ಗ್ರಾಮಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಸೋಂಕು


Team Udayavani, May 23, 2021, 9:38 PM IST

23-21

ತರೀಕೆರೆ: ಪಟ್ಟಣ ಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದರೂ ಗ್ರಾಮಗಳಲ್ಲಿ ಸೋಂಕಿನ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದೆ. ತಾಲೂಕಿನ 26 ಗ್ರಾಪಂಗಳಲ್ಲಿ 508 ಪ್ರಕರಣಗಳು ದಾಖಲಾಗಿವೆ. ಜನತಾ ಕರ್ಪೂ ಇದ್ದರೂ ಸಹ ಗ್ರಾಮಗಳಲ್ಲಿ ಜನರ ಓಡಾಟ ಎಂದಿನಂತೆ ಇದೆ. ಅಂಗಡಿ- ಮುಂಗಟ್ಟುಗಳು ನಿಗದಿತ ಸಮಯಕ್ಕೆ ಮುಚ್ಚಿದ್ದರೂ ಸಹ ಅಂಗಡಿಗಳ ಬಳಿ ಜನರ ಓಡಾಟ ನಿಂತಿಲ್ಲ ಎಂಬ ಮಾತುಗಳು ಗ್ರಾಮಗಳಲ್ಲಿ ಕೇಳಿ ಬರುತ್ತಿವೆ.

ನಂದಿಬಟ್ಟಲು ಗ್ರಾಪಂ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಕಂಡು ಬಂದಿಲ್ಲ. ಲಕ್ಕವಳ್ಳಿ ಹೋಬಳಿಯ ಕರಕುಚ್ಚಿ ಗ್ರಾಪಂ ವ್ಯಾಪ್ತಿಯಲ್ಲಿ ಅತಿ ಹೆಚ್ಚು 58 ಪ್ರಕರಣಗಳು ದಾಖಲಾಗಿವೆ. ಹುಣಸಘಟ್ಟ 43, ಬೇಲೇನಹಳ್ಳಿ 40, ಮುಡಗೋಡು 40, ಅಮೃತಾಪುರ 36, ಕುಡೂರು 35, ನೇರಲಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಕೆಂಚಿಕೊಪ್ಪ 2, ಕೊರೋನಹಳ್ಳಿ 3, ತಿಗಡ 2 ಪ್ರಮಾಣದಲ್ಲಿ ಸೋಂಕಿತರು ಕಂಡು ಬಂದಿದ್ದಾರೆ. ಇನ್ನುಳಿದ ಗ್ರಾಪಂಗಳಲ್ಲಿ ಸೋಂಕಿತರು ಇದ್ದಾರೆ. ಗ್ರಾಪಂ ಪಿಡಿಒ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆ, ಶುಶ್ರೂಷಕಿ ಮತ್ತು ಗ್ರಾಪಂ ಅದ್ಯಕ್ಷರು ಇದರ ಸದಸ್ಯರಾಗಿರುತ್ತಾರೆ.

ಈ ಸಮಿತಿ ಗ್ರಾಮಗಳಲ್ಲಿ ಆಗು- ಹೋಗುಗಳ ಬಗ್ಗೆ ಆಗಾಗ ಸಭೆ ನಡೆಸಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮಗಳನ್ನು ಕೈಗೊಳ್ಳಲು ಅಧಿ ಕಾರ ನೀಡಲಾಗಿದೆ. ಗ್ರಾಮೀಣ ಭಾಗದ ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಟಂ ಟಂ, ಆಟೋ ಮತ್ತು ವಾಹನಗಳಲ್ಲಿ ಕೊರೊನಾ ಸೋಂಕಿನ ಬಗ್ಗೆ ಪ್ರಚಾರವನ್ನು ಆಗಾಗ ಮಾಡಲಾಗುತ್ತಿದೆ. ಮನೆ- ಮನೆಗೆ ಭೇಟಿ ನೀಡಿ ತಪಾಸಣೆ ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಸೋಂಕು ಹೆಚ್ಚಾಗಲು ಗ್ರಾಮಸ್ಥರು ಆಗಾಗ ನಗರ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದು, ಕಾರಣವಿಲ್ಲದೆ ಓಡಾಡುವುದು, ಸಾಮಾಜಿಕ ಅಂತರ ಪಾಲನೆ ಮಾಡದೆ ಇರುವುದು ಮತ್ತು ಮಾಸ್ಕ್ ಧರಿಸದೆ ಓಡಾಡುತ್ತಿರುವುದು ಕಾರಣವಾಗಿದೆ. ಪಟ್ಟಣ ಪ್ರದೇಶದಲ್ಲಿ ತರಕಾರಿ ಮಾರುಕಟ್ಟೆ ಸಂಪೂರ್ಣ ಮುಚ್ಚಿರುವುದರಿಂದ ವ್ಯಾಪಾರಸ್ಥರು ಗ್ರಾಮಗಳಿಗೆ ಆಟೋ, ಮೋಟಾರ್‌ ಬೈಕ್‌ ಮೂಲಕ ಬಂದು ತರಕಾರಿ, ಹಣ್ಣು-ಹಂಪಲು ಮಾರುತ್ತಿರುವುದು ಇನ್ನೊಂದು ಕಾರಣವಾಗಿರಬಹುದಾಗಿದೆ.

ವ್ಯಾಪಾರಸ್ಥರಿಗೆ ಯಾವುದೇ ಪರೀಕ್ಷೆ ನಡೆಸದೆ ಮಾರಾಟಕ್ಕೆ ಅನುಮತಿ ನೀಡಿರುವುದು, ಅವರು ಸೋಂಕಿತರೇ ಎನ್ನುವುದು ಮೇಲ್ನೋಟಕ್ಕೆ ಕಂಡು ಬರದೆ ಇರುವುದು ಇನ್ನೊಂದು ಕಾರಣ. ಗ್ರಾಮಗಳಲ್ಲಿ ಇರುವ ಅರಳಿಕಟ್ಟೆ, ದೇವಸ್ಥಾನದ ಕಟ್ಟೆ, ಸಣ್ಣ ಹೊಟೇಲ್‌ಗ‌ಳಲ್ಲಿ ಆಗಾಗ ಗುಂಪು ಸೇರಿ ಹರಟೆ ಹೊಡೆಯುವ ದೃಶ್ಯ ಸಾಮಾನ್ಯ. ಇದು ಇನ್ನೊಂದು ಕಾರಣವೆನ್ನಬಹುದು. ಸೋಂಕಿತರನ್ನು ಗುರುತಿಸಿ ಅವರಿಗೆ ಔಷಧಿ ಕಿಟ್‌ ನೀಡಲಾಗಿದೆ.

ಸೋಂಕಿತರ ಮನೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿದಿನ ಭೇಟಿ ನೀಡಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕೊರೊನಾ ಸೋಂಕು ಗ್ರಾಮೀಣ ಭಾಗದಲ್ಲಿ ಹರಡದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಗಳಲ್ಲಿ 10 ಗಂಟೆಗೆ ಎಲ್ಲಾ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸೋಂಕಿತರ ಮನೆ ಬೀದಿ ಮತ್ತು ಇನ್ನಿತರ ಭಾಗಗಳಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತಿದೆ.

ಗ್ರಾಮಸ್ಥರಲ್ಲಿ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಮತ್ತು ದಂಡ ವಿಧಿ ಸಲಾಗುತ್ತಿದೆ. ಪಾಸಿಟಿವ್‌ ಕಂಡು ಬಂದವರು ಹೊರಗೆ ಸಂಚರಿಸಿದ್ದು ಕಂಡು ಬಂದಲ್ಲಿ ಅಂತಹವರ ವಿರುದ್ದ ಎಫ್‌ಐ. ಆರ್‌. ದಾಖಲು ಮಾಡಲಾಗುತ್ತದೆ. ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕ ಹೊಂದಿರುವವರು ಕೂಡ ಹೋಮ್‌ ಐಸೋಲೇಷನ್‌ನಲ್ಲಿ ಇರುವಂತೆ ಸೂಚನೆ ನೀಡಲಾಗಿದೆ ಎಂದು ಕಾರ್ಯ ನಿರ್ವಾಹಕ ಅ ಧಿಕಾರಿ ಡಾ|ದೇವೇಂದ್ರಪ್ಪ ತಿಳಿಸಿದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.