![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 9, 2021, 11:35 PM IST
ಮಾಲೆ (ಮಾಲ್ಡೀವ್ಸ್): ಎ.ಎಫ್.ಸಿ. ಕಪ್ ಪ್ಲೇ ಆಫ್ ಪಂದ್ಯಾವಳಿಗಾಗಿ ಮಾಲ್ಡೀವ್ಸ್ಗೆ ಆಗಮಿಸಿದ ಬೆಂಗಳೂರು ಎಫ್.ಸಿ. ತಂಡ ಕೋವಿಡ್ ನಿಯಮ ಉಲ್ಲಂಘಿಸಿ ಆಕ್ರೋಶಕ್ಕೆ ಗುರಿಯಾಗಿದೆ. ದೇಶದ ಕ್ರೀಡಾ ಸಚಿವ ಅಹ್ಮದ್ ಮಲೂಫ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಂಡವನ್ನು ಭಾರತಕ್ಕೆ ವಾಪಸಾಗುವಂತೆ ಸೂಚಿಸಿದ್ದಾರೆ. ಈ ಆದೇಶದ ಬೆನ್ನಲ್ಲೇ ಎಲ್ಲ ಗ್ರೂಪ್ “ಡಿ’ ಪಂದ್ಯಗಳನ್ನು ಮುಂದೂಡಿದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಫುಟ್ಬಾಲ್ ಕ್ಲಬ್ ತಂಡದ ಮೂವರು ವಿದೇಶಿ ಆಟಗಾರರು ಹಾಗೂ ಸಿಬಂದಿಯೊಬ್ಬರು ಮಾಲ್ಡೀವ್ಸ್ನ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಛೀಮಾರಿ ಹಾಕಿಸಿಕೊಂಡರು. ಅಲ್ಲಿನ ಕ್ರೀಡಾ ಸಚಿವರು ಹೊರಡಿಸಿದ ಕಠಿನ ಆದೇಶದ ಬಳಿಕ ತಂಡದ ಮಾಲಕ ಪಾರ್ಥ್ ಜಿಂದಾಲ್ ಕ್ಷಮೆ ಯಾಚಿಸಿದ್ದು, ನಿಯಮ ಮುರಿದವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳುತ್ತೇವೆ, ಇಂಥ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇವೆ ಎಂದು ವಿನಂತಿಸಿಕೊಂಡರು.
ಇದನ್ನೂ ಓದಿ :ಬೆಲೆ ನಿಯಂತ್ರಣಕ್ಕೆ ತೆರಿಗೆ ವಿಧಿಸಿದ್ದೇವೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಆದರೆ ಮಾಲ್ಡೀವ್ಸ್ ಕ್ರೀಡಾ ಸಚಿವರು ಇದಕ್ಕೆ ಸ್ಪಂದಿಸಲಿಲ್ಲ. ಈಗಾಗಲೇ ಇಲ್ಲಿಗೆ ಆಗಮಿಸಿರುವ ತಂಡಗಳಿಗೆ ವಾಪಸಾಗಲು ತಾವೇ ಸೂಕ್ತ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು ಎಫ್.ಸಿ ತಂಡದ ಸದಸ್ಯರು ಯಾವ ರೀತಿಯಲ್ಲಿ ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಭಾರತ ತಂಡದ ನಾಯಕ ಸುನೀಲ್ ಚೆಟ್ರಿ ಈ ತಂಡದ ನಾಯಕನೂ ಆಗಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.