ರಾಜ್ಯದ ಏಳು ಸಾವಿರಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸ್ಮಶಾನವೇ ಇಲ್ಲ!


Team Udayavani, May 13, 2021, 8:13 AM IST

cemetery

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷದಿಂದ ಕೊರೊನಾ ಮಹಾಮಾರಿ ನಿರಂತರವಾಗಿ ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ.  ಆದರೆ, ರಾಜ್ಯದಲ್ಲಿ ಸಾವಿಗೀಡಾದವರನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲೂ ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಸುಮಾರು 7064 ಗ್ರಾಮಗಳಲ್ಲಿ  ಸ್ಮಶಾನವೇ ಇಲ್ಲ.

ಗ್ರಾಮೀಣ ಪ್ರದೇಶಗಳಲ್ಲಿ ಅಧಿಕೃತ ಸ್ಮಶಾನ ಇಲ್ಲದೇ ಈಗಲೂ ರಾಜ್ಯದ ಸುಮಾರು 7 ಸಾವಿರ ಕಂದಾಯ  ಗ್ರಾಮಗಳಲ್ಲಿ ಅರಣ್ಯ ಪ್ರದೇಶ,  ಗೋಮಾಳ, ನದಿ, ಹಳ್ಳ, ಕೆರೆಯ ದಂಡೆ, ರಸ್ತೆ ಬದಿಗಳಲ್ಲಿ ಅಂತ್ಯ  ಸಂಸ್ಕಾರ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ.

ರಾಜ್ಯದ 31 ಜಿಲ್ಲೆಗಳ 229 ತಾಲೂಕುಗಳಲ್ಲಿ 28610 ಕಂದಾಯ ಗ್ರಾಮಗಳಿವೆ. ಅಲ್ಲದೇ ಸುಮಾರು 2 ಸಾವಿರಕ್ಕೂ ಹೆಚ್ಚು ಜನ ವಸತಿ ಪ್ರದೇಶಗಳಿವೆ. ಸುಮಾರು 281 ನಗರ ಸ್ಥಳೀಯ ಸಂಸ್ಥೆಗಳಿವೆ. ಇವುಗಳಲ್ಲಿ ಸುಮಾರು 7064 ಗ್ರಾಮಗಳಲ್ಲಿ ಅಧಿಕೃತ ಸ್ಮಶಾನಗಳಿಲ್ಲ. ಈ ಗ್ರಾಮಗಳಲ್ಲಿ ಸಾವಿಗೀಡಾದರೆ, ಊರಿಗೆ ಹೊಂದಿಕೊಂಡಿರುವ ಸರ್ಕಾರಿ  ಗೋಮಾಳ, ಅರಣ್ಯ ಪ್ರದೇಶ, ನದಿ, ಹಳ್ಳದ ದಂಡೆಯ ಪಕ್ಕದಲ್ಲಿಯೇ ಅಂತ್ಯ ಸಂಸ್ಕಾರ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ.

ಇದನ್ನೂ ಓದಿ:ಮೂರನೇ ಅಲೆ ತಪ್ಪಿಸಿ : ಅಕ್ಟೋಬರ್‌ ನಲ್ಲಿ ಹಾವಳಿ ಸಾಧ್ಯತೆ, ಎಳೆಯರೇ ಗುರಿ?

ರಾಜ್ಯದಲ್ಲಿ ಸುಮಾರು 6,5 ಕೋಟಿ ಜನಸಂಖ್ಯೆ ಇದ್ದು, ಶೇ.84  ಹಿಂದುಗಳು, ಶೇ 12.92 ಮುಸ್ಲಿಮರು, ಶೇ 1.87 ಕ್ರಿಶ್ಚಿಯನ್ನರು, ಶೇ 1.21 ಇತರ ಧರ್ಮಿಯರಿದ್ದಾರೆ. ಜಮೀನು ಅಗತ್ಯ ಇರುವ ಕಡೆ ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಧರ್ಮದ ಆಧಾರದಲ್ಲಿ ಪ್ರತ್ಯೇಕ ಸ್ಮಶಾನಗಳನ್ನು ಮಾಡಲಾಗಿದೆ. ಕೆಲವು ಕಡೆ ಜಾತಿಯ ಆಧಾರದಲ್ಲಿಯೂ ಸ್ಮಶಾನಗಳನ್ನು ಮಾಡಲಾಗಿದ್ದು, ಇದರಿಂದ ದಲಿತ ಸಮುದಾಯದವರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.

