50 ಆಮ್ಲಜನಕ ಸಹಿತ ಬೆಡ್ ವ್ಯವಸ್ಥೆ: ಶಾಸಕ ಕುಮಾರ ಬಂಗಾರಪ್ಪ
Team Udayavani, May 28, 2021, 9:24 PM IST
ಸೊರಬ: ತಾಲೂಕಿನಲ್ಲಿ ಕೊರೊನಾ ಹತೋಟಿಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲೂಕು ಆಡಳಿತ ಕ್ಷಿಪ್ರಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೊರೊನಾ ಸೋಂಕಿತರಿಗೆ ತಾಲೂಕಿನಲ್ಲಿ 50 ಆಮ್ಲಜನಕ ಸಹಿತ ಬೆಡ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಟ್ಟಣ ಮತ್ತು ಆನವಟ್ಟಿಯಲ್ಲಿ 50 ಆಮ್ಲಜನಕ ಸಹಿತ ಬೆಡ್ಗಳ ಡೆಡಿಕೇಟೆಡ್ ಕೋವಿಡ್ ಹೆಲ್ತ್ ಕೇರ್ ತೆರೆಯಲಾಗಿದ್ದು, ಕೊರೊನಾ ಸೋಂಕಿತರು ನೆರೆಯ ಶಿಕಾರಿಪುರ, ಸಾಗರ ಅಥವಾ ಶಿವಮೊಗ್ಗಕ್ಕೆ ತೆರಳಬೇಕಿದ್ದ ಸ್ಥಿತಿ ತಪ್ಪಿಸಿದಂತಾಗಿದೆ. ಜತೆಗೆ ಅಲ್ಲಿಯೂ ಸಹ ಹೊರೆ ಕಡಿಮೆಯಾಗಿದೆ. ಪಟ್ಟಣದಲ್ಲಿ 110 ಜನ ಸಾಮರ್ಥ್ಯದ ಕೊರೊನಾ ಆರೈಕೆ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 70 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಆಹಾರದ ಜತೆಗೆ ಸೂಕ್ತ ವೈದ್ಯಕೀಯ ಸೌಲಭ್ಯ ನೀಡಲಾಗುತ್ತಿದೆ. ಡಿಸಿಎಚ್ ಕೇಂದ್ರಕ್ಕೆ ಶೀಘ್ರದಲ್ಲಿಯೇ ತಜ್ಞ ವೈದ್ಯರ ನೇಮಕಕ್ಕಾಗಿ ಜಿಲ್ಲಾಡಳಿತಕ್ಕೆ ಒತ್ತಾಯಿಸಲಾಗಿದೆ ಎಂದರು.
ಮುಖ್ಯ ರಸ್ತೆ ಅಗಲೀಕರಣ: ಪಟ್ಟಣದಲ್ಲಿ ಸುಮಾರು 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮುಖ್ಯರಸ್ತೆಯ ಅಗಲೀಕರಣ ಕಾರ್ಯವು ಕೇವಲ ಒಂದೇ ವಾರದಲ್ಲಿ ಆರಂಭವಾಗಲಿದೆ. ನ್ಯಾಯಾಲಯದಲ್ಲಿದ್ದ ಪ್ರಕರಣಗಳು ಇತ್ಯರ್ಥವಾಗಿದ್ದು, ಈಬಗ್ಗೆ ಪಿಡಬುಡಿ ಮತ್ತು ಪುರಸಭೆಗೆ ಮಾಹಿತಿ ತಲುಪಿದೆ. ಮುಖ್ಯ ರಸ್ತೆಯ ನಿವಾಸಿಗಳಿಗೆ ಪರಿಹಾರ ನೀಡುವ ಕಾರ್ಯವು ನಡೆದಿದೆ ಎಂದರು.
ಕಿಟ್ ವಿತರಣೆ: ಕೊರೊನಾದಿಂದ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಅನೇಕರು ಉದ್ಯೋಗ ವಂಚಿತರಾಗಿದ್ದಾರೆ. ಜನರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸೇವಾ ಭಾರತಿ ವತಿಯಿಂದ ಸಮಸ್ಯೆಗೆ ಸಿಲುಕಿರುವ ವರ್ಗದವರನ್ನು ಗುರುತಿಸಿ ಜೂ.3ರಿಂದ ಕಿಟ್ ವಿತರಿಸುವ ಕಾರ್ಯವು ಹಮ್ಮಿಕೊಳ್ಳಲಾಗಿದೆ ಎಂದರು.
ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಪ್ರಮುಖರಾದ ದಿವಾಕರ ಭಾವೆ, ದೇವೇಂದ್ರಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.