ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸೋರಿ­ಕೆ ! ತಪ್ಪಿದ ದುರಂತ

ಸೋರಿಕೆ ಸರಿಪಡಿಸಲಾಗಿದೆ: ಸಹಾಯಕ ಆಯುಕ್ತೆ! ­ಕೆಲ ಸೋಂಕಿತರು ಬೇರೆ ಆಸ್ಪತ್ರೆಗೆ ರವಾನೆ

Team Udayavani, May 23, 2021, 7:30 PM IST

may22srs2

ಶಿರಸಿ: ಜಿಲ್ಲೆಯ ಅತಿ ಹೆಚ್ಚು ರೋಗಿಗಳಿಂದ ಕೂಡಿರುವ ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಂಬೋ ಸಿಲಿಂಡರ್‌ ಮೂಲಕ ಆಕ್ಸಿಜನ್‌ ಪೂರೈಕೆಯಾಗುವ ಘಟಕದಲ್ಲಿ ಆಕ್ಸಿಜನ್‌ ಸೋರಿಕೆಯಾಗಿ ರೋಗಿಗಳಲ್ಲಿ, ಅಧಿ ಕಾರಿಗಳಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಶನಿವಾರ ಬೆಳಗಿನ ಜಾವ ನಡೆಯಿತು.

ಸರಕಾರಿ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ದಾಖಲಾಗಿದ್ದ ಕೆಲ ಸೋಂಕಿತರನ್ನು ಸಿದ್ದಾಪುರ, ಮುಂಡಗೋಡ, ಯಲ್ಲಾಪುರ ಸರಕಾರಿ ಆಸ್ಪತ್ರೆಗಳಿಗೆ ಸಾಗಿಸುವ ಮೂಲಕ ಅಧಿ ಕಾರಿಗಳು ಸಮಯಪ್ರಜ್ಞೆ ಮೆರೆದು ಸಂಭವನೀಯ ದುರಂತ ತಪ್ಪಿಸಿದರು. ಉಳಿದವರಿಗೆ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಹಾಯಕ ಆಯುಕ್ತೆ ಆಕೃತಿ ಬನ್ಸಾಲ್‌, ಆಕ್ಸಿಜನ್‌ ಲೀಕ್‌ ಆಗುವುದನ್ನು ಸರಿಪಡಿಸಲಾಗುತ್ತಿದೆ. ಯಾವುದೇ ರೀತಿಯಲ್ಲಿ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿಲ್ಲ. ಸುಮಾರು 10 ಸೋಂಕಿತರನ್ನು ಬೇರೆ ತಾಲೂಕು ಆಸ್ಪತ್ರೆಗಳಿಗೆ ಸೇರ್ಪಡೆ ಮಾಡಲಾಗಿದೆ. ಈ ರೀತಿ ಪೈಪ್‌ಲೈನ್‌ನಲ್ಲಿ ಎದುರಾಗುವ ತೊಂದರೆ ದೂರ ಮಾಡಲು ಉಪವಿಭಾಗದ ತಾಲೂಕುಗಳಲ್ಲಿ ಕಾರವಾರದ ನೇವಿ ಟೆಕ್ನಿಶಿಯನ್‌ ಒಬ್ಬರು ಇರಲಿದ್ದಾರೆ ಎಂದರು.

ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ| ಗಜಾನನ ಭಟ್ಟ ಮಾತನಾಡಿ, ನೇರವಾಗಿ ಆಕ್ಸಿಜನ್‌ ಸಿಲಿಂಡರ್‌ ಪೈಪ್‌ಲೈನ್‌ಗೆ ನೀಡಲು ಆಗುವುದಿಲ್ಲ. ಒತ್ತಡ ಕಡಿಮೆ ಮಾಡಲು ಪ್ರತ್ಯೇಕ ಸಿಸ್ಟಮ್‌ ಇರುತ್ತದೆ. ಇದರ ಪ್ರೇಸರ್‌ ರೆಗ್ಯೂಲೇಟರ್‌, ವಾಲ್‌ ಹೋಗಿದೆ. ಇದೇ ಸಮಸ್ಯೆಗೆ ಕಾರಣವಾಯಿತು. ಅದನ್ನು ಬದಲಾಯಿಸಿದ್ದೇವೆ. ಜಾಸ್ತಿ ಲೋಡ್‌ ಆಗಿದ್ದರಿಂದ ಹೀಗೆ ಆಗಿದೆ. ಸಾಮಾನ್ಯವಾಗಿ 20 ಸಿಲಿಂಡರ್‌ ಸಾಮರ್ಥ್ಯ ಹೊಂದಿದ್ದರೂ ಆಕ್ಸಿಜನ್‌ ಜತೆಯಲ್ಲಿ ಲಿಕ್ವಿಡ್‌ ಮಿಶ್ರಣ ಮಾಡಿರುವುದರಿಂದ 10 ಸಿಲಿಂಡರ್‌ಗೆ ಒತ್ತಡ ಆಗಿದೆ. ಜತೆಯಲ್ಲಿ 20-25ರೋಗಿಗಳನ್ನು ನಿರ್ವಹಿಸುವ ಸಾಮರ್ಥ್ಯದ ಪೈಪ್‌ಲೈನ್‌ಗೆ 50 ಮಂದಿವರೆಗೆ ಆಕ್ಸಿಜನ್‌ ನೀಡುವ ಸಂದರ್ಭಗಳು ಬಂದಿದ್ದರಿಂದ ಲೋಡ್‌ ಆಗಿದೆ. ಇದರಿಂದ ಸಣ್ಣ ಸೋರಿಕೆ ಉಂಟಾಗಿತ್ತು. ಟೆಕ್ನಿಕಲ್‌ ಟೀಮ್‌ ಬಂದಿದ್ದು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಸೋರಿಕೆ ಪೈಪ್‌ಲೈನ್‌ ಒತ್ತಡ ಕಡಿಮೆ ಮಾಡಿದರೆ ಮಾತ್ರ ಅದನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಹೀಗಾಗಿ ಕೆಲವರನ್ನು ಶಿಫ್ಟ್‌ ಮಾಡಿದ್ದೇವೆ ಎಂದರು. ಆಕ್ಸಿಜನ್‌ ಪೈಪ್‌ಲೈನ್‌ ಸೋರಿಕೆ ಸಂದರ್ಭದಲ್ಲಿ ಆಕ್ಸಿಜನ್‌ನಲ್ಲಿ 21 ಮಂದಿ ಸೋಂಕಿತರು ಇದ್ದರು. ಅದರಲ್ಲಿ ಒಂದೆರಡು ದಿವಸದಲ್ಲಿ ಬಿಡುಗಡೆ ಆಗಲಿರುವವರನ್ನು ಬೇರೆ ತಾಲೂಕುಗಳ ಆಸ್ಪತ್ರೆಗೆ ಶಿಫ್ಟ್‌ ಮಾಡಿದ್ದೇವೆ.

4 ಸಿದ್ದಾಪುರ, 2 ಮುಂಡಗೊಡ, ಒಬ್ಬರನ್ನು ಯಲ್ಲಾಪುರ ಸರಕಾರಿ ಆಸ್ಪತ್ರೆಗೆ ಆಕ್ಸಿಜನ್‌ಯುಕ್ತ ಅಂಬ್ಯುಲೆನ್ಸ್ ಗಳಲ್ಲಿ ಕಳುಹಿಸಲಾಗಿದೆ. ಇನ್ನುಳಿದ ಮೂವರು ಖಾಸಗಿಗೆ ಹೋಗುತ್ತೇವೆ ಎಂದು ತೆರಳಿದ್ದಾರೆ ಎಂದರು. ಆಕ್ಸಿಜನ್‌ ಸಿಲಿಂಡರ್‌ ಪೈಪ್‌ಲೈನ್‌ನಲ್ಲಿ ಸೋರಿಕೆಯಾದರೂ ಆಸ್ಪತ್ರೆಯಲ್ಲಿ 29 ಸಿಲಿಂಡರ್‌ ಸಂಗ್ರಹ ಇತ್ತು. ಇದೀಗ ಮತ್ತೆ 20 ಸಿಲಿಂಡರ್‌ ಬಂದಿದೆ. ಸರಕಾರಿ ಆಸ್ಪತ್ರೆಯಲ್ಲಿ 18 ಮಂದಿ ಸೋಂಕಿತರು ಇದ್ದಾರೆ. ವೆಂಟೆಲೇಟರ್‌ನಲ್ಲಿ ಮೂರು ಮಂದಿ ಇದ್ದಾರೆ. ಇನ್ನು ಏಳು ವೆಂಟಿಲೇಟರ್‌ ನಮ್ಮಲ್ಲಿ ಇದೆ. ರೋಗಿಗಳು ಬಂದರೆ ನಮ್ಮಲ್ಲಿ ಯಾವುದೇ ತೊಂದರೆಯಿಲ್ಲ. ಯಾರೂ ಭಯಪಡಬೇಕಾದ ಅಗತ್ಯವಿಲ್ಲ ಎಂದೂ ಗಜಾನನ ಭಟ್ಟ ಹೇಳಿದರು. ತಹಸೀಲ್ದಾರ ಎಂ.ಆರ್‌.ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.