![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 24, 2021, 10:44 PM IST
ನವದೆಹಲಿ : ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ. ವಿ.ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ, ಮೊನ್ನೆ 1270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1660 ವಯಲ್ಸ್ ಒದಗಿಸಲಾಗಿತ್ತು ಎಂದರು.
ದೇಶದಲ್ಲಿಯೇ ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಸೀಸೆ ಲಿಪೋಸೊಮಾಲ್ ಎಂಫೋಟೆರಿಸಿನ್ ಬಿ ಉತ್ಪಾದನೆ ಮಾಡಲಿವೆ ಎಂದರು.
ಇದನ್ನೂ ಓದಿ :ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ
ಹಾಗೆಯೇ ಮೈಲಾನ್ ಕಂಪನಿ ಮೂಲಕ ಮೇ ತಿಂಗಳ ಒಳಗಾಗಿ 3.63 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಆಮದು ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಸ್ವಲ್ಪಭಾಗ ಈಗಾಗಲೇ ಭಾರತ ತಲುಪಿದೆ. ಯೋಜಸಿದಂತೆ ಸಾಗಣೆಯಲ್ಲಿ ಏನೂ ವ್ಯತ್ಯಾಸವಾಗದಿದ್ದರೆ ಉಳಿದ ಬಹುತೇಕ ಭಾಗ ವಾರದೊಳಗೆ ಭಾರತ ತಲುಪುವುದೆಂದು ನಿರೀಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು.
ಇನ್ನು, ಜೂನ್ ತಿಂಗಳಲ್ಲಿ 3.15 ಲಕ್ಷ ವಯಲ್ಸ್ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರ ಜೊತೆಗೆ 2.55 ಲಕ್ಷ ವಯಲ್ಸ್ ಸ್ವದೇಶಿ ಉತ್ಪಾದನೆ ಸೇರಿ ಜೂನ್ ತಿಂಗಳಲ್ಲಿ 5.7 ಲಕ್ಷ ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಲಭ್ಯವಿರಲಿವೆ. ಅಗತ್ಯವಾದರೆ ಇನ್ನೂ ಹೆಚ್ಚು ಆಮದು ಮಾಡಿಕೊಳ್ಳುತ್ತೇವೆ. ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ. ಕಪ್ಪುಶಿಲೀಂದ್ರ ಹಳೆ ಕಾಯಿಲೆಯಾಗಿದ್ದು ಇದಕ್ಕೆ ಸಾಕಷ್ಟು ಪರ್ಯಾಯ ಔಷಧಗಳು ಲಭ್ಯವಿವೆ. ಹಾಗಾಗಿ ಇದಕ್ಕೆ ಔಷಧ ಕೊರತೆಯಾಗಬಹುದು ಎಂದು ಗಾಬರಿಗೊಳಗಾಗಬೇಡಿ ಎಂದು ಸಚಿವರು ಸಾರ್ವಜನಿಕರಲ್ಲಿ ವಿನಂತಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.