ಶುದ್ಧ ಕುಡಿಯುವ ನೀರಿನ ಘಟಕ ಬಂದ್‌- ಆಕ್ರೋಶ


Team Udayavani, May 24, 2021, 9:24 PM IST

24-18

ಕಡೂರು: ಸೋಮವಾರದಿಂದ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ದಿನಸಿ ಪದಾರ್ಥ ಹಾಗೂ ತರಕಾರಿಯನ್ನು ಹೋಂ ಡೆಲಿವರಿ ಮೂಲಕ ಪೂರೈಸುವ ಬಗ್ಗೆ ಅಧಿ ಕಾರಿಗಳು ಸೂಚಿಸಿರುವುದು ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆಗೆ ಗ್ರಾಸವಾಗಿದೆ.

ಭಾನುವಾರ ಪಟ್ಟಣದ ಪೊಲೀಸ್‌ ಠಾಣೆಯಲ್ಲಿದಿನಸಿ, ತರಕಾರಿ ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳ ಮಾಲೀಕರನ್ನೊಳಗೊಂಡ ಸಭೆಯನ್ನು ತಹಶೀಲ್ದಾರ್‌, ವೃತ್ತ ನಿರೀಕ್ಷಕರು, ಠಾಣಾಧಿ ಕಾರಿ ಅವರ ಸಮ್ಮುಖದಲ್ಲಿ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಯಿತು ಎಂಬ ಅಂಶ ಬೆಳಕಿಗೆ ಬಂದಿದೆ.

ಸಭೆಯಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ದಿನಸಿ ಪದಾರ್ಥ, ತರಕಾರಿ ಮತ್ತು ಶುದ್ಧ ಕುಡಿಯುವ ನೀರನ್ನು ದೂರವಾಣಿ ಮೂಲಕ ಬೇಡಿಕೆ ಸಲ್ಲಿಸಿದ ಜನರ ಮನೆಗಳಿಗೆ ಸಂಬಂಧಪಟ್ಟ ಮಾಲೀಕರು ತಲುಪಿಸುವಂತೆ ಅ ಧಿಕಾರಿಗಳು ಸೂಚಿಸಿದ್ದು ಇದು ಎಷ್ಟರ ಮಟ್ಟಿಗೆ ಕಾರ್ಯಸಾಧುವಾಗುತ್ತದೆ ಎಂಬ ಬಗ್ಗೆ ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿಯೇ ಗೊಂದಲ ಮೂಡಿದೆ. ಶುದ್ಧ ಕುಡಿಯುವ ನೀರಿನ ಘಟಕಗಳನ್ನೇ ಉದಾಹರಣೆಗೆ ತೆಗೆದುಕೊಳ್ಳುವುದಾದರೆ ಪಟ್ಟಣದಲ್ಲಿ ಅಂದಾಜು 14 ಘಟಕಗಳಿದ್ದು 200 ರಿಂದ 500 ಕ್ಯಾನ್‌ ವರೆಗೆ ಒಂದೊಂದು ಘಟಕವು ನೀರನ್ನು ಪ್ರತಿದಿನ ಒದಗಿಸುತ್ತಿದೆ.

ಸರಾಸರಿ ಸುಮಾರು 4 ಸಾವಿರ ಕ್ಯಾನ್‌ ಗಳ ಶುದ್ಧ ನೀರು ಮಾರಾಟವಾಗುತ್ತಿದೆ. ಈ ವ್ಯವಸ್ಥೆಗೆ ಸೋಮವಾರದಿಂದ ಬಹುದೊಡ್ಡ ಪೆಟ್ಟು ಬೀಳಲಿದೆ. ಪಟ್ಟಣದ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಜನಜಂಗುಳಿ ಇರುವುದಿಲ್ಲ. ನೀರನ್ನು ಪಡೆಯುವ ಗ್ರಾಹಕರು ಬೆಳಗ್ಗೆ 6 ರಿಂದ ಸಂಜೆಯವರೆಗೆ ಯಾವುದಾದರೂ ಸಮಯದಲ್ಲಿ ನೀರು ಪಡೆದು ಹೋಗುತ್ತಿರುತ್ತಾರೆ.

