![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 8, 2021, 12:18 PM IST
ಬಳ್ಳಾರಿ: ಬಳ್ಳಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರೆಮಿಡಿಸಿವಿರ್ ಲಸಿಕೆಗಳನ್ನು ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಸೈದುಲು ಅಡಾವತ್ ಅವರು ಹೇಳಿದರು.
ಮಾಧ್ಯಮದವರ ಜೊತೆ ಅವರು ಮಾತನಾಡಿ, ರೆಮಿಡಿಸಿವಿರ್ ಬ್ಲಾಕ್ ದಂಧೆ ನಡೆಸುತ್ತಿರುವ ಬಗ್ಗೆ ನಮಗೆ ಬಂದ ಮಾಹಿತಿಯನ್ವಯ ದಾಳಿ ನಡೆಸಿ ಆರು ಡೋಸ್ ರೆಮಿಡಿಸಿವಿರ್ ಲಸಿಕೆ ವಶಪಡಿಸಿಕೊಳ್ಳಲಾಗಿದೆ. ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಕಿಶೋರ್ ಕುಮಾರ್ ಎನ್ನುವ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ ಎಂದರು.
ಇದನ್ನೂ ಓದಿ:ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಅತ್ಯಂತ ಆದರತೆಯಿಂದ ಉಪಚರಿಸಬೇಕು : ಸುನೀಲ್ ಕುಮಾರ್
ಪೊಲೀಸ್ ಇಲಾಖೆಯ ತಂಡದೊಂದಿಗೆ ದಾಳಿ ಮಾಡಿದಾಗ 3ರಿಂದ 4ಸಾವಿರ ಇರುವ ರೆಮಿಡಿಸಿವಿರ್ ಲಸಿಕೆಯ ಒಂದು ಡೋಸ್ ಲಸಿಕೆಗೆ 25ರಿಂದ 30 ಸಾವಿರದಂತೆ ಮಾರಾಟ ಮಾಡುತ್ತಿದ್ದರು. ಆರು ಡೋಸ್ ಲಸಿಕೆಗೆ ಒಂದುವರೆ ಲಕ್ಷದವರೆಗೂ ಪಡೆದು ಲಸಿಕೆ ನೀಡುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿತ್ತು. ಮಾಹಿತಿ ಅನ್ವಯ ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಬಂಧಿತ ವ್ಯಕ್ತಿಯ ಹಿಂದೆ ಹಲವು ಜನರು ಇರುವ ಶಂಕೆ ಇದ್ದು ಉಳಿದವರ ಪತ್ತೆಗೆ ಮುಂದಾಗಲಾಗುತ್ತಿದೆ ಎಂದು ಎಸ್ಪಿ ಸೈದುಲು ಅಡಾವತ್ ತಿಳಿಸಿದರು.
Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ
Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ
BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು
Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ
Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.