ರಾಜ್ಯದಿಂದ ಕೇಂದ್ರಕ್ಕೆ 12 ಐಎಸ್‌ಒ ಕಂಟೈನರ್‌ಗಳಿಗೆ ಬೇಡಿಕೆ


Team Udayavani, May 10, 2021, 3:17 PM IST

covid effect

ಬೆಂಗಳೂರು: ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯಾಗುತ್ತಿದ್ದರೂ, ಅದರ ಪೂರೈಕೆಯಲ್ಲಿ ತುಸು ವಿಳಂಬವಾಗುತ್ತಿರುವುದರಿಂದ ರೈಲುಮಾರ್ಗಗಳ ಮೂಲಕ ಸರಬರಾಜು ಮಾಡಲುಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ವಿಶಿಷ್ಟ ಮಾದರಿಯ ಅಂದರೆಐಎಸ್‌ಒ  ಮಾದರಿಯ 12ಕಂಟೈನರ್‌ಗಳಿಗಾಗಿ ಕೇಂದ್ರಕ್ಕೆ ಬೇಡಿಕೆ ಸಲ್ಲಿಸಿದ್ದು,ಮಂಜೂರು ಮಾಡುವ ನಿರೀಕ್ಷೆ ಇದೆ. ಒಂದು ವೇಳೆ ಈ ಐಎಸ್‌ಒ ಟ್ಯಾಂಕರ್‌ಗಳುಮಂಜೂರಾದರೆ, ಈಗ ಸರಬರಾಜು ಆಗುತ್ತಿರುವಸಮಯಕ್ಕಿಂತ ದುಪ್ಪಟ್ಟು ವೇಗದಲ್ಲಿ ಆಮ್ಲಜನಕಸಾಗಿಸಲು ಸಾಧ್ಯವಾಗಲಿದೆ. ಉದಾಹರಣೆಗೆ ಕಳಿಂಗದಿಂದ ನಿತ್ಯ ಸುಮಾರು 60 ಟನ್‌ ಆಮ್ಲಜನಕ ರಾಜ್ಯಕ್ಕೆ ಮಂಜೂರಾಗಿದೆ.

ಇದು ರಸ್ತೆ ಮೂಲಕ ತಲುಪಲು ಮೂರು ದಿನಗಳು ಹಿಡಿಯುತ್ತದೆ. ಆದರೆ, ರೈಲು ಮಾರ್ಗವಾಗಿ ರಾತ್ರೋರಾತ್ರಿ ಬಂದುಬಿಡುತ್ತದೆ ಎಂದು ಆಮ್ಲಜನಕ ಪೂರೈಕೆ ಉಸ್ತುವಾರಿ ತಂಡದಲ್ಲಿರುವ ಉನ್ನತ ಅಧಿಕಾರಿಯೊಬ್ಬರು ಉದಯವಾಣಿಗೆ ಮಾಹಿತಿನೀಡಿದರು. ಐಎಸ್‌ಒ ಕಂಟೈನರ್‌ನಲ್ಲಿ ಬರುವ ಆಮ್ಲಜನಕವನ್ನು ನಂತರ ಕ್ರಯೋಜನಿಕ್‌ ಟ್ಯಾಂಕರ್‌ಗಳಿಗೆ ಶಿಫ್ಟ್ ಮಾಡಲಾಗುತ್ತದೆ. ಆ ಮೂಲಕ ನಾನಾ ಭಾಗಗಳಿಗೆ ಪೂರೈಸಲಾಗುತ್ತದೆ.

ಐಎಸ್‌ಒ ಟ್ಯಾಂಕರ್‌ ಮೊರೆ ಯಾಕೆ?

ಸಾಮಾನ್ಯವಾಗಿ ರಸ್ತೆ ಮೂಲಕ ಪೂರೈಸ ಲಾಗುವ ಆಮ್ಲಜನಕ ಟ್ಯಾಂಕರ್‌ಗಳು ಸುರಕ್ಷತೆ ದೃಷ್ಟಿಯಿಂದ ಗಂಟೆಗೆ ಗರಿಷ್ಠ 50 ಕಿ.ಮೀ. ವೇಗದಲ್ಲಿ ಸಂಚರಿಸುತ್ತವೆ. ‌ ಅಲ್ಲದೆ,ರಾತ್ರಿ 11ರಿಂದ ಬೆಳಗಿನಜಾವ 5ರವರೆಗೆ ಕಡ್ಡಾಯವಾಗಿ ಕಾರ್ಯಾಚರಣೆ ನಿಷಿದ್ಧ. ಯಾಕೆಂದರೆ, ಅದು ಮಲಗುವ ಸಮಯ.ಆದರೆ, ಐಎಸ್‌ಒ ಟ್ಯಾಂಕರ್‌ಗಳು ರೈಲು ಎಂಜಿನ್‌ಗೆ ಜೋಡಣೆ ಮಾಡಲಾಗಿರುತ್ತದೆ. ಗಂಟೆಗೆ ಸರಾಸರಿ 100 ಕಿ.ಮೀ. ವೇಗದಲ್ಲಿ ಪೂರೈಕೆ ಆಗುತ್ತವೆ. ಈ ವೇಗದಲ್ಲಿ ಕಂಟೈನರ್‌ಗಳು ಬರುವುದರಿಂದ ಹೆಚ್ಚು ಒತ್ತಡ ಉಂಟಾಗುತ್ತದೆ. ಪರಿಣಾಮ ಆಮ್ಲಜನಕ ಗುಣಮಟ್ಟವೂ ಉತ್ತಮವಾಗಿರುತ್ತದೆ ಎಂದು ತಜ್ಞರು ಹೇಳುತ್ತಾರೆ.

ಜತೆಗೆ ಹೆಚ್ಚಿನ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ಸರಬರಾಜು ಆಗುತ್ತದೆ. ಸದ್ಯ ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಹಾಹಾಕಾರ ಉಂಟಾಗಿರುವುದರಿಂದ ಹೆಚ್ಚು ಉಪಯುಕ್ತ ಆಗಲಿದೆ ಎಂದೂ ತಜ್ಞರು ತಿಳಿಸಿದರು.

ಈಚೆಗೆ ಬಹ್ರೆನ್‌ನಿಂದ 80 ಮೆಟ್ರಿಕ್‌ ಟನ್‌ ಆಮ್ಲಜನಕ ರಾಜ್ಯದ ಕರಾವಳಿ ಮೂಲಕ ಬಂದಿಳಿಯಿತು. ಇಲ್ಲಿ ಆಮ್ಲಜನಕಕ್ಕಿಂತ ಹೆಚ್ಚಾಗಿ ನಾಲ್ಕು ಕಂಟೈನರ್‌ಗಳು ಬಂದಿವೆ. ಇದು ನಮಗೆ ಪ್ರಸ್ತುತ ಸಂದರ್ಭದಲ್ಲಿ ಅತಿ ಮುಖ್ಯವಾಗಿದೆ.ಇದರೊಂದಿಗೆ ಕೇಂದ್ರದಿಂದಲೂ 12 ಕಂಟೈನರ್‌ಗಳು ಮಂಜೂರಾದರೆ ಇನ್ನಷ್ಟು ಅನುಕೂಲ ಆಗಲಿದೆ ಎಂದು ಅಧಿಕಾರಿಗಳು ವಿವರಿಸಿದರು.

730ಮೆ.ಟ. ರಾಜ್ಯಕ್ಕೆ ಹಂಚಿಕೆ

ರಾಜ್ಯದಲ್ಲಿ ಜಿಂದಾಲ್‌ನ 1,400 ಮೆ.ಟ. ಸೇರಿ ಒಟ್ಟಾರೆ ಸುಮಾರು 1,830 ಮೆ.ಟ. ಆಮ್ಲಜನಕಉತ್ಪಾದನೆಯಾಗುತ್ತಿದ್ದು, ಇದು ದಕ್ಷಿಣ ಏಷಿಯಾದಲ್ಲಿ ಅತ್ಯಧಿಕ ಉತ್ಪಾದನೆಯಾಗಿದೆ. ಈಪೈಕಿ 730 ಮೆ.ಟ. ರಾಜ್ಯಕ್ಕೆ ಹಂಚಿಕೆಯಾಗಿದೆ.ಉಳಿದಿದ್ದರಲ್ಲಿ ನೆರೆಯ ರಾಜ್ಯಗಳಿಗೆ ಪೂರೈಕೆ ಆಗುತ್ತಿದೆ.

ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.