![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 27, 2021, 2:50 PM IST
ಹೊಸದಿಲ್ಲಿ: ಕುಸ್ತಿಪಟು ಓರ್ವನ ಕೊಲೆ ಪ್ರಕರಣದ ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸುತ್ತ ಮತ್ತೊಂದು ವಿವಾದ ಸುತ್ತಿಕೊಂಡಿದೆ. ಗ್ಯಾಂಗ್ ಸ್ಟರ್ ಕಾಲಾ ಜತೇದಿ ಸಹೋದರ ಪ್ರದೀಪ್ ಜೊತೆಗಿರುವ ಫೋಟೊವೊಂದು ಇದೀಗ ವೈರಲ್ ಆಗುತ್ತಿದೆ.
2018ರ ಡಿಸೆಂಬರ್ 18ರಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಈ ಫೋಟೊ ಇದೀಗ ವೈರಲ್ ಆಗುತ್ತಿದೆ. ಪೊಲೀಸ್ ಮೂಲಗಳ ಪ್ರಕಾರ ಸುಶೀಲ್ ಕುಮಾರ್ ಜೊತೆ ಬಿಳಿ ಅಂಗಿ ಧರಿಸಿ ಕುಳಿತಿರುವ ವ್ಯಕ್ತಿ ಗ್ಯಾಂಗ್ ಸ್ಟರ್ ಕಾಲಾ ಜತೇದಿ ಸಹೋದರ ಪ್ರದೀಪ್. ಈತ ಕೂಡಾ ಪೊಲೀಸರಿಗೆ ಬೇಕಾದ ವ್ಯಕ್ತಿಯಾಗಿದ್ದು, ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 7 ಲಕ್ಷ ರೂ. ನೀಡುವುದಾಗಿ ಪೊಲೀಸ್ ಇಲಾಖೆ ಈಗಾಗಲೇ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿ ಶುದ್ಧ ಸರ್ಕಾರವಾಗಿ ಉಳಿದಿಲ್ಲ, ಮೂರು ಗುಂಪಿನ ಸರ್ಕಾರವಾಗಿದೆ : ಸಿ.ಪಿ ಯೋಗೇಶ್ವರ್
ದೆಹಲಿ ಪೊಲೀಸರ ಮುಂದೆ ಸುಶೀಲ್ ಕುಮಾರ್ ಗ್ಯಾಂಗ್ ಸ್ಟರ್ ಪರ ವಕಾಲತ್ತು ವಹಿಸಿದ್ದಾನೆ ಎಂದು ಮೂಲಗಳು ಖಚಿತಪಡಿಸಿವೆ. ಒಂದು ಪ್ರಕರಣದಲ್ಲಿ ಕಾಲಾ ಜತೇದಿ ಸಹೋದರ ಪ್ರದೀಪ್ಗೆ ಸಹಾಯ ಮಾಡಲು ಕುಮಾರ್ ಸೋನಿಪತ್ಗೆ ಹೋಗಿದ್ದರು ಎನ್ನುತ್ತವೆ ಪೊಲೀಸ್ ಮೂಲಗಳು.
ಯುವ ಕುಸ್ತಿಪಟು ಸಾಗರ್ ರಾಣಾ ಕೊಲೆ ಪ್ರಕರಣದ ಸಂಬಂಧ ಸುಶೀಲ್ ಕುಮಾರ್ ಮತ್ತು ಅಜಯ್ ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ. ದೆಹಲಿ ಕ್ರೈಮ್ ಬ್ರಾಂಚ್ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರು ದಿನಗಳ ಕಾಲ ಸುಶೀಲ್ ಮತ್ತು ಅಜಯ್ ರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
You seem to have an Ad Blocker on.
To continue reading, please turn it off or whitelist Udayavani.