ಸೋಂಕಿತರಿಗೆ ಉಚಿತ ಆಂಬ್ಯುಲೆನ್ಸ್‌ ಸೇವೆ


Team Udayavani, May 25, 2021, 4:18 PM IST

ಬಸದ್ಗಬನಬವ್ದಸ

ವಾಡಿ: ಕಳೆದ ಎರಡು ತಿಂಗಳಿಂದ ಕೋವಿಡ್‌ ಸೊಂಕಿತರ ಸೇವೆಯಲ್ಲಿ ತೊಡಗಿರುವ ಪಟ್ಟಣದ ಭಾಯ್‌ ಭಾಯ್‌ ಗ್ರೂಪ್‌ ಹಾಗೂ ಟೀಂ ಪ್ರಿಯಾಂಕ್‌ ಖರ್ಗೆ ಸಂಘದ ಪದಾ ಧಿಕಾರಿ ಯುವಕರು ಈಗ ತಮ್ಮ ಕಾರುಗಳನ್ನೇ ಆಂಬ್ಯುಲೆನ್ಸ್‌ ಗಳನ್ನಾಗಿ ಪರಿವರ್ತಿಸುವ ಮೂಲಕ ರೋಗಿಗಳಿಗೆ ಉಚಿತ ಸೇವೆ ಒದಗಿಸಲು ಮುಂದಾಗಿದ್ದಾರೆ.

ಪಟ್ಟಣದಲ್ಲಿ ಉಚಿತ ಆಂಬ್ಯುಲೆನ್ಸ್‌ ಸೇವಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಪಿಎಸ್‌ಐ ವಿಜಯಕುಮಾರ ಭಾವಗಿ, ಕೊರೊನಾ ಸೋಂಕು ದೃಢಪಟ್ಟು ಸಕಾಲಕ್ಕೆ ವಾಹನ ವ್ಯವಸ್ಥೆ, ಚಿಕಿತ್ಸೆ, ಆಕ್ಸಿಜನ್‌ ಸಿಗದೆ ಅನೇಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಿನದ 24 ತಾಸು ರೋಗಿಗಳ ಸೇವೆ ಮಾಡಲು ಪಣ ತೊಟ್ಟಿರುವ ಯುವಕರು, ತಮ್ಮ ಕಾರುಗಳನ್ನೇ ಆಂಬ್ಯುಲೆನ್ಸ್‌ ಗಳಾಗಿ ಬದಲಾಯಿಸಿರುವುದು ಅವರ ಜೀಪರ ಕಾಳಜಿ ಎತ್ತಿ ತೋರಿಸುತ್ತದೆ. ಸಂಕಷ್ಟದಲ್ಲಿರುವ ಬಡ ರೋಗಿಗಳು ಈ ಸಹಾಯ ಪಡೆದುಕೊಂಡು ಜೀವ ರಕ್ಷಿಸಿಕೊಳ್ಳಬೇಕು ಎಂದರು.

ಟೀಂ ಪ್ರಿಯಾಂಕ್‌ ಖರ್ಗೆ ಮತ್ತು ಭಾಯ್‌ ಭಾಯ್‌ ಗ್ರೂಪ್‌ ಅಧ್ಯಕ್ಷ ಶಮಶೀರ್‌ ಅಹ್ಮದ್‌ ಮಾತನಾಡಿ, ಕೊರೊನಾ ಸೋಂಕಿಗೆ ಹೆದರಿದರೆ ನಮ್ಮ ಕಣ್ಣೆದುರೇ ನಮ್ಮವರನ್ನು ಕಳೆದುಕೊಳ್ಳಬೇಕಾಗುತ್ತದೆ. ಮಾನವೀಯತೆ ದೃಷ್ಟಿಯಿಂದ ಜೀವದ ಹಂಗು ತೊರೆದು ರೋಗಿಗಳ ಸೇವೆಗೆ ನಿಂತಿದ್ದೇವೆ. ಈಗಾಗಲೇ ಹೋರಾಟದ ಮೂಲಕವೇ ಅನೇಕ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್‌, ಆಕ್ಸಿಜನ್‌ ಮತ್ತು ವೆಂಟಿಲೇಟರ್‌ ಸೌಲಭ್ಯ ಸಿಗುವಂತೆ ಕ್ರಮ ಕೈಗೊಂಡಿದ್ದೇವೆ. ಹಲವರಿಗೆ 108 ಸುರûಾ ಕವಚದಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಿದ್ದೇವೆ.

ರೋಗಿಗಳಿಗೆ ಊಟದ ವ್ಯವಸ್ಥೆ ಮಾಡಿದ್ದೇವೆ. ಖಾಸಗಿ ಆ್ಯಂಬುಲೆನ್ಸ್‌ ಮಾಲೀಕರು ಬಡ ರೋಗಿಗಳಿಂದ ಹಣ ಸುಲಿಗೆಗೆ ನಿಂತಿರುವುದನ್ನು ಅರಿತು ಉಚಿತ ಸೇವೆಗೆ ಮುಂದಾಗಿದ್ದೇವೆ. ಪ್ರಚಾರದ ದೃಷ್ಟಿಯಿಂದ ನಾವು ಇದನ್ನು ಮಾಡುತ್ತಿಲ್ಲ. ನಮ್ಮ ಕರ್ತವ್ಯ ಎಂದು ಭಾವಿಸಿ ಅಳಿಲು ಸೇವೆ ಒದಗಿಸುತ್ತಿದ್ದೇವೆ.

ದಿನದ 24 ತಾಸು ನಾವು ಸೇವೆಗೆ ಹಾಜರಿರುತ್ತೇವೆ. ಕೋವಿಡ್‌ ಸೇರಿದಂತೆ ಇತರೆ ಯಾವುದೇ ಸಮಸ್ಯೆಯಿಂದ ಬಳಲುವ ರೋಗಿಗಳಿಗೆ ಸ್ಪಂದಿಸುತ್ತೇವೆ. ಉಚಿತ ಆಂಬ್ಯುಲೆನ್ಸ್‌ ಸೇವೆಗಾಗಿ 9742533763, 7022623883 ಕರೆ ಮಾಡಬಹುದು ಎಂದು ವಿವರಿಸಿದರು. ಮಹ್ಮದ್‌ ಇರ್ಫಾನ್‌, ಝಹೂರ್‌ ಖಾನ್‌, ಬಾಬಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.