೆ ತರುವೆ ಎಂದರು.
ಮುಖ್ಯಮಂತ್ರಿಗಳು ಎರಡು ಬಾರಿ ಕೋವಿಡ್ ಸೋಂಕಿಗೆ ಒಳಪಟ್ಟರು. ಇದೀಗ ಗುಣಮುಖರಾಗಿ ಜನತೆಯ ಆರೋಗ್ಯದ ದೃಷ್ಟಿಯಿಂದ ಅವರೇ ಫೀಲ್ಡಿಗಿಳಿದು ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಖಾಸಗೀ ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಭಾರತಾಂಬೆಯ ಮಕ್ಕಳನ್ನು ರಕ್ಷಣೆ ಮಾಡಲು ಕೋವಿಡ್ ವಿರುದ್ದ ಸಾಕಷ್ಟು ನಿಯಮಗಳನ್ನು ಜಾರಿ ಮಾಡಿದ್ದು ಪ್ರತಿಯೊಬ್ಬರು ಅದನ್ನು ಪಾಲನೆ ಮಾಡಬೇಕಾಗಿದೆ ಎಂದರು. ಅದೇ ರೀತಿ ಮುಖ್ಯಮಂತ್ರಿಗಳೂ ಕೂಡ ರಾಜ್ಯದಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿ ಮಾಡಿದ್ದು ಪ್ರತಿಯೊಬ್ಬರೂ ಇದನ್ನು ಕಡ್ಡಾಯವಾಲಿ ಪಾಲಿಸಬೇಕು ಎಂದರು.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.