ಕೋವಿಡ್ ದೂರವಾಗಿಸಲು ಮೌಢ್ಯಾಚರಣೆ
Team Udayavani, May 26, 2021, 9:52 PM IST
ಬಳ್ಳಾರಿ: ಗಣಿನಾಡಿನ ಬಳ್ಳಾರಿ/ವಿಜಯನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಹೆಚ್ಚಿದ ಮಹಮ್ಮಾರಿ ಕೋವಿಡ್ ಸೋಂಕನ್ನು ನಿಯಂತ್ರಿಸಲು ತಾಲೂಕಿನ ಡಿ.ಕಗ್ಗಲ್ ಗ್ರಾಮದ ಜನರು ಮೌಢಾಚರಣೆ ಮೊರೆ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನೂರಾರು ಕೆಜಿ ಅನ್ನವನ್ನು ಕೊಂಡೊಯ್ದು ಗ್ರಾಮದ ಹೊರವಲಯದಲ್ಲಿ ಚೆಲ್ಲಿದ್ದಾರೆ.
ಬಳ್ಳಾರಿ/ವಿಜಯನಗರ ಜಿಲ್ಲೆಗಳ ಬಹುತೇಕ ಗ್ರಾಮಗಳಿಗೂ ಕೋವಿಡ್ ಸೋಂಕು ಆವರಿಸಿದ್ದು, ನೂರಾರು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅದರಂತೆ ತಾಲೂಕಿನ ಡಿ. ಕಗ್ಗಲ್ ಗ್ರಾಮಕೂ ಸೋಂಕು ವ್ಯಾಪಿಸಿದೆ. ಗ್ರಾಮವನ್ನು ಕೊರೊನಾದಿಂದ ದೂರವಾಗಿಸಲು, ಮುಕ್ತಗೊಳಿಸಲು ಮೌಢಾ ಚರಣೆಗೆ ಮುಂದಾಗಿರುವ ಗ್ರಾಮಸ್ಥರು, ಗ್ರಾಮ ದಲ್ಲಿ ಪ್ರತಿ ಮನೆಯಿಂದ ತಲಾ ಐದೈದು ಕೆಜಿ ಅನ್ನವನ್ನು ಮಾಡಿಸಿಕೊಂಡು ನೂರಾರು ಕೆಜಿ ಅನ್ನವನ್ನು ಟ್ರಾಕ್ಟರ್ಗಳಲ್ಲಿ ಸಂಗ್ರಹಿಸಿಕೊಂಡು ಗ್ರಾಮದ ಹೊರವಲಯದಲ್ಲಿ ಚೆಲ್ಲಿ ಮಣ್ಣುಪಾಲು ಮಾಡಿದ್ದಾರೆ. ಕೋವಿಡ್ ಸೋಂಕು, ಲಾಕ್ಡೌನ್ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಬಂಧಿಕರು, ಬಡ ಜನರು ಆಹಾರ ಸಿಗದೆ ಪರದಾಡುತ್ತಿರುವ ಇಂಥ ಸಂದರ್ಭದಲ್ಲಿ ಗ್ರಾಮಗಳಲ್ಲಿ ನೂರಾರು ಕೆಜಿ ಅನ್ನವನ್ನು ಚೆಲ್ಲಿ ಮಣ್ಣುಪಾಲು ಮಾಡಿ ಮೌಢಾಚರಿಸುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಕಳೆದೊಂದು ವಾರದ ಹಿಂದೆ ತಾಲೂಕಿನ ಕೊಳಗಲ್ಲು ಗ್ರಾಮದಲ್ಲೂ ಇದೇ ರೀತಿ ಅನ್ನವನ್ನು ಚೆಲ್ಲುವ ಮೂಲಕ ಮೌಢಾಚರಣೆ ಮಾಡಿದ್ದರು.
ದೂರಿನ ಪತ್ರ ವೈರಲ್: ತಾಲೂಕಿನ ಡಿ. ಕಗ್ಗಲ್ ಗ್ರಾಮದಲ್ಲಿ ಕೊರೊನಾ ದೂರವಾಗಿಸಲು ಮಾಡಿದ ಮೌಢಾಚರಣೆಗೆ ಕಾರಣರಾದ ಗ್ರಾಮದ ಮುಖಂಡರ ಮೇಲೆ ಕ್ರಮಕೈಗೊಳ್ಳುವಂತೆ ಗ್ರಾಮದ ಯುವಕರು ಮೋಕಾ ಠಾಣೆ ಪಿಎಸ್ಐಗೆ ಬರೆದ ದೂರಿನ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಕೊರೊನಾ ಸೋಂಕು ಗ್ರಾಮದಲ್ಲಿ ವ್ಯಾಪಿಸಿರುವುದರಿಂದ ಈಚೆಗೆ ಗ್ರಾಮದಲ್ಲಿ ಡಂಗೂರ ಸಾರಿಸಿರುವ ಮುಖಂಡರು ಡಂಗೂರ ಸಾರಿಸಿ ಭೂತ-ಪ್ರೇತಗಳಿಗೆ ಬೃಹತ್ ಅನ್ನಸಂತರ್ಪಣೆ ಮಾಡಿದರೆ ಕೊರೊನಾ ದೂರವಾಗುವುದು ಎಂಬ ಭಾವನೆ ಜನರಲ್ಲಿ ಸೃಷ್ಟಿಸಿ, ಪ್ರತಿ ಮನೆಮನೆಯಿಂದ ಐದು ಕೆಜಿಯಂತೆ ನೂರಾರು ಕೆಜಿ ಅನ್ನ ಮಾಡಿಸಿ, ಟ್ರಾಕ್ಟರ್ಗಳಲ್ಲಿ ಸಂಗ್ರಹಿಸಿಕೊಂಡು ಇಡೀರಾತ್ರಿ ಗ್ರಾಮದ ಸುತ್ತಲೂ ಚೆಲ್ಲಿದ್ದಾರೆ.
ಈ ಮೌಢಾಚರಣೆ ಗ್ರಾಮದ ವಿದ್ಯಾವಂತ ಯುವಕರನ್ನು ತಲೆತಗ್ಗಿಸುವಂತೆ ಮಾಡಿದೆ. ಗ್ರಾಮದ ಅನಕ್ಷರಸ್ಥ, ಭಂಡ ಮುಖಂಡರು ಗ್ರಾಮದಲ್ಲಿ ಆಗಾಗ ಮಾಡುತ್ತಿರುತ್ತಾರೆ. ಈ ಮುಖಂಡರನ್ನು ಬಂಧಿ ಸಿ ಕಾನೂನು ಕ್ರಮಕೈಗೊಳ್ಳುವಂತೆ ಗ್ರಾಮದ ಕೆಲ ಮುಖಂಡರ ಹೆಸರುಗಳನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ. ಆದರೆ, ಡಿ. ಕಗ್ಗಲ್ ಗ್ರಾಮದಲ್ಲಿ ನಡೆದಿರುವ ಈ ಮೌಢಾಚರಣೆ ಘಟನೆ ಬಗ್ಗೆ ಈವರೆಗೂ ಯಾರೊಬ್ಬರೂ ಠಾಣೆಗೆ ಬಂದು ಖುದ್ದು ಭೇಟಿನೀಡಿಯಾಗಲಿ ಅಥವಾ ಅಂಚೆ ಮೂಲಕವಾಗಲಿ ಯಾವುದೇ ದೂರು ಬಂದಿಲ್ಲ. ಪ್ರಕರಣವೂ ದಾಖಲಾಗಿಲ್ಲ ಎಂದು ಮೋಕಾ ಠಾಣೆಯ ಪಿಎಸ್ಐ ರಘು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.