ಬಂಟ್ವಾಳದಲ್ಲಿ ಜಲಶಕ್ತಿ ಅಭಿಯಾನದ ಕೆಲಸಗಳಿಗೆ ಒತ್ತು


Team Udayavani, May 7, 2021, 4:20 AM IST

ಬಂಟ್ವಾಳದಲ್ಲಿ ಜಲಶಕ್ತಿ ಅಭಿಯಾನದ ಕೆಲಸಗಳಿಗೆ ಒತ್ತು

ಬಂಟ್ವಾಳ: ಲಾಕ್‌ಡೌನ್‌ ಮಾದರಿಯ ಕರ್ಫ್ಯೂ ಪರಿಣಾಮ ಯಾವುದೇ ಕೆಲಸ ಇಲ್ಲದೇ ಇದ್ದರೂ, ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಖಾತರಿ ಯೋಜನೆಯ ಕೆಲಸಗಳು ಜನರನ್ನು ಕೈ ಬೀಸಿ ಕರೆಯುತ್ತಿವೆ. ಲಾಕ್‌ಡೌನ್‌ ಅವಧಿಯಲ್ಲಿ ಬಂಟ್ವಾಳದ ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲೂ ನರೇಗಾ ಕೆಲಸ ಚುರುಕು ಪಡೆದುಕೊಂಡಿದೆ.

ಪ್ರತಿ ವರ್ಷವೂ ತಾಲೂಕಿಗೆ ನರೇಗಾದ ಕೆಲಸಕ್ಕಾಗಿ ನಿರ್ದಿಷ್ಟ ಮಾನವ ದಿನಗಳ ಕೆಲಸದ ಗುರಿಯನ್ನು ನೀಡಲಾಗುತ್ತಿದ್ದು, ಅದನ್ನು ತಾಲೂಕಿನ ಪ್ರತಿ ಗ್ರಾ.ಪಂ.ಗಳಿಗೆ ವಿಭಜಿಸಲಾಗುತ್ತದೆ. ಬಂಟ್ವಾಳಕ್ಕೆ ಈ ಬಾರಿ 4.15 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದ್ದು, ಪ್ರಸ್ತುತ ಸುಮಾರು 18,279 ಮಾನವ ದಿನಗಳ ಕೆಲಸ ನಡೆದಿವೆ.

ಬೆಳ್ತಂಗಡಿಗೆ ಹೆಚ್ಚಿನ ಗುರಿ :

ಜಿಲ್ಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ 4.80 ಲಕ್ಷ ಮಾನವ ದಿನಗಳ ಗುರಿ ನೀಡಲಾಗುತ್ತಿದ್ದು, ಇದು ಇಡೀ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಗುರಿಯಾಗಿದೆ. 4.15 ಲಕ್ಷ ಗುರಿ ಇರುವ ಬಂಟ್ವಾಳ ತಾಲೂಕು 2ನೇ ಸ್ಥಾನದಲ್ಲಿದೆ.

ಜಲಶಕ್ತಿ ಅಭಿಯಾನದ ಕಾರ್ಯ :

ನರೇಗಾದ ಮೂಲಕ ಹತ್ತಾರು ಕೆಲಸಗಳನ್ನು ಮಾಡುವುದಕ್ಕೆ ಅವಕಾಶವಿದ್ದು, ಪ್ರಸ್ತುತ ದಿನಗಳಲ್ಲಿ ತಾಲೂಕಿನಲ್ಲಿ ಜಲಶಕ್ತಿ ಅಭಿಯಾನದ ಕೆಲಸ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಅದರಲ್ಲೂ ತೋಡಿನ ಹೂಳೆತ್ತುವಿಕೆಯ ಕಾರ್ಯ ಎಲ್ಲೆಡೆ ಬಹಳ ಉತ್ಸಾಹದಿಂದ ನಡೆಯುತ್ತಿದೆ. ಇದರ ಜತೆಗೆ ಕೆರೆಗಳ ಅಭಿವೃದ್ಧಿ, ಕಟ್ಟ ನಿರ್ಮಾಣ, ಬಾವಿ ರಚನೆ, ಕೃಷಿ ಹೊಂಡಗಳ ರಚನೆ ಮೊದಲಾದ ಕಾಮಗಾರಿಗಳು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ ಎಂದು ಅಧಿಕಾರಿಗಳು ವಿವರಿಸುತ್ತಾರೆ.

ತಾಲೂಕಿನಲ್ಲಿ 35,493  ಜಾಬ್‌ ಕಾರ್ಡ್‌ :

ನರೇಗಾದಲ್ಲಿ ಯಾರೇ ಕೆಲಸ ಮಾಡಬೇಕಿದ್ದರೂ, ತಮ್ಮ ಗ್ರಾ.ಪಂ.ಗಳಿಂದ ಉದ್ಯೋಗ ಚೀಟಿ (ಜಾಬ್‌ ಕಾರ್ಡ್‌) ಪಡೆದುಕೊಳ್ಳಬೇಕಾಗುತ್ತದೆ. ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ವಿವರ, ಪಡಿತರ ಚೀಟಿ, ಫೋಟೋ ಸಹಿತ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿದರೆ ಜಾಬ್‌ ಕಾರ್ಡ್‌ ಲಭ್ಯವಾಗಲಿದೆ. ಬಂಟ್ವಾಳದಲ್ಲಿ ಒಟ್ಟು 35,493 ಜಾಬ್‌ ಕಾರ್ಡ್‌ ವಿತರಣೆಯಾಗಿದ್ದು, ಇದರಲ್ಲಿ ಪ.ಜಾತಿ 3,061, ಪ.ಪಂಗಡ 3,458 ಹಾಗೂ ಇತರರು 28,974 ಮಂದಿ ಕಾರ್ಡ್‌ ಪಡೆದಿದ್ದಾರೆ. ಈ ವರ್ಷ 1,450 ಮಂದಿ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ಲಾಕ್‌ಡೌನ್‌ ಪರಿಣಾಮದಿಂದ ಕೂಲಿಯಾಳುಗಳು ಹೆಚ್ಚು ಸಿಗುವುದರಿಂದ ನರೇಗಾದ ಕೆಲಸ ಚುರುಕು ಪಡೆದುಕೊಂಡಿದೆ. ಪ್ರತೀ ಗ್ರಾ.ಪಂ.ಗಳಲ್ಲೂ ನರೇಗಾದ ಕೆಲಸ ನಡೆಯುತ್ತಿದ್ದು, ಲಾಕ್‌ಡೌನ್‌ ಅವಧಿಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದ್ದೇವೆ. ಪ್ರಸ್ತುತ ಜಲಶಕ್ತಿ ಅಭಿಯಾನದಲ್ಲಿ ಹೆಚ್ಚಿನ ಕೆಲಸಗಳು ನಡೆಯುತ್ತಿದೆ.  –ಶಿವಾನಂದ ಪೂಜಾರಿ,  ಸಹಾಯಕ ನಿರ್ದೇಶಕರು,  ಬಂಟ್ವಾಳ ತಾ.ಪಂ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.