ಮದ್ಯದಂಗಡಿ ಮುಂದೆ ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು
Team Udayavani, May 27, 2021, 8:47 PM IST
ಲಕ್ಮೇಶ್ವರ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಗುರುವಾರದಿಂದ ಗದಗ ಜಿಲ್ಲೆ ಸಂಪೂರ್ಣ ಲಾಕ್ ಆಗುವುದರಿಂದ ಬುಧವಾರ ಲಕ್ಮೇಶ್ವರದಲ್ಲಿ ಮದ್ಯಪ್ರಿಯರು ಮದ್ಯದ ಅಂಗಡಿಗಳ ಮುಂದೆ ಕ್ಯೂ ನಿಂತ ದೃಶ್ಯ ಕಂಡು ಬಂದಿತು.
ನಸುಕಿನ 5 ಗಂಟೆಯಷ್ಟರಲ್ಲಾಗಲೇ ಮದ್ಯದ ಅಂಗಡಿಗಳ ಮುಂದೆ ಮದ್ಯಪ್ರಿಯರು ಕಾದು ಕುಳಿತಿದ್ದರು. ನೆರೆಯ ಧಾರವಾಡ, ಹಾವೇರಿ ಜಿಲ್ಲೆ ಕಳೆದ ಮೂರ್ನಾಲ್ಕು ದಿನಗಳ ಹಿಂದೆಯೇ ಸಂಪೂರ್ಣ ಲಾಕ್ಡೌನ್ ಘೋಷಣೆ ಮಾಡಿದ್ದರಿಂದ ಈ ಭಾಗದಿಂದ ಮದ್ಯ ಖರೀದಿಗೆ ಮುಗಿಬಿದ್ದ ದೃಶ್ಯ ಕಂಡು ಬಂದಿತು. ಮೇ 27 ರಿಂದ ಮದ್ಯದದ ಅಂಗಡಿ ಬಂದ್ ಆದರೆ 5 ದಿನಗಳ ಕಾಲ ಮದ್ಯ ಸಿಗುವುದಿಲ್ಲ ಎಂಬ ಕಾರಣದಿಂದ ಮದ್ಯ ಖರೀದಿಗೆ ಒಬ್ಬರ ಮೇಲೊಬ್ಬರು ಬೀಳುತ್ತಾ ಮದ್ಯ ಖರೀದಿಸಿದರು.
ಮಕ್ಕಳನ್ನೂ ಕ್ಯೂ ನಿಲ್ಲಿಸಿದ ಮದ್ಯ ಪ್ರಿಯರು: ಪಟ್ಟಣ ಸೇರಿ ಗ್ರಾಮೀಣ ಪ್ರದೇಶಗಳಲ್ಲಿನ ಕೆಲವರು ಲಾಭದ ಉದ್ದೇಶದಿಂದ ಮದ್ಯ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಕಳೆದ 2 ದಿನಗಳಿಂದ ಎಲ್ಲ ಮದ್ಯದ ಅಂಗಡಿಗಳಲ್ಲಿ ಸಿಕ್ಕಷ್ಟು ಮದ್ಯ ಸಂಗ್ರಹಿಸುತ್ತಿದ್ದಾರೆ. ಇನ್ನು ಎಂಎಸ್ಐಎಲ್ನಲ್ಲಿಯೂ ವೈನ್ನ ಕೊರತೆ ಕಂಡು ಬಂದಿದ್ದರಿಂದ ಮಾರಾಟಗಾರರು ಒಬ್ಬರಿಗೆ 1/2 ಬಾಟಲ್ ಮಾತ್ರ ಕೊಡುತ್ತಿರುವ ಹಿನ್ನೆಲೆ ಸರದಿಯಲ್ಲಿ ಮಕ್ಕಳು ಸೇರಿ ಆತ್ಮೀಯರನ್ನು ನಿಲ್ಲಿಸಲಾಗಿತ್ತು. ಬಾಕ್ಸ್-ಚೀಲಗಳಲ್ಲಿ ನೆರೆಯ ಜಿಲ್ಲೆಯ ಮದ್ಯಪ್ರಿಯರು ಮತ್ತು ಮಾರಾಟಗಾರರು ಹೆಚ್ಚಿನ ಬೆಲೆಗೆ ಬೇಡಿಕೆ ಇಟ್ಟಿದ್ದು ಕೇಳಿ ಬಂದಿತು. ಈ ವೇಳೆ ಪರಸ ³ರ ಅಂತರ, ಮಾಸ್ಕ್ ಮರೆತಿದ್ದು ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
ಗದಗ: ಅತಿವೃಷ್ಟಿಯಿಂದ ಬತ್ತಿದ ಕೆರೆಗಳಿಗೆ ಆಸರೆಯಾದ ತುಂಗಭದ್ರೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.