ಮೃತದೇಹ ಸಾಗಿಸಲು ಹೆಚ್ಚಿನ ಹಣ ಕೇಳಿದ್ರೆ ಕ್ರಮ
Team Udayavani, May 19, 2021, 9:40 PM IST
ಶಿವಮೊಗ್ಗ: ಕೊರೊನಾದಿಂದ ಮೃತಪಟ್ಟವರ ಮೃತದೇಹ ಸಾಗಿಸಲು ಖಾಸಗಿ ಆ್ಯಂಬುಲೆನ್ಸ್ನವರು ಹೆಚ್ಚಿನ ಹಣ ಕೇಳಿದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ಅವರು ಮಂಗಳವಾರ ಪ್ರಧಾನಿ ಮೋದಿಯವರು ಜಿಲ್ಲಾ ಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ನಿಯಂತ್ರಣ ವಿಚಾರವಾಗಿ ಪ್ರಧಾನಿ ಮೋದಿಯವರು ಜಿಲ್ಲಾ ಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಎಲ್ಲಾ ರೀತಿಯ ಎಚ್ಚರಿಕೆ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಅಗತ್ಯ ನೆರವು ನೀಡುವುದಾಗಿ ಹೇಳಿದ್ದಾರೆ ಮತ್ತು ಎಲ್ಲಾ ಜಿಲ್ಲೆಗಳ ಮಾಹಿತಿ ಪಡೆದಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಶವಗಳನ್ನು ಸಾಗಿಸುವ ಖಾಸಗಿ ಆ್ಯಂಬುಲೆನ್ಸ್ಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ. ಶಿವಮೊಗ್ಗದಿಂದ ಶಿಕಾರಿಪುರಕ್ಕೆ 26 ಸಾವಿರ ರೂ. ಪಡೆದ ಉದಾಹರಣೆ ಇದೆ. ಇದನ್ನೆಲ್ಲ ಸಹಿಸಲಾಗದು. ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಈಗಾಗಲೇ ನಿಗದಿಪಡಿಸಿದ ದರವನ್ನೇ ಪಡೆಯಬೇಕು ಎಂದು ತಿಳಿಸಿದರು.
ಕೆಲವು ಖಾಸಗಿ ಆ್ಯಂಬುಲೆನ್ಸ್ ಮಾಲೀಕರು ಪಿಪಿಇ ಕಿಟ್ಗೆ ಹೆಚ್ಚುವರಿ ಹಣ ಖರ್ಚಾಗುವುದರಿಂದ ಹೆಚ್ಚು ಹಣ ಪಡೆಯಲಾಗುತ್ತದೆ ಎಂದು ಬಲವಂತವಾಗಿ ವಸೂಲಿ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆ ವತಿಯಿಂದ ಮೃತದೇಹದ ಜೊತೆಗೆ ಎರಡು ಪಿಪಿಇ ಕಿಟ್ ನೀಡುತ್ತಿದ್ದು, ಇನ್ನೆರಡು ನೀಡಿದರೆ ಹೆಚ್ಚುವರಿ ಹಣ ಕೇಳುವುದು ತಪ್ಪಲಿದೆ ಎಂದು ಪತ್ರಕರ್ತರು ಸಲಹೆ ನೀಡಿದರು.
ಇದಕ್ಕೆ ತಕ್ಷಣವೇ ಒಪ್ಪಿಕೊಂಡ ಸಚಿವರು ಸ್ಥಳದಲ್ಲಿಯೇ ಪ್ರತಿ ಮೃತದೇಹದ ಜೊತೆಗೆ 4 ಪಿಪಿಇ ಕಿಟ್ ಕೊಡುವಂತೆ ಅ ಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ ಆ್ಯಂಬುಲೆನ್ಸ್ನವರು ನಿಗದಿತ ದರ ಮಾತ್ರ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು. ಇನ್ನು ಮುಂದೆ ನಿಗದಿತ ದರಕ್ಕಿಂತ ಹೆಚ್ಚುವರಿ ಹಣ ಪಡೆಯುವವರ ವಿರುದ್ಧ ಕ್ರಮ ಕೈಗೊಂಡು ಆ್ಯಂಬುಲೆನ್ಸ್ ಸೀಜ್ ಮಾಡಲಾಗುವುದು ಎಂದು ಹೇಳಿದರು.
ಅದೇ ರೀತಿ, ತರಕಾರಿ ಮಾರಾಟ ವಾಹನಗಳಿಗೆ ಅವಕಾಶ ನೀಡಲಾಗಿದ್ದು, ಅವರು ತರಕಾರಿ ದರಪಟ್ಟಿಯನ್ನು ನಮೂದಿಸಬೇಕು, ಹೆಚ್ಚಿನ ಬೆಲೆ ಪಡೆಯಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಅಪರ ಜಿಲ್ಲಾ ಧಿಕಾರಿ ಜಿ.ಅನುರಾಧ, ಜಿಪಂ ಸಿಇಒ ಎಂ.ಎಲ್. ವೈಶಾಲಿ, ಜಿಲ್ಲಾ ಪೊಲೀಸ್ ಅ ಧೀಕ್ಷಕ ಲಕ್ಷಿಪ್ರಸಾದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.