ನಾಳೆಯಿಂದ 10 ದಿನ ಜಿಲ್ಲೆ ಸಂಪೂರ್ಣ ಲಾಕ್‌


Team Udayavani, May 28, 2021, 5:09 PM IST

lockdown at mysore

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ ಸೋಂಕುಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 10 ದಿನಗಳಅವಧಿಯಲ್ಲಿ (ಮೇ 29 ರಿಂದ ಜೂನ್‌ 7ರವರೆಗೆ)ವಾರದಲ್ಲಿ 2 ದಿನ ಮಾತ್ರ ವ್ಯಾಪಾರ ವಹಿವಾಟಿಗೆಅವಕಾಶ ನೀಡಿ ಉಳಿದ ದಿನಗಳಲ್ಲಿ ಸಂಪೂರ್ಣಲಾಕ್‌ಡೌನ್‌ ಮಾಡಿ ಜಿÇÉಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.

ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು,ಇದೂವರೆಗೆ ಪ್ರತಿನಿತ್ಯ ಬೆಳಗ್ಗೆ 6 ರಿಂದ 10 ರವರೆಗೆಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು.ಇನ್ನು ಮುಂದೆ ಪ್ರತಿ ಸೋಮವಾರ ಮತ್ತು ಗುರುವಾರ ಮಾತ್ರ ಬೆಳಗ್ಗೆ 6 ರಿಂದ ಮಧ್ಯಾಹ್ನ 12ರವರೆಗೆಅವಕಾಶ ನೀಡಲಾಗುವುದು. ಉಳಿದ ದಿನಗಳಲ್ಲಿಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು,ಹಾಪ್‌ಕಾಮ್ಸ್ ನಡಿ ಬರುವ ತರಕಾರಿ ಮತ್ತು ಹಣ್ಣಿನಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನುಹೊರತು ಪಡಿಸಿ ಉಳಿದ ಎಲ್ಲ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಬ್ಯಾಂಕ್‌, ವಿಮಾ ಯೋಜನೆಯ ಕಂಪನಿಗಳಿಗೆ ಆದಿನಗಳಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 12ರವರೆಗೆಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈಹಿನ್ನೆಲೆ ಯಲ್ಲಿ ಮತ್ತೂಂದಷ್ಟು ಕಠಿಣ ನಿಯಮಗಳೊಂದಿಗೆ ಲಾಕ್‌ಡೌನ್‌ ಜಾರಿಗೊಳಿಸಲಾಗುತ್ತಿದೆ.ರಾಜ್ಯ ಸರ್ಕಾರದ ಮಾರ್ಗಸೂಚಿ ಪ್ರಕಾರ ಕೈಗಾರಿಕೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.ಹೀಗಾಗಿ ಈ ಅವಧಿಯಲ್ಲಿ ಕೈಗಾರಿಕೆಗಳ ಚಟು ವಟಿಕೆಗೆ ಅವಕಾಶ ನೀಡಲಾಗುವುದು. ಕೈಗಾರಿಕೆ ನಡೆಸುವುದು ಅತ್ಯಾವಶ್ಯಕವಿಲ್ಲದೇ ಇದ್ದರೆ ಕೈಗಾರಿಕೆ ಗಳನ್ನು10 ದಿನಗಳ ಅವಧಿವರೆಗೆ ಮುಚ್ಚಿ ಜಿÇÉಾಡ ಳಿತಕ್ಕೆಸಹಕಾರ ನೀಡಬೇಕೆಂದು ಮನವಿ ಮಾಡಿದರು.

ನಿಷೇಧಾಜ್ಞೆ ಅವಧಿಯಲ್ಲಿ ಸರಕು ಸಾಗಾಟವಾಹನ ಗಳನ್ನು ಹೊರತುಪಡಿಸಿ ಯಾವುದೇ ವಾಹನಸಂಚಾರ ಹಾಗೂ ವ್ಯಕ್ತಿಗಳ ಓಡಾಟ ಕಂಡು ಬಂದಲ್ಲಿವಿಪತ್ತು ನಿರ್ವಹಣಾ ಕಾಯ್ದೆಯಡಿ ಕಾನೂನು ಕ್ರಮಜರುಗಿಸಲಾಗುವುದು ಎಂದು ಎಚ್ಚರಿಸಿದರು.ಮೈಸೂರು: ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಕೂಡಲೆ ಹತ್ತಿರದ ಕೋವಿಡ್‌ ಮಿತ್ರಕ್ಕೆ ಭೇಟಿ ನೀಡಿ, ಚಿಕಿತ್ಸೆ ಪಡೆದುಕೊಳ್ಳಬೇಕು.ಇದರಿಂದ ಸಾವಿನ ಪ್ರಮಾಣವನ್ನು ತಗ್ಗಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, ಕೊರೊನಾದಿಂದಉಂಟಾಗುತ್ತಿರುವ ಮರಣ ಪ್ರಮಾಣ ಮತ್ತು ಬ್ಲ್ಯಾಕ್‌ ಫ‌ಂಗಸ್‌ಕಡಿಮೆಗೊಳಿಸುವ ಉದ್ದೇಶದಿಂದ ಈಗಾಗಲೇ ಮನೆ ಮನೆ ಸರ್ವೆಕಾರ್ಯ ನಡೆಯುತ್ತಿದೆ ಎಂದರು.ಜಿಲ್ಲೆಯಲ್ಲಿ 16,611 ಸಕ್ರಿಯ ಸೋಂಕಿತರಿದ್ದು, ರಾಜ್ಯದ ಪಾಸಿಟಿವಿಟಿಗೆ ಹೋಲಿಕೆ ಮಾಡಿದರೆ ಜಿಲ್ಲೆಯಲ್ಲಿ ಶೇ. 40 ರಿಂದ 41ರಷ್ಟಿದೆ.ಇದನ್ನು ಕಡಿಮೆಗೊಳಿಸಬೇಕು. ರಾಜ್ಯದಲ್ಲಿಯೇ ಅತಿ ಹೆಚ್ಚು ಮಂದಿಗೆನಮ್ಮಲ್ಲಿ ಲಸಿಕೆ ನೀಡಿರುವುದರಿಂದ ಸಾವಿನ ಪ್ರಮಾಣ ಕಡಿಮೆ ಇದೆ.ಜಿಲ್ಲೆಯಲ್ಲಿ ಶೇ.0.63 ಸಾವಿನ ಪ್ರಮಾಣ ದಾಖಲಾಗಿದೆ. ನಗರ ಮತ್ತುಗ್ರಾಮಾಂತರ ಪ್ರದೇಶದಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ಮಂದಿಗೆಲಸಿಕೆ ಹಾಕಿದ ಹೆಗ್ಗಳಿಕೆಗೆ ಮೈಸೂರು ಜಿಲ್ಲೆಗಿದೆ ಎಂದು ಹೇಳಿದರು.ನಿತ್ಯ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಪ್ರತಿ ಸಾವಿನ ನಿಖರ ಕಾರಣದ ಕುರಿತು ವಿಶ್ಲೇಷಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿನಮಗೆ ಕಂಡುಬಂದ ಪ್ರಮುಖ ಅಂಶವೆಂದರೆ ರೋಗಿಗಳು ಲಕ್ಷಣಕಾಣಿಸಿ ಕೊಂಡ ಹಲವು ದಿನಗಳ ಬಳಿಕ ಆಸ್ಪತ್ರೆಗೆ ದಾಖಲಾಗುತ್ತಿರುವುದು. ಕೋವಿಡ್‌ ಮಿತ್ರ ಮೂಲಕ 24 ಸಾವಿರ ಮಂದಿ ಸೌಲಭ್ಯಪಡೆದಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂರಿ ತಿಳಿಸಿದರು.

 

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.