ಲಾಕ್ಡೌನ್ನಲ್ಲೂ ನಿತ್ಯ ಶುದ್ಧ ಜೀವಜಲ ವಿತರಣೆ
Team Udayavani, May 26, 2021, 9:34 PM IST
ವಿಶೇಷ ವರದಿ
ದಾವಣಗೆರೆ: ಕೊರೊನಾ ಕರ್ಫ್ಯೂ, ಲಾಕ್ಡೌನ್ ಕಾಲದಲ್ಲಿಯೂ ನಿತ್ಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮೂಲಕ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೌಕರರು, ಸಿಬ್ಬಂದಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಕಳೆದ ವರ್ಷ ವಿಧಿಸಿದ್ದ ಲಾಕ್ಡೌನ್ ವೇಳೆಯೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 40ಪ್ರೇರಕರು, ಮೂವರು ಮೇಲ್ವಿಚಾರಕರು ಸೇರಿ ಒಟ್ಟು 43 ನೌಕರರು ಹಾಗೂ ಘಟಕದ ಸಿಬ್ಬಂದಿ ಕೊರೊನಾ ಬಾಧಿತರು ಇರುವ ಮನೆ, ಸೀಲ್ಡೌನ್ ಪ್ರದೇಶ, ಕಂಟೈನ್ ಮೆಂಟ್ ಪ್ರದೇಶ ಸೇರಿದಂತೆ ಎಲ್ಲ ಜನರಿಗೂ ಶುದ್ಧ ಕುಡಿಯುವ ನೀರು ತಲುಪಿಸುವ ಮೂಲಕ ಜನಮೆಚ್ಚುಗೆ ಗಳಿಸಿದ್ದರು.
ಈ ಬಾರಿಯ ಲಾಕ್ ಡೌನ್ನಲ್ಲಿಯೂ ಸಂಸ್ಥೆಯವರು ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯದಂಥ ಸುರಕ್ಷತಾ ಕ್ರಮಗಳೊಂದಿಗೆ ದಿನವೂ ಜನರಿಗೆ ಕುಡಿಯಲು ಶುದ್ಧ ನೀರು ಒದಗಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಶುದ್ಧ ನೀರಿನ ಮಹತ್ವ ತಿಳಿಸುತ್ತಿರುವ ಸಂಸ್ಥೆಯವರು, ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಶುದ್ಧ ನೀರು ಕುಡಿಯಲು ಜನರನ್ನು ಪ್ರೇರೇಪಿಸುತ್ತಿದ್ದಾರೆ.
ಜತೆಗೆ ಯೋಜನೆಯಿಂದ ಜಿಲ್ಲೆಯಲ್ಲಿ ನಿರ್ವಹಿಸುತ್ತಿರುವ 40ಶುದ್ಧ ನೀರಿನ ಘಟಕಗಳ ಮೂಲಕ ಅಂದಾಜು 50 ಸಾವಿರಕ್ಕೂ ಅಧಿಕ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದಾರೆ. ತನ್ಮೂಲಕ ಜನರ ಆರೋಗ್ಯ ಕಾಪಾಡುವಲ್ಲಿ ಕೈಜೋಡಿಸಿದ್ದಾರೆ.
ನಿರಂತರ ನೀರು: ಕೊರೊನಾ ವೈರಸ್ ದಾಳಿಯಿಂದಾಗಿ ಜನರಲ್ಲಿ ಶುದ್ಧ ನೀರಿನ ಅರಿವು ಹೆಚ್ಚಾಗಿದ್ದು, ಶುದ್ಧ ನೀರು ಬಳಸುವವರ ಸಂಖ್ಯೆ ದುಪ್ಪಟ್ಟಾಗಿದೆ. ಹೀಗಾಗಿ ಶುದ್ಧ ನೀರಿನ ಘಟಕಗಳಲ್ಲಿ ಸಾಮಾಜಿಕ ಅಂತರದ ಗುರುತು ಹಾಕಿ ಮಾಸ್ಕ್ ಕಡ್ಡಾಯಗೊಳಿಸಿ ಜನರಿಗೆ ನಿರಂತರವಾಗಿ ಒಂದು ದಿನವೂ ತೊಡಕಾಗದಂತೆ ನೀರೊದಗಿಸುವ ಹೊಣೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವುದು ವಿಶೇಷ.
ಒಟ್ಟಾರೆ ಆರೋಗ್ಯ ಸುರಕ್ಷತಾ ಕ್ರಮಗಳಲ್ಲಿ ಶುದ್ಧ ಕುಡಿಯುವ ನೀರಿನ ಬಳಕೆ ಸಹ ಪ್ರಮುಖವಾದುದು ಎಂಬ ಜಾಗೃತಿ ಜನರಲೀಗ ಮೂಡಿದೆ. ಇದಕ್ಕೆ ಪ್ರೇರಕಶಕ್ತಿಯಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ
Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ
Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ?
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.