ಕೊರೊನಾ ತಡೆಗಾಗಿ ಆರೈಕೆ ಕೇಂದ್ರ ಆರಂಭ


Team Udayavani, May 27, 2021, 9:59 PM IST

27-16

ಚಿಕ್ಕಮಗಳೂರು: ಕೋವಿಡ್‌ ಸೋಂಕಿತರು ಕಳಸ ಪಟ್ಟಣದಿಂದ ಮೂಡಿಗೆರೆ ಮತ್ತು ಚಿಕ್ಕಮಗಳೂರು ಜಿಲ್ಲಾಕೇಂದ್ರಕ್ಕೆ ತೆರಳಿ ಚಿಕಿತ್ಸೆ ಪಡೆಯಲು ಸಮಸ್ಯೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕಳಸ ಪಟ್ಟಣದ ಪ್ರಾಥಮಿಕ ಸಮುದಾಯ ಕೇಂದ್ರದಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ತಿಳಿಸಿದರು.

ಬುಧವಾರ ಕಳಸ ಪಟ್ಟಣದ ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನವಾಗಿ ತೆರೆಯಲಾಗಿರುವ ಕೋವಿಡ್‌ ಕೇರ್‌ ಸೆಂಟರನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಗದ ಲಕ್ಷಣಗಳು ಕಂಡುಬರುತ್ತಿದ್ದಂತೆ ಸೋಂಕಿತರು ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆಗೆ ಒಳಗಾಗಬೇಕು. ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಕೇರ್‌ ಸೆಂಟರ್‌ ತೆರೆಯಲಾಗಿದ್ದು, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್‌ ಗೆ ಒಳಪಡಿಸುವುದರಿಂದ ಸೋಂಕು ಉಲ್ಬಣಗೊಳ್ಳುತ್ತಿದ್ದು, ಇದನ್ನು ತಡೆಗಟ್ಟುವ ಉದ್ದೇಶದಿಂದ ಕೋವಿಡ್‌ ಆರೈಕೆ ಕೇಂದ್ರ ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ವಿದ್ಯಾರ್ಥಿ ವಸತಿ ನಿಯಲದಲ್ಲಿ ಕ್ವಾರಂಟೈನ್‌ ಕೇಂದ್ರ ತೆರೆಯಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕೋವಿಡ್‌ಸೋಂಕು ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಗ್ರಾಮೀಣ ಭಾಗದ ಜನ ಅತ್ಯಂತ ಜಾಗೃತೆ ವಹಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ಧರಿಸಬೇಕು ಮತ್ತು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಹೇಳಿದರು.

ಕೋವಿಡ್‌ ಸೋಂಕಿತ 10 ಮಂದಿಗೆ ಅಗತ್ಯ ಮೆಡಿಸಿನ್‌ ಕಿಟ್‌ಗಳನ್ನು ಆಯುಷ್‌ ಇಲಾಖೆ ಯಿಂದ ನೀಡಲಾಗಿದೆ. ಹಾಗೂ ಡಿಟಿಡಿಪಿ ಯಿಂದ 5ಮಂದಿಗೆ ಅಗತ್ಯ ಆಹಾರದ ಕಿಟ್‌ ಗಳ ನ್ನು ನೀಡಲಾಗಿದ್ದು ಅಗತ್ಯ ಇದ್ದವರು ಮೆಡಿಸಿನ್‌ ಕಿಟ್‌ ಮತ್ತು ಆಹಾರದ ಕಿಟ್‌ಗಳನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಕಳಸವನ್ನು ಈಗಾಗಲೇ ತಾಲೂಕು ಕೇಂದ್ರವಾಗಿ ಸರ್ಕಾರ ಘೋಷಣೆ ಮಾಡಿದ್ದು, ತಾಲೂಕು ಕೇಂದ್ರಕ್ಕೆ ಬೇಕಾಗುವ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಶಾಸಕ ಎಂ.ಪಿ. ಕುಮಾರಸ್ವಾಮಿ, ವಿಧಾನಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌, ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌ ಅವರೊಂದಿಗೆ ಚರ್ಚಿಸಿ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಮೂಡಿಗೆರೆ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿ ಮಾತನಾಡಿ, ಜಿಲ್ಲಾಡಳಿತ ಜಿಲ್ಲಾದ್ಯಂತ ಲಾಕ್‌ಡೌನ್‌ ವಿಧಿಸಿದ್ದು, ಸೋಂಕಿನ ಪ್ರಮಾಣ ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದೆ. ಕೋವಿಡ್‌ಸೋಂಕು ನಿಯಂತ್ರಣಕ್ಕೆ ತರಲು ಜನ ಜಾಗೃತರಾಗಬೇಕು. ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು ಎಂದ ಅವರು, ಜಿಲ್ಲಾಡಳಿತ ದೊಂದಿಗೆ ಜನತೆ ಸಹಕರಿಸಿದಲ್ಲಿ ಕೋವಿಡ್‌ ಮುಕ್ತ ಜಿಲ್ಲೆಯಾಗಿಸಬಹುದು ಎಂದರು.

ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌ ಮಾತನಾಡಿ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿದ್ದು, ಸೋಂಕಿತರಿಗೆ ಸೂಕ್ತ ಸಮಯಕ್ಕೆ ತುರ್ತುಚಿಕಿತ್ಸೆ ಸೌಲಭ್ಯ ನೀಡುವ ಉದ್ದೇಶದಿಂದ ಈ ಕೋವಿಡ್‌ ಕೇರ್‌ ಸೆಂಟರ್‌ ತೆರೆಯಲಾಗಿದೆ ಎಂದರು.

ಇಲ್ಲಿ ಸೋಂಕಿತರಿಗೆ ಪ್ರಾಥಮಿಕ ಹಂತದ ಚಿಕಿತ್ಸೆ ಸಿಗಲಿದೆ. ಕೋವಿಡ್‌ಗೆ ಎಲ್ಲಾ ರೀತಿಯ ಚಿಕಿತ್ಸೆ ಇಲ್ಲೆ ಸಿಗುತ್ತದೆ ಎಂಬ ಮನೋಭಾವ ನಿಮ್ಮಲ್ಲಿ ಬೇಡ. ಸೋಂಕಿನ ಚಿಕಿತ್ಸೆಗೆ ಅನೇಕ ಸೌಲಭ್ಯಗಳ ಅಗತ್ಯತೆ ಇದೆ. ಡಾಕ್ಟರ್‌, ನರ್ಸ್‌ಗಳ ಸೌಲಭ್ಯದ ಅಗತ್ಯವಿದೆ. ಜನರು ಎಚ್ಚರವಹಿಸಬೇಕು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್‌.ಜೀವರಾಜ್‌, ಜಿಲ್ಲಾ ಧಿಕಾರಿ ಕೆ.ಎನ್‌. ರಮೇಶ್‌, ಉಪವಿಭಾಗಾಧಿಕಾರಿ ಡಾ|ಎಚ್‌. ಎಲ್‌. ನಾಗರಾಜ್‌, ಮೂಡಿಗೆರೆ ತಹಶೀಲ್ದಾರ್‌ ರಮೇಶ್‌, ಕೊಪ್ಪ ಉಪವಿಭಾಗ ಪೊಲೀಸ್‌ ಉಪ ಅಧೀಕ್ಷಕ ರಾಜು, ಮೂಡಿಗೆರೆ ತಾಲೂಕು ಕೋವಿಡ್‌ ನೋಡೆಲ್‌ ಅಧಿ ಕಾರಿ ಡಾ|ಮಧುಸೂಧನ್‌, ಕಳಸ ಸಮುದಾಯ ಕೇಂದ್ರದ ವೈದ್ಯಾ ಧಿಕಾರಿ ಅನುಗೌರಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.