ಗರ್ಡಾಡಿಯ ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!


Team Udayavani, May 17, 2021, 4:22 AM IST

ಗರ್ಡಾಡಿಯ ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಬೆಳ್ತಂಗಡಿ : ಗರ್ಡಾಡಿಯ ಕುಬಳಬೆಟ್ಟು ಗುತ್ತು ಸಮೀಪ ಫಲ್ಗುಣಿ ನದಿಯ ಹಳ್ಳದಲ್ಲಿ 10ರಿಂದ 15ರಷ್ಟಿರುವ ನೀರುನಾಯಿ ಗುಂಪು ಪತ್ತೆಯಾಗಿದೆ.

ಸಂಪತ್‌ ಕೊಂಬ ಅವರು ಮನೆ ಸಮೀಪ ಶನಿವಾರ ಸಂಜೆ ಕಂಡುಬಂದ ನೀರುನಾಯಿಗಳ ವೀಡಿಯೋ ಚಿತ್ರೀ ಕರಿಸಿದ್ದರು. ರವಿವಾರ ಸಂಜೆ ಮತ್ತೆ ಅದೇ ಸ್ಥಳದಲ್ಲಿ ಅವು ಕಾಣಸಿಕ್ಕಿವೆ. ವೇಣೂರು ವಲಯ ಅರಣ್ಯಾಧಿಕಾರಿ ಮಹೀಮ್‌ ಜನ್ನು ಮತ್ತು ಉಪವಲಯ ಅರಣ್ಯ ಅಧಿಕಾರಿ ಸುನೀಲ್‌ ಕುಮಾರ್‌ ಕೆ.ಎಸ್‌. ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.

ಸಿಹಿನೀರು ವಾಸಿಗಳು
ನೀರುನಾಯಿಗಳ ಪೈಕಿ ಪ್ರಪಂಚದಲ್ಲಿ 13 ಪ್ರಭೇದಗಳಿವೆ. ಭಾರತದಲ್ಲಿ ಮೂರೇ ಪ್ರಭೇದಗಳಿದ್ದು, ಇಲ್ಲಿ ಪತ್ತೆಯಾಗಿರು ವುದು Indian smooth coated otters ಎಂಬ ಪ್ರಭೇದಕ್ಕೆ ಸೇರಿದವು. ಸಿಹಿನೀರು ವಾಸಿಗಳಾಗಿರುವ ಇವು ಮೀನು, ಏಡಿ ಇತ್ಯಾದಿಗಳನ್ನು ತಿಂದು ಬದುಕುತ್ತವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಬಳಬೆಟ್ಟು ಪರಿಸರದಲ್ಲಿ ಕಿಂಡಿಅಣೆಕಟ್ಟು ಇದ್ದು, ಕಳೆದ ಡಿಸೆಂಬರ್‌ನಲ್ಲಿ ಒಮ್ಮೆ ಕಾಣಸಿಕ್ಕಿದ್ದವು. ರಾತ್ರಿವೇಳೆ ಕೂಗುವುದು ಕೇಳಿಸುತ್ತಿತ್ತು. ಆದರೆ ನೀರುನಾಯಿ ಎಂದು ತಿಳಿದಿರಲಿಲ್ಲ. ಇಂದು ಹಳ್ಳದಲ್ಲಿ ಕಾಣಿಸಿಕೊಂಡದ್ದರಿಂದ ಸ್ಪಷ್ಟವಾಗಿದೆ ಎಂದು ಸಂಪತ್‌ ಕೊಂಬ ಅವರು ಉದಯವಾಣಿಗೆ ತಿಳಿಸಿದ್ದಾರೆ.

ನೀರುನಾಯಿಗಳು ಕುದುರೆಮುಖ ಆಸುಪಾಸಿನ ನದಿಗಳಲ್ಲಿ ಕಾಣಸಿಗುತ್ತಿದ್ದು, ಕಳೆದ ವರ್ಷದ ಪ್ರವಾಹಕ್ಕೆ ನದಿಗಳಲ್ಲಿ ಸಾಗಿಬಂದಿರುವ ಸಾಧ್ಯತೆ ಇದೆ. ಇವುಗಳಿಂದ ಮನುಷ್ಯರಿಗಾಗಲೀ ಇತರ ಪ್ರಾಣಿಗಳಿಗಾಗಲೀ ಅಪಾಯವಿಲ್ಲ. ಸಿಹಿನೀರಿನ ಚೆಕ್‌ಡ್ಯಾಮ್‌ ಪ್ರದೇಶಗಳಲ್ಲಿ ಮರದ ಕಟ್ಟಿಗೆ ನಿಂತಿರುವ ಸ್ಥಳಗಳಲ್ಲಿ ಪೊಟರೆಗಳಂತೆ ಮಾಡಿ ಇವು ವಾಸಿಸುತ್ತವೆ.

– ಮಹೀಮ್‌ ಜನ್ನು, ವಲಯ ಅರಣ್ಯಾಧಿಕಾರಿ, ವೇಣೂರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.