ಕನಿಷ್ಠ 5 ಎಕರೆ ನೀಡಲು ಸೂಚನೆ: ರಾಜ್ಯದ ಎಲ್ಲ ಗ್ರಾಮಗಳಲ್ಲಿಯೂ ಸ್ಮಶಾನಕ್ಕೆ ಕನಿಷ್ಠ 5 ಎಕರೆ ಜಮೀನು ಮೀಸಲಿಡುವಂತೆ ಕಾಗೋಡು ತಿಮ್ಮಪ್ಪ ಕಂದಾಯ ಸಚಿವರಾಗಿದ್ದ ಸಂದರ್ಭದಲ್ಲಿ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸರ್ಕಾರಿ ಜಮೀನು ಇದ್ದರೆ ಅದನ್ನೇ ಪರಿವರ್ತಿಸಿ ಸ್ಮಶಾನ ಮಾಡುವುದು, ಇಲ್ಲದಿದ್ದರೆ,  ಖಾಸಗಿಯವರಿಂದ ಜಮೀನು ಖರೀದಿಸಿ ಸ್ಮಶಾನ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ನಂತರ ಕಂದಾಯ ಸಚಿವರಾಗಿದ್ದ ಶ್ರೀನಿವಾಸ್‌ ಪ್ರಸಾದ್‌ ಅವರ ಅವಧಿಯಲ್ಲಿಯೂ ವಿಶೇಷವಾಗಿ ದಲಿತ ಸಮುದಾಯಕ್ಕೆ ಪ್ರತ್ಯೇಕ ಸ್ಮಶಾನ ವ್ಯವಸ್ಥೆ ಕಲ್ಪಿಸಲು ಅನುದಾನವನ್ನೂ ಮೀಸಲಿಟ್ಟು ಜಮೀನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅವರ ಆದೇಶವೂ ಇದುವರೆಗೂ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ

ಅಂತ್ಯ ಸಂಸ್ಕಾರಕ್ಕೆ ಪರದಾಡುವ ಪರಿಸ್ಥಿತಿ: ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವಿನ ಸಂಖ್ಯೆ ಹೆಚ್ಚಾಗುತ್ತಿ ರುವುದರಿಂದ ನಗರ ಪ್ರದೇಶಗಳಲ್ಲಿ ವಿಶೇಷವಾಗಿ ಬೆಂಗಳೂರು, ಕಲಬುರ್ಗಿ, ಬೆಳಗಾವಿ ಸೇರಿದಂತೆ ಮಹಾ ನಗರ ಪ್ರದೇಶಗಳಲ್ಲಿ ಸಾವಿಗೀಡಾದವರ ಅಂತ್ಯ ಸಂಸ್ಕಾರಕ್ಕೆ ಜಾಗ ಸಿಗದೆ ಜನರು ದಿನ ಗಟ್ಟಲೇ ಕಾಯುವ ಪ್ರಸಂಗ ಹೆಚ್ಚಾಗಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಪರಿಸ್ಥಿತಿಯನ್ನು ಅರಿತ ಕಂದಾಯ ಸಚಿವ ಆರ್‌. ಅಶೋಕ್‌ ಬೆಂಗಳೂರಿನ ಎಂಟು ಕಡೆ ತಾತ್ಕಾಲಿಕ ಸ್ಮಶಾನ ನಿರ್ಮಾಣ ಮಾಡುವ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ. ಅಲ್ಲದೇ ಉಳಿದ ನಗರ ಪ್ರದೇಶಗಳಲ್ಲಿ ನಗರ ವ್ಯಾಪ್ತಿಯಿಂದ 2 ರಿಂದ 3 ಕಿ.ಮೀ. ವ್ಯಾಪ್ತಿಯಲ್ಲಿ ಸ್ಮಶಾನಕ್ಕೆ ಜಾಗ ಮೀಸಲಿಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ, ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಯಥಾಸ್ಥಿತಿ ಇದ್ದು, ಸಾಮಾನ್ಯ ಜನರು ಸಾವೀಗಿಡಾದರೆ, ಅಂತ್ಯ ಸಂಸ್ಕಾರ ಮಾಡುವುದಕ್ಕೆ ಪರದಾಡುವ ಪರಿಸ್ಥಿತಿ ಇದೆ.

 

ಶಂಕರ ಪಾಗೋಜಿ

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.