ಒಟ್ಟಾರೆ ಯಾವ ಘಟಕದಲ್ಲಿಯೂ ನೀರಿಗಾಗಿ ಕ್ಯೂ ನಿಂತು ಪಡೆಯುವ ನಿದರ್ಶನಗಳಿಲ್ಲ. ಹೀಗಿದ್ದಾಗ ಕೊರೊನಾ ಹೇಗೆ ಹರಡುತ್ತದೆ ಎಂಬ ಪ್ರಶ್ನೆ ಉದ್ಭವವಾಗಿದೆ. ಮುಖ್ಯವಾದ ಅಂಶವೆಂದರೆ ಪಟ್ಟಣದ ಕೊಳವೆ ಬಾವಿಗಳು ಮತ್ತು ಪುರಸಭೆ ಪೂರೈಕೆ ಮಾಡುವ ನೀರಿನಲ್ಲಿ 1200 ರಿಂದ 1800 ವರೆವಿಗೆ ಟಿಡಿಎಸ್‌ ಇದ್ದು ಈ ನೀರನ್ನು ಸೇವಿಸುವುದರಿಂದ ಕೈಕಾಲುಗಳ ಕೀಲು ನೋವು, ನರನಾಡಿಗಳ ತೊಂದರೆ, ಕೆಮ್ಮು ನೆಗಡಿ, ಅತಿಸಾರದಂತಹ ಕಾಯಿಲೆಗಳು ಬಾಧಿಸುತ್ತವೆ. ಶುದ್ಧ ಕುಡಿಯುವ ನೀರಿನ ಘಟಕಗಳು ಇರುವುದರಿಂದ ಎಲ್ಲಾ ಕಾಯಿಲೆಗಳು ಹತೋಟಿಯಲ್ಲಿವೆ ಎಂಬುದು ನಿಸ್ಸಂಶಯ. ಅಧಿ ಕಾರಿಗಳ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದಂತೆ 2 ರಿಂದ 5 ರೂ.ಗಳಿಗೆ ಸಿಗುತ್ತಿದ್ದ ಕ್ಯಾನ್‌ ನೀರು 15 ರಿಂದ 30 ರೂ. ಗಳಿಗೆ ಮುಟ್ಟಿದರೂ ಆಶ್ಚರ್ಯವಿಲ್ಲ.

ಕೂಲಿ- ನಾಲಿ ಮಾಡುವ ಜನರಂತೂ ಇದರಿಂದ ಹೈರಾಣಾಗುತ್ತಾರೆ. ದಿನಸಿ ಪದಾರ್ಥ ಮತ್ತು ತರಕಾರಿಗೂ ಇದೇ ಸೂತ್ರ ಅಳವಡಿಕೆಯಾಗಿದ್ದು ದೊಡ್ಡ ಪ್ರಮಾಣದಲ್ಲಿ ವ್ಯಾಪಾರ ಮಾಡುವವರಿಗೆ ಅನುಕೂಲವಾಗುತ್ತದೆ. ಆದರೆ ಸಣ್ಣ ಪ್ರಮಾಣದಲ್ಲಿ 100 ರಿಂದ 200 ರೂ. ಒಳಗೆ ವ್ಯಾಪಾರ ಮಾಡುವ ಜನರ ಮನೆ ಬಾಗಿಲಿಗೆ ಈ ಪದಾರ್ಥಗಳನ್ನು ತಲುಪಿಸುವಲ್ಲಿ ಅಂಗಡಿ ಮಾಲೀಕರೇ ಹಿಂದೇಟು ಹಾಕುತ್ತಾರೆ. ಹೋಂ ಡೆಲಿವರಿ ಪದ್ಧತಿ ಕಡೂರು ಪಟ್ಟಣಕ್ಕೆ ಸೂಕ್ತವಾಗಿಲ್ಲ.

40 ಸಾವಿರ ಜನಸಂಖ್ಯೆ ಇರುವ ಈ ಪಟ್ಟಣದಲ್ಲಿ ಶೇ 80 ಭಾಗ ಬಡವರು ಮತ್ತು ಮದ್ಯಮ ವರ್ಗದವರೇ ಇದ್ದಾರೆ. ಅಂದಿನ ಅಡಿಗೆ ಪದಾರ್ಥಗಳನ್ನು ಅಂದೇ ಕೊಳ್ಳುವ ಸ್ಥಿತಿಯಲ್ಲಿರುವವರೆ ಹೆಚ್ಚು. ಜನವರಿ, ಫೆಬ್ರವರಿ, ಮಾರ್ಚ್‌ ತಿಂಗಳಲ್ಲಿ ಕಡೂರು ಪಟ್ಟಣವು ಸೇರಿದಂತೆ ತಾಲೂಕಿನಲ್ಲಿಯೇ ಒಟ್ಟಾರೆ ಪ್ರಕರಣಗಳು ಎರಡಂಕಿ ದಾಟಿರಲಿಲ್ಲ. ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮೂರಂಕಿಗೆ ಮುಟ್ಟಿದೆ. ಪ್ರತಿದಿನ ಪಾಸಿಟಿವ್‌ ಪ್ರಕರಣಗಳ ಪಟ್ಟಿಯನ್ನು ಅವಲೋಕಿಸಿದರೆ ಪಟ್ಟಣದಲ್ಲಿ 19 ಪ್ರಕರಣಗಳಿಗಿಂತ ಹೆಚ್ಚು ದಾಟಿಲ್ಲ. ಗ್ರಾಮಾಂತರ ಭಾಗದಲ್ಲಿಯೇ ಪ್ರಕರಣಗಳು ಹೆಚ್ಚಾಗಿವೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.