ಕೋವಿಡ್‌ ಮುಕ್ತ ಕೋಲಾರಕ್ಕೆ ಶ್ರಮಿಸಿ


Team Udayavani, May 18, 2021, 2:40 PM IST

ಕೋವಿಡ್‌ ಮುಕ್ತ ಕೋಲಾರಕ್ಕೆ ಶ್ರಮಿಸಿ

ಕೋಲಾರ: ನಗರದಲ್ಲಿ ಕೋವಿಡ್‌ ಸೋಂಕು ತಡೆಗೆ ನಗರಸಭಾ ಸದಸ್ಯರ ಟಾಸ್ಕ್ಪೋರ್ಸ್‌ ಸಮಿತಿ ಆಯಾ ವಾರ್ಡ್ ನಲ್ಲಿ ಸೋಂಕು ನಿವಾರಣೆ, ಜನರಲ್ಲಿಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಿ ಕೋಲಾರವನ್ನು ಸೋಂಕು ಮುಕ್ತಗೊಳಿಸುವಂತೆ ನಗರಸಭೆ ಅಧ್ಯಕ್ಷೆ ಶ್ವೇತಾ ಶಬರೀಶ್‌ ಮನವಿ ಮಾಡಿದರು.

ನಗರಸಭೆ ಸಭಾಂಗಣದಲ್ಲಿ ಸೋಮ ವಾರ ಜಿಲ್ಲಾಧಿಕಾರಿಗಳು ಪ್ರತಿ ವಾರ್ಡ್ ಗೊಬ್ಬರಂತೆ ನೇಮಿಸಿರುವ ಟಾಸ್ಕ್ ಫೋರ್ಸ್‌ ಸಮಿತಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರಸಭಾ ಸದಸ್ಯರು, ಆಗ್ನಿಶಾಮಕ ದಳದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಮನೆಯಿಂದ ಹೊರಬರಬೇಡಿ: ಕೋವಿಡ್‌ ಹೆಮ್ಮಾರಿಯಾಗಿ ಬೆಳೆಯುತ್ತಿದೆ, ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇದೆ, ಆಕ್ಸಿಜನ್‌ ಲಭ್ಯತೆಗೂ ಪರದಾಡಬೇಕಾಗಿದೆ. ಆದ್ದರಿಂದ ಜನತೆಯಲ್ಲಿಸೋಂಕಿನ ಕುರಿತು ಜಾಗೃತಿ ಮೂಡಿಸೋಣ, ಲಾಕ್‌ಡೌನ್‌ ಸಂದರ್ಭದಲ್ಲಿವಿನಾಕಾರಣ ಮನೆಯಿಂದ ಹೊರ ಬರದಂತೆ ಎಚ್ಚರಿಸೋಣಎಂದು ತಿಳಿಸಿದರು.ನಗರಸಭೆ ಆಯುಕ್ತ ಶ್ರೀಕಾಂತ್‌ ಸಭೆಗೆಮಾಹಿತಿ ನೀಡಿ, ಜಿಲ್ಲಾಧಿಕಾರಿಗಳು ನಗರದಲ್ಲಿ ಸೋಂಕು ಮುಕ್ತಗೊಳಿಸುವಸಂಬಂಧ ಪ್ರತಿ ವಾರ್ಡ್‌ಗೂ ಓರ್ವಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯನ್ನಾಗಿ ಎಲ್ಲಾ35ವಾರ್ಡುಗಳಿಗೂ ನೇಮಿಸಿದ್ದು, ಈ ಸಮಿತಿಗೆ ಆಯಾ ವಾರ್ಡ್‌ನ ನಗರಸಭಾಸದಸ್ಯರು ಅಧ್ಯಕ್ಷರಾಗಿರುತ್ತಾರೆ ಎಂದು ವಿವರಿಸಿದರು.

ಜನರಲ್ಲಿ ಜಾಗೃತಿ: ಈ ಸಮಿತಿ ತಮ್ಮ ವಾರ್ಡ್‌ಗಳ ಜನತೆಯಲ್ಲಿ ಸಾಮಾಜಿಕಅಂತರ ಕಾಪಾಡಿಕೊಳ್ಳುವುದು, ಸ್ವಚ್ಛತೆ ಕಾಪಾಡುವುದು, ಕೋವಿಡ್‌ ಮಾರ್ಗಸೂಚಿ ಅನುಸರಿಸುವ ಕುರಿತು ಟಾಸ್ಕ್ ಪೋರ್ಸ್‌ ಜನತೆಗೆ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.

ಅಗ್ನಿಶಾಮಕದಳದ ನೆರವಿನಿಂದ ಇಡೀ ನಗರದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣಾ ಕಾರ್ಯವೂ ಈ ಸಮಿತಿ ನೇತೃತ್ವದಲ್ಲೇ ನಡೆಯಲಿದ್ದು,ಕೋವಿಡ್‌ ಮುಕ್ತ ಕೋಲಾರಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನಗರಸಭೆ ಉಪಾಧ್ಯಕ್ಷ ಪ್ರವೀಣ್‌ ಗೌಡ, ನೋಡಲ್‌ ಅಧಿಕಾರಿಗಳು ಆಯಾ ವಾರ್ಡ್‌ನಲ್ಲಿನ ಅಂಗಡಿ ಮುಂಗಟ್ಟು ಗಳಲ್ಲಿ ಕೋವಿಡ್‌ ಮಾರ್ಗಸೂಚಿ ಪಾಲನೆ ಕುರಿತು ಗಮನ ಹರಿಸುವರು,ಅವರೊಂದಿಗೆ ಆಯಾ ವಾರ್ಡ್‌ನ ನಗರಸಭಾ ಸದಸ್ಯರು ಸಹಕಾರ ನೀಡುವಂತೆಮನವಿ ಮಾಡಿದರು.

ಅಗ್ನಿಶಾಮಕ ದಳದ ಅಧಿಕಾರಿ ರಾಘವೇಂದ್ರ, ಸೋಂಕು ನಿವಾರಕ ಸಿಂಪಡಿಸಲು ತಮ್ಮ ಇಲಾಖೆ ಎಲ್ಲಾ ರೀತಿಯಸಹಕಾರ ನೀಡಲಿದೆ. ಈಗಾಗಲೇ ನಾವುಗ್ರಾಪಂ ಮಟ್ಟದಲ್ಲೂ ಈ ಕಾರ್ಯವನ್ನುಯಶಸ್ವಿಯಾಗಿ ಮಾಡಿದ್ದೇವೆ ಎಂದುತಿಳಿಸಿದರು. ಸಭೆಯಲ್ಲಿ ನಗರಸಭೆಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್‌ಸೇರಿ ನಗರಸಭಾ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.