ರಂಜಾನ್‌ ಉಪವಾಸ ಕೈಗೊಳ್ಳುವವರಿಗೆ ಗೌರವ ನೀಡಿ


Team Udayavani, May 11, 2021, 1:42 PM IST

ರಂಜಾನ್‌ ಉಪವಾಸ ಕೈಗೊಳ್ಳುವವರಿಗೆ ಗೌರವ ನೀಡಿ

ಕೆ.ಆರ್‌.ನಗರ: ರಂಜಾನ್‌ ವೇಳೆ ಕಠಿಣ ಉಪವಾಸ ಮಾಡುವುದರ ಜತೆಗೆ ಪವಿತ್ರ ವ್ರತ ಕೈಗೊಳ್ಳುವವರಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು ಎಂದು ಖ್ಯಾತ ಮೂಳೆ ತಜ್ಞ ಡಾ.ಮೆಹಬೂಬ್‌ಖಾನ್‌ ಹೇಳಿದರು.

ಪಟ್ಟಣದ ಮುಸ್ಲಿಂ ಬಡಾವಣೆಯ ಆರ್‌ಕೆಎಫ್ ಫ‌ಂಕ್ಷನ್‌ ಹಾಲ್‌ನಲ್ಲಿ ಸೋಮವಾರ ರಂಜಾನ್‌ ಹಬ್ಬದ ಅಂಗವಾಗಿ ಮುಸ್ಲಿಂ ಭಾಂಧವರಿಗೆ ಆಹಾರ ಪದಾರ್ಥ ವಿತರಿಸಿ ಮಾತನಾಡಿದರು. ಸರ್ವರನ್ನೂ ಎಲ್ಲರೂ ಪ್ರೀತಿಸಬೇಕು ಎಂದು ಎಲ್ಲಾ ಧರ್ಮಗಳು ಹೇಳುತ್ತವೆ. ಆದ್ದರಿಂದ ನಾವು ಆ ಧರ್ಮಗಳ ಸಾರವನ್ನು ಅರಿತು ಪಾಲಿಸಬೇಕು ಎಂದರು.

ಮುಂದುವರೆಸುವೆ: ತಾನು ಪ್ರತೀ ವರ್ಷ 500ಕ್ಕೂ ಹೆಚ್ಚು ಮುಸಲ್ಮಾನ ಬಾಂಧವರಿಗೆ ರಂಜಾನ್‌ ವೇಳೆ ಆಹಾರ ಪದಾರ್ಥ ಸೇರಿ ಇತರೆ ವಸ್ತುಗಳನ್ನು ದಾನ ಮಾಡುತ್ತಿದ್ದು, ಈಪರಂಪರೆಯನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗುತ್ತೇನೆಂದು ತಿಳಿಸಿದರು.

ಆತ್ಮತೃಪ್ತಿಯಿದೆ: ಮುಂಬರುವ ದಿನಗಳಲ್ಲಿ ಪಟ್ಟಣದ ಸ್ವಚ್ಛತೆಯಲ್ಲಿ ಅತ್ಯಂತ ಪ್ರಮುಖವಾದ ಪಾತ್ರ ವಹಿಸುತ್ತಿರುವ ಪೌರಕಾರ್ಮಿಕರನ್ನು ಗುರುತಿಸಿ ಆಹಾರ ಪದಾರ್ಥವಿತರಿಸಲು ನಿರ್ಧರಿಸಿದ್ದೇನೆ. ಸಂಪಾದಿಸಿದ ಆದಾಯದಲ್ಲಿ ಅಲ್ಪ ಪ್ರಮಾಣವನ್ನು ಬಡವರು ಮತ್ತು ನಿರ್ಗತಿಕರಿಗೆ ನೀಡುವುದರಿಂದ ತನಗೆ ಆತ್ಮತೃಪ್ತಿ ಸಿಗುತ್ತದೆ ಎಂದರು.

ಇದೇ ವೇಳೆ ಮುಸ್ಲಿಂ ಬಡಾವಣೆಯ 500ಕ್ಕೂ ಅಧಿಕ ಮಂದಿಗೆ ದವಸ, ಧಾನ್ಯ, ಇತರೆ ಪದಾರ್ಥಗಳನ್ನುನೀಡಿದರಲ್ಲದೆ ರಂಜಾನ್‌ ವ್ರತ ಕೈಗೊಂಡಿದ್ದ ಕೆಲವರಿಗೆ ಆರ್ಥಿಕ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಎಂ.ಮಂಜುಳಾ, ಪೊಲೀಸ್‌ ಉಪನಿರೀಕ್ಷಕ ವಿ.ಚೇತನ್‌, ಪುರಸಭೆ ಮಾಜಿ ಸದಸ್ಯ ಸೈಯದ್‌ಅಸ್ಲಾಂ, ಮುಖ್ಯಾಧಿಕಾರಿ ಡಿ.ಪುಟ್ಟರಾಜು, ಆರ್‌ಕೆಎಫ್ ಗ್ರೂಪ್‌ನ ಅಧ್ಯಕ್ಷ ರಮೀಜ್‌ವುಲ್ಲಾಖಾನ್‌, ವೈದ್ಯ ಡಾ. ರಿಜ್ವಾನ್‌ವುಲ್ಲಾಖಾನ್‌, ಶಾಫಿ ಮಸೀದಿ ಅಧ್ಯಕ್ಷಇಸ್ಮಾಯಿಲ್‌ಖನೋಲಿ, ಮುಸ್ಲಿಂ ಮುಖಂಡರಾದ ಏಜಾಜ್‌ ಅಹಮದ್‌, ಎಂಜಾಸ್‌ಇಸ್ಮಾಯಿಲ್‌, ಶಾಕೀರ್‌ಅಹಮದ್‌, ಆನಂದ್‌ಇಮ್ರಾನ್‌, ಇರ್ಷಾದ್‌, ನಾಸಿರ್‌ಪಾಷಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.