![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 26, 2021, 9:21 AM IST
ನವದೆಹಲಿ: ಗುರುವಾರದಿಂದ ನಿಮ್ಮ ಟ್ವಿಟರ್, ಫೇಸ್ ಬುಕ್ ಬ್ಲಾಕ್ ಆಗಲಿವೆಯೇ? ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ ಮುಗಿಯಲಿದ್ದು, ಗುರುವಾರದಿಂದ ಈ ಜಾಲತಾಣಗಳ ಕಥೆ ಏನಾಗಲಿದೆ ಎಂಬ ಕುತೂಹಲ ಮೂಡಿದೆ.
ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್ಆ್ಯಪ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.
ಇದೇ ವೇಳೆ, ಅಮೆಜಾನ್ ಪ್ರೈಮ್, ನೆಟ್ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.
ಆದರೆ,ಈ ಯಾವ ತಾಣಗಳೂ ಸರ್ಕಾರದ ನಿಯಮವನ್ನು ಪಾಲಿಸಿಲ್ಲ. ದೇಶದ ಕಾನೂನಿನ ಪ್ರಕಾರ, ಸರ್ಕಾರದ ಮಾರ್ಗಸೂಚಿ ಪಾಲಿಸದ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಾಗೂ ಅಂಥ ಜಾಲತಾಣಗಳನ್ನು ಬ್ಲಾಕ್ ಮಾಡಲು ಅವಕಾಶವಿದೆ.
ಪ್ರಕ್ರಿಯೆ ನಡೆಯುತ್ತಿದೆ: ಫೇಸ್ ಬುಕ್
ಭಾರತ ಸರ್ಕಾರದ ನಿಯಮಗಳನ್ನು ಮೇ 26ರ ಒಳಗಾಗಿ ಅನುಷ್ಠಾನಗೊಳಿಸಲು ಪ್ರಕ್ರಿಯೆಗಳು ನಡೆದಿವೆ ಎಂದು ಫೇಸ್ಬುಕ್ ಮಂಗಳವಾರ ತಿಳಿಸಿದೆ. ಕೆಲ ವಿಚಾರದ ಬಗ್ಗೆ ಸರ್ಕಾರದ ಜತೆಗೆ ಮಾತುಕತೆ ನಡೆಯುತ್ತಿವೆ ಎಂದೂ ಹೇಳಿದೆ.
ವಾಟ್ಸ್ ಆ್ಯಪ್ ಸ್ಪಷ್ಟನೆ:
ಖಾಸಗಿತನ ನೀತಿ ಒಪ್ಪದೇ ಇರುವ ಗ್ರಾಹಕರ ಮೇಲೆ ಕ್ರಮ ಕೈಗೊಳ್ಳುವುದಿಲ್ಲ ಎಂದು ವಾಟ್ಸ್ ಆ್ಯಪ್ ಸ್ಪಷ್ಟನೆ ನೀಡಿದೆ. ಅಂಥ ಗ್ರಾಹಕರ ವಾಟ್ಸ್ ಆ್ಯಪ್ ನ ಒಂದೊಂದೇ ಫೀಚರ್ಗಳನ್ನು ಹಿಂಪಡೆಯಲಾಗುತ್ತದೆ ಎಂಬ ಸುದ್ದಿ ಸುಳ್ಳು.ಅಂಥ ಯಾವುದೇ ಯೋಚನೆ ನಮಗಿಲ್ಲ ಎಂದಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.