ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸೋದು ಬಿಡಿ


Team Udayavani, May 26, 2021, 10:26 PM IST

26-20

ಶಿವಮೊಗ್ಗ: ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವುದನ್ನು ಬಿಟ್ಟು ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಿ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಸೇರಿದಂತೆ ಸಿ.ಟಿ. ರವಿ, ಸಂತೋಷ್‌ ಜೀ ಮೊದಲಾದ ಬಿಜೆಪಿ ನಾಯಕರು ರಾಜ್ಯದಲ್ಲಿ ಕೊರೊನಾ ಹರಡಲು ಕಾಂಗ್ರೆಸ್‌ ಕಾರಣ ಎಂಬ ನೀಚತನದ ಹೇಳಿಕೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರನ್ನೇ ಗುರಿಯನ್ನಾಗಿಸಿಕೊಂಡು ತಮ್ಮ ಹುಳುಕು ಮುಚ್ಚಿಕೊಳ್ಳುತ್ತಿದ್ದಾರೆ. ಇನ್ನು ಮುಂದಾದರೂ ಕಾಂಗ್ರೆಸ್‌ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು ಎಂದರು. ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದರೂ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ 5 ರಾಜ್ಯಗಳಲ್ಲಿ ಚುನಾವಣೆ ನಡೆಸಿತು. ರಾಜ್ಯದಲ್ಲಿಯೂ ಕೂಡ ಉಪ ಚುನಾವಣೆ ನಡೆಸಲಾಯಿತು. ಹೀಗೆ ಚುನಾವಣೆ ಮೇಲೆ ಚುನಾವಣೆ ಮಾಡಿ, ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾಗಿದ್ದು ಬಿಜೆಪಿ ಸರ್ಕಾರ. ಜೊತೆಗೆ ಕರ್ನಾಟಕದಲ್ಲಿ ಕರ್ಫ್ಯೂ ಘೋಷಿಸುವ ಮುನ್ನ ಬೆಂಗಳೂರಿಂದ ಸುಮಾರು 12 ಸಾವಿರ ಬಸ್‌ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಬಿಟ್ಟು ಸೋಂಕು ಹರಡಲು ನೇರ ಕಾರಣವಾಗಿದೆ.

ಇಷ್ಟೆಲ್ಲಾ ತಪ್ಪು ಎಸಗಿರುವ ಬಿಜೆಪಿ ಸರ್ಕಾರ ಕಾಂಗ್ರೆಸ್‌ ಮೇಲೆ ವಿನಾಕಾರಣ ಆರೋಪ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲಸಿಕೆಗೆ ಸಂಬಂ ಧಿಸಿದಂತೆ ಬಿಜೆಪಿ ಸರ್ಕಾರ ಸುಳ್ಳು ಹೇಳುತ್ತಿದೆ. ಕಾಂಗ್ರೆಸ್‌ ಲಸಿಕೆ ಹಾಕಿಸಿಕೊಳ್ಳುವುದು ಬೇಡ ಎಂದು ಜನರಿಗೆ ಪ್ರಚಾರ ಮಾಡಿತು. ಆ ಕಾರಣದಿಂದ ಕೊರೊನಾ ಹೆಚ್ಚಾಗಿದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ.

ಬಿಜೆಪಿ ಸರ್ಕಾರಕ್ಕೆ ಬುದ್ಧಿ ಇಲ್ಲವೇ? ಎಲ್ಲರೂ ಕಾಂಗ್ರೆಸ್‌ ಮಾತನ್ನೇ ಕೇಳುತ್ತಿದ್ದಾರೆಯೇ? ಬಿಜೆಪಿಯವರ ಮಾತನ್ನು ಕೇಳುವುದಿಲ್ಲವೇ? ಎಲ್ಲಾ ವಿಷಯಕ್ಕೂ ಜನ ನಮ್ಮ ಜೊತೆ ಇದ್ದಾರೆ ಎಂದು ಹೇಳುವ ಬಿಜೆಪಿಗೆ ಲಸಿಕೆ ಹಾಕಿಸುವುದು ಗೊತ್ತಿರಲಿಲ್ಲವೇ? ಈಗ ಸಲ್ಲದ ಕಾರಣ ಕೊಟ್ಟು ಜಾರಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಈಗಲೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಸಿಕೆ ನೀಡುವುಲ್ಲಿ ವಿಫಲವಾಗಿವೆ. ಹೊರದೇಶಕ್ಕೆ ಲಸಿಕೆ ಕಳುಹಿಸುವ ಅವಶ್ಯಕತೆ ಏನಿತ್ತು? ಇವರಿಗೆ ಮಾಹಿತಿ ಇರಲಿಲ್ಲವೇ? ಲಸಿಕೆ ಕೊರತೆ ಇಲ್ಲವೆಂದು ಹೇಳುವ ಸರ್ಕಾರಕ್ಕೆ ಈಗಲಾದರೂ ತನ್ನ ತಪ್ಪಿನ ಅರಿವಾಗಬೇಕು. ಶಿವಮೊಗ್ಗದಂತಹ ನಗರದಲ್ಲಿ ಲಸಿಕೆ ಹಾಕಿಸಿಕೊಳ್ಳಲು ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ಬಂದಿದೆ ಎಂದರು.

ಕೊರೊನಾ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಸರ್ಕಾರ ದಿವಾಳಿಯಾಗಿದೆ. ಯಾವುದೇ ಆಸ್ಪತ್ರೆಗಳಿಗೆ ಹೋದರೂ ಆಮ್ಲಜನಕ, ವೆಂಟಿಲೇಟರ್‌, ಬೆಡ್‌ಗಳು ಇಲ್ಲ. ಇದರ ನಡುವೆ ಶಿಲೀಂದ್ರ ರೋಗ (ಬ್ಲಾಕ್‌ ಫಂಗಸ್‌) ಕೂಡ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.

ಕೊರೊನಾ ತಡೆಯಲು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡಿದೆ ಎಂದು ಹೇಳುತ್ತಿದೆ. ಆದರೆ, ಆ ಹಣ ಎಲ್ಲಿ ಹೋಗಿದೆ? ಲಸಿಕೆ, ಆಮ್ಲಜನಕ, ವೆಂಟಿಲೇಟರ್‌, ಔಷಧಗಳ ಖರೀದಿ, ಮಾಸ್ಕ್ ಖರೀದಿ ಎಲ್ಲವುದರಲ್ಲೂ ಭ್ರಷ್ಟಾಚಾರ ನಡೆದಿದ್ದು ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಚಾಮರಾಜನಗರದಲ್ಲಿ ಆಕ್ಸಿಜನ್‌ ಇಲ್ಲದೇ ಮೃತಪಟ್ಟ 24 ಜನರಿಗೆ ಕೇವಲ 2 ಲಕ್ಷ ರೂ. ಪರಿಹಾರ ನೀಡಲಾಗಿದೆ. ಇದು ಯಾವುದಕ್ಕೂ ಸಾಲದು, ಕನಿಷ್ಠ 10 ಲಕ್ಷ ರೂ. ಪರಿಹಾರ ನೀಡಬೇಕು. ಇದಲ್ಲದೆ ಕೊರೊನಾದಿಂದ ಮೃತಪಟ್ಟ ಎಲ್ಲಾ ಕುಟುಂಬಗಳಿಗೂ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಎರಡನೇ ಅಲೆಯನ್ನೇ ಸಮರ್ಪಕವಾಗಿ ನಿರ್ವಹಿಸದ ಸರ್ಕಾರ ಕೊರೊನಾ ಮೂರನೇ ಅಲೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹಸಿ ಸುಳ್ಳು ಹೇಳುತ್ತಿದೆ. ಹೀಗೆ ಸುಳ್ಳು ಮಾಹಿತಿ ನೀಡುತ್ತಾ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಕಾಯಿಲೆಗಿಂತ ಇವರಿಗೆ ಪ್ರತಿಷ್ಠೆ ಪಕ್ಷದ ಬೆಳವಣಿಗೆ ಮುಖ್ಯವಾಗಿದೆ. ಇನ್ನಾದರೂ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಟ್ಟು ಕೊರೊನಾ ನಿಯಂತ್ರಿಸಲು ಗಮನಹರಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್‌ ಹೋರಾಟ ಆರಂಭಿಸಬೇಕಾದೀತು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಪ್ರಮುಖರಾದ ಎಚ್‌.ಸಿ.ಯೋಗೀಶ್‌, ನಾಗರಾಜ್‌, ಎಂ.ಚಂದನ್‌, ಎಚ್‌.ಪಿ. ಗಿರೀಶ್‌, ಯು. ಶಿವಾನಂದ್‌, ನಟರಾಜ್‌, ಚಂದ್ರಶೇಖರ್‌, ಪ್ರಮೋದ್‌, ಪ್ರಭಾಕರ್‌, ಮೂರ್ತಿ ಮುಂತಾದವರಿದ್ದರು.

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.