ಬೆಳಗಾವಿ: ಸೋಂಕು ನಿವಾರಣೆಗೆ ಶಾಸಕರಿಂದ ಮುಂದುವರಿದ ಹೋಮ-ಹವನ


Team Udayavani, May 25, 2021, 5:34 PM IST

homa

ಬೆಳಗಾವಿ: ಕೋವಿಡ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ದಕ್ಷಿಣ ಮತಕ್ಷೇತ್ರದ ಪ್ರದೇಶಗಳಲ್ಲಿ ಶಾಸಕ ಅಭಯ ಪಾಟೀಲ ಅವರು ವಾತಾವರಣ ಶುದ್ಧೀಕರಣಕ್ಕಾಗಿ ಕೈಗೊಂಡಿರುವ ಹೋಮ-ಹವನ ಅಭಿಯಾನ ಮಂಗಳವಾರವೂ ಮುಂದುವರಿಯಿತು.

ಕ್ಷೇತ್ರದ ಸುಮಾರು 50 ಕಡೆಗಳಲ್ಲಿ ಏಕಕಾಲಕ್ಕೆ ಹೋಮ-ಹವನ ನಡೆಸಿದ್ದ ಶಾಸಕ ಅಭಯ್ ಪಾಟೀಲರು ಮಂಗಳವಾರವೂ ಇದನ್ನು ಮುಂದುವರಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ತುಂಬೆಲ್ಲ ಕೈಗಾಡಿಯಲ್ಲಿ ಹೋಮ-ಹವನ ಹಾಕಿಕೊಂಡು ಸಂಚರಿಸುತ್ತಿದ್ದಾರೆ. ವಾತಾವರಣ ಶುದ್ಧೀಕರಣಗೊಳಿಸಲು ಈ ಕಾರ್ಯ ಕೈಗೊಂಡಿದ್ದು, ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ:ಆಂಧ್ರ ಪ್ರದೇಶದ ಎಚ್ ಪಿ ಸಿ ಎಲ್ ಘಟಕದಲ್ಲಿ ಬೆಂಕಿ ಅವಘಡ..! : ಕಾರ್ಮಿಕರ ರಕ್ಷಣೆ

ಕೈಗಾಡಿಯಲ್ಲಿ ಹಾಗೂ ಮನೆಗಳ ಮುಂದೆ ಅಗ್ನಿಕುಂಡದಂತೆ ಮಾಡಿ ಅದರಲ್ಲಿ ಬೆರಣಿ (ಕುಳ್ಳು), ಗುಗ್ಗಳ, ಕರ್ಪೂರ, ತುಪ್ಪ, ಬೇವಿನ ಎಲೆಗಳು, ಅಕ್ಕಿ, ಕವಡಿ ಉದ ಹಾಗೂ ಲವಂಗ ಮೊದಲಾದವುಗಳನ್ನು ಹಾಕಿ ವಾತಾವರಣ ಶುದ್ಧಗೊಳಿಸಲಾಗುತ್ತಿದೆ. ಇದಕ್ಕೆ ಅನೇಕ ಸಂಘ-ಸಂಸ್ಥೆಗಳ ಯುವಕರು ಕೈ ಜೋಡಿಸಿದ್ದಾರೆ. ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಾತಾವರಣ ಶುದ್ಧೀಗಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.

ಸೋಂಕುಗಳ ನಿವಾರಣೆಗೆ ಸನಾತನ ಧರ್ಮದಲ್ಲಿ ಹೋಮ-ಹವನ ನಡೆಸಲಾಗುತ್ತಿದೆ. ಯಾರಿಗೆ ನಂಬಿಕೆ ಇದೆಯೋ ಅದನ್ನು ಒಪ್ಪಿಕೊಳ್ಳುತ್ತಾರೆ. ನಂಬಿಕೆ ಇಲ್ಲದವರು ಇದನ್ನು ಒಪ್ಪಿಕೊಳ್ಳದೇ ಮೌಢ್ಯದ ಪಟ್ಟ ಕಟ್ಟುತ್ತಾರೆ. ಇದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಸನಾತನ ಹಿಂದು ಧರ್ಮದಲ್ಲಿ ಪುರಾತನ ಕಾಲದಿಂದಲೂ ಇಂಥಹ ಹೋಮ-ಹವನಗಳನ್ನು ಮಾಡಿ ವಾತಾವರಣ ಶುದ್ಧಿಗೊಳಿಸಿದ್ದು ಓದಿಕೊಂಡು ಬಂದಿದ್ದೇವೆ. ಕಲುಷಿತ ವಾತಾವರಣ ಸ್ವಚ್ಛಗೊಳಿಸಲು ಇದು ಸಹಕಾರಿಯಾಗಿದೆ. ಜೂನ್ 15ರವರೆಗೂ ಕ್ಷೇತ್ರದ ತುಂಬೆಲ್ಲ ಇದು ಮುಂದುವರಿಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ನಿಯಮ ಉಲ್ಲಂಘಿಸಿ ಮದುವೆ:ಅಧಿಕಾರಿಗಳನ್ನು ಕಂಡು ವೇದಿಕೆಯಲ್ಲೇ ವಧುವನ್ನು ಬಿಟ್ಟು ವರ ಎಸ್ಕೇಪ್!

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.