![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 12, 2021, 3:59 PM IST
ಮುಂಬೈ:ಕಳೆದ ವರ್ಷ ಕೋವಿಡ್ ಸೋಂಕು ತಡೆಗಟ್ಟಲು ಜಾರಿಯಾದ ಲಾಕ್ ಡೌನ್ ಸಂದರ್ಭದಲ್ಲಿ ಸಾಮಾಜಿಕ ಕೆಲಸ ಶುರು ಮಾಡಿದ ಬಾಲಿವುಡ್ ನಟ ಸೋನು ಸೂದ್,ಈ ವರ್ಷವೂ ತನ್ನ ಜನಪರ ಕೆಲಸವನ್ನು ಮುಂದುವರೆಸಿದ್ದಾರೆ.
ಕೋವಿಡ್ ಎರಡನೇ ಅಲೆ ಭೀಕರತೆಯ ಸಮಯದಲ್ಲಿ ಸೋನು ಸೂದ್ ಸೋಂಕಿತರ ನೆರವಿಗೆ ನಿಂತಿದ್ದಾರೆ. ಅಗತ್ಯ ಇದ್ದವರಿಗೆ ಹಣಕಾಸಿನ ಸಹಾಯ, ಬೆಡ್ ಹಾಗೂ ಆಕ್ಸಿಜನ್ ಪೂರೈಸುತ್ತಿದ್ದಾರೆ. ಇವರ ಪರೋಪಕಾರಿ ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸೋನು ಸೂದ್ ಮಾನವೀಯ ಕೆಲಸ ನೋಡಿ ಅಭಿಮಾನಿಗಳು ಇಂಥವರು ದೇಶದ ಪ್ರಧಾನಿಯಾಗಬೇಕು ಎನ್ನುವ ಅಭಿಪ್ರಾಯ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿದೆ.
ತಾವು ಪ್ರಧಾನಿಯಾಗಬೇಕೆಂದು ಅಭಿಮಾನಿಗಳು ಬಯುತ್ತಿರುವುದಕ್ಕೆ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ. ‘ನೀವು ಚುನಾವಣೆಗೆ ಸ್ಪರ್ಧಿಸುತ್ತೀರಾ?’ ಎಂದು ಮಾಧ್ಯಮಗಳ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ನಾನು ಸಾಮಾನ್ಯ ಮನುಷ್ಯನಾಗಿ ಇರುವುದೇ ಉತ್ತಮ’ ಎಂದು ಅವರು ಹೇಳಿದ್ದಾರೆ.
ಬಹುತೇಕ ಸಿನಿಮಾಗಳಲ್ಲಿ ಖಳನಟನಾಗಿ ಅಭಿನಯಿಸುವ ಸೋನು ಅವರು ರಿಯಲ್ ಲೈಫಿನಲ್ಲಿ ರಿಯಲ್ ಹೀರೋ ಆಗಿದ್ದಾರೆ. ಸಾಕಷ್ಟು ಜನರಿಗೆ ಆಪತ್ಬಾಂದವ ಆಗಿದ್ದಾರೆ. ಕಳೆದ ವರ್ಷ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕೂಲಿ ಕಾರ್ಮಿಕರನ್ನು ತಮ್ಮ ತಮ್ಮ ಊರಿಗೆ ಕಳುಹಿಸಿ ಕೊಡುವುದರ ಮೂಲಕ ಸಾಮಾಜಿಕ ಕಾರ್ಯಕ್ಕೆ ಕೈ ಹಾಕಿದ ಅವರು, ಅದನ್ನೂ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.