ಗುರುಗಳಿಗೆ ಕಿಚ್ಚನ ನಮನ: ಖಾಸಗಿ ಶಿಕ್ಷಕರಿಗೆ ನಟ ಸುದೀಪ್ ಸಹಾಯ
Team Udayavani, May 27, 2021, 8:14 AM IST
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಕಲಾವಿದರು, ತಂತ್ರಜ್ಞರು, ಬಡವರು ಹೀಗೆ ಅನೇಕರಿಗೆ ತಮ್ಮದೇ ಆದ ನೆರವು ನೀಡುತ್ತಿರುವ ನಟ ಸುದೀಪ್ ಇದೀಗ ಲಾಕ್ಡೌನ್ನಿಂದ ತೊಂದರೆಗೀಡಾಗಿರುವ ಖಾಸಗಿ ಶಿಕ್ಷಕರ ನೆರವಿಗೆ ಮುಂದಾಗಿದ್ದಾರೆ.
ಕಿಚ್ಚ ಸುದೀಪ ಚಾರಿಟೆಬಲ್ ಸೊಸೈಟಿಯಿಂದ “ಗುರುಗಳಿಗೆ ಕಿಚ್ಚನ ನಮನ’ ಹೆಸರಿನಲ್ಲಿ ಅಭಿಯಾನ ಆರಂಭಿಸಲಾಗಿದ್ದು, ಈ ಅಭಿಯಾನದಲ್ಲಿ ಕರ್ನಾಟಕದ ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯ ಮಾಡುವ ಯೋಜನೆ ರೂಪಿಸಲಾಗಿದೆ. ಮೊದಲನೇ ಹಂತದಲ್ಲಿ 50 ಶಿಕ್ಷಕರಿಗೆ ತಲಾ 2 ಸಾವಿರ ರೂ. ಧನ ಸಹಾಯ ಮಾಡಲು ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಮುಂದಾಗಿದೆ.
ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ ಕಿಚ್ಚ ಸುದೀಪ ಚಾರಿಟೆಬಲ್ ಸೊಸೈಟಿ, ನೀವು ಖಾಸಗಿ ಶಾಲೆಯ ಶಿಕ್ಷಕರಾಗಿದ್ದು, ಆರ್ಥಿಕ ಸಂಕಷ್ಟದಲ್ಲಿದ್ದರೆ, 6360334455 ಈ ಸಂಖ್ಯೆಗೆ ಕರೆ ಮಾಡಿ, ನಾವು ನಿಮಗೆ ಸಹಾಯ ಮಾಡಲು ಸಿದ್ಧವಿದ್ದೇವೆ’ ಎಂದಿದೆ.
ಕೊರೊನಾ ವಿರುದ್ಧ ನನ್ನ ಶಪಥ
ಕೊರೊನಾದಿಂದ ಸೇಫ್ ಆಗಿರಲು ಎಲ್ಲರೂ ಮಾಸ್ಕ್ ಧರಿಸುವ ಜೊತೆಗೆ ಸ್ಯಾನಿಟೈಸ್ ಮಾಡಿಕೊಳ್ಳಿ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ವ್ಯಾಕ್ಸಿನ್ ತೆಗೆದುಕೊಳ್ಳಿ.ಈ ಮೂಲಕ ಈ ಮಹಾಮಾರಿಯಿಂದ ದೂರವಿರೋಣ. – ಶುಭಾ ಪೂಂಜಾ, ನಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.