ತಗ್ಗಿದ ಬೇಡಿಕೆ; ಬಿಟಿಪಿಎಸ್ ಮೂರು ಘಟಕ ಸ್ಥಗಿತ
Team Udayavani, May 31, 2021, 9:49 PