ಸೋಂಕು ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಸಹಕರಿಸಿ


Team Udayavani, May 30, 2021, 9:43 PM IST

30-21

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು ಜಿಲ್ಲೆಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜೇಶ್‌ ಸುರಗೀಹಳ್ಳಿ ಹೇಳಿದರು. ಶನಿವಾರ ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ನಗರದ ಖಾಸಗಿ ವೈದ್ಯರು ಹಾಗೂ ಆಸ್ಪತ್ರೆಗಳ ಆಡಳಿತ ಸಂಸ್ಥೆಯ ಮುಖ್ಯಸ್ಥರೊಂದಿಗೆ ಕೊರೊನಾ ನಿಯಂತ್ರಣದಲ್ಲಿ ಕೈಗೊಳ್ಳಬಹುದಾದ ಜನಸ್ನೇಹಿ ಕ್ರಮಗಳ ಕುರಿತು ಸಮಾಲೋಚನೆ ನಡೆಸಿ ಅವರು ಮಾತನಾಡಿದರು.

ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿಯೂ ಬೆಡ್‌ ಬ್ಲಾಕ್‌ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿದೆ. ತ್ರಯಾಜ್‌ ಕೇಂದ್ರದಲ್ಲಿ ವೈದ್ಯರ ಸಲಹೆ ಪಡೆದು ಹೊರಬರುವ ಸೋಂಕಿತರಿಗೆ ಅವರು ಬಯಸುವ ಆಸ್ಪತ್ರೆಗಳಲ್ಲಿ ಶೇ. 50ರಷ್ಟು ಹಾಸಿಗೆಗಳನ್ನು ಕಾಯ್ದಿರಿಸುವಂತೆ ಸೂಚಿಸಿದ ಅವರು, ಇದರ ವ್ಯವಸ್ಥಿತ ನಿರ್ವಹಣೆಗಾಗಿ ಮೆಗ್ಗಾನ್‌ ಅ ಧೀಕ್ಷಕ ಡಾ| ಶ್ರೀಧರ್‌ ಮತ್ತು ಡಾ| ಮಂಜುನಾಥ ನಾಗಲೀಕರ್‌ ಅವರನ್ನು ನಿಯೋಜಿಸಲಾಗಿದೆ ಎಂದರು. ಕೆಲವು ಸಂದರ್ಭಗಳಲ್ಲಿ ಜಿಲ್ಲಾ  ಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅ ಧಿಕಾರಿಗಳು ಚಿಕಿತ್ಸಾಲಯಕ್ಕೆ ಭೇಟಿ ನೀಡಿ, ರೋಗಿಗಳ ದಾಖಲಾತಿ, ಅಲ್ಲಿನ ವ್ಯವಸ್ಥೆ ಮುಂತಾದ ವಿಷಯಗಳ ಕುರಿತು ವಾಸ್ತವ ಪರಿಶೀಲಿಸಿ ಕ್ರಮ ವಹಿಸುವರು.

ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಆಸ್ಪತ್ರೆಯ ಆಡಳಿತಾಧಿ ಕಾರಿಗಳ ವಿರುದ್ಧ ಕ್ರಮ ಅನಿವಾರ್ಯವಾಗಲಿದೆ ಎಂದರು. ಹೆಚ್ಚಿನ ಚಿಕಿತ್ಸೆಗಾಗಿ ದೂರದ ಹೊರ ಊರುಗಳಿಗೆ ಶಿಫಾರಸ್ಸು ಮಾಡುವಾಗ ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತರಬೇಕು. ರೋಗಿಯು ಪ್ರಯಾಣ ಆರಂಭಿಸುವ ಪೂರ್ವದಲ್ಲಿ ರೋಗಿಯ ಆರೋಗ್ಯ ಸ್ಥಿರತೆ ಹಾಗೂ ಆತನ ದೈಹಿಕ ಕ್ಷಮತೆ ಬಗ್ಗೆ ಸರಿಯಾದ ಮಾಹಿತಿ ಇರಬೇಕು. ಒಂದು ವೇಳೆ ಪ್ರಯಾಣದ ನಡುವೆ ರೋಗಿಯ ಆರೋಗ್ಯದಲ್ಲಿ ಏರುಪೇರಾದಲ್ಲಿ ಮುಂದಿನ ಆಗುಹೋಗುಗಳಿಗೆ ತಮ್ಮನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.

ಆರೋಗ್ಯ ಇಲಾಖೆಗೆ ನೀಡಿದ ಮಾಹಿತಿಯಂತೆ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗಿರುವ ಹಾಸಿಗೆಗಳ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು. ಸಾಮರ್ಥ್ಯಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಕಲ್ಪಿಸಿದಲ್ಲಿ ಆರೋಗ್ಯ ಇಲಾಖೆಗೆ ಸೂಕ್ತ ಮಾಹಿತಿ ನೀಡಬೇಕು. ತಪ್ಪು ಮಾಹಿತಿ ನೀಡಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಹಾಸಿಗೆಗಳನ್ನು ಕಲ್ಪಿಸಿಕೊಂಡು ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಅಡಚಣೆ ಅಥವಾ ವ್ಯತ್ಯಯಗಳುಂಟಾದಲ್ಲಿ ಆಸ್ಪತ್ರೆಯ ವಿರುದ್ಧ ನಿಯಮಾನುಸಾರ ಕ್ರಮ ಅನಿವಾರ್ಯವಾಗಲಿದೆ ಎಂದ ಅವರು, ನಿಯಮ ಉಲ್ಲಂಘಿಸಿದ ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಗಳಿಗೆ ನೊಟೀಸ್‌ ನೀಡುವಂತೆ ಇಲಾಖೆಯ ಅಧಿ ಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಮೆಗ್ಗಾನ್‌ ಆಸ್ಪತ್ರೆಯ ಅ ಧೀಕ್ಷಕ ಡಾ| ಶ್ರೀಧರ್‌, ಡಾ| ಮಂಜುನಾಥ್‌ ನಾಗಲೀಕರ್‌ ಸೇರಿದಂತೆ ಸ್ಥಳೀಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

(Expiry Date)ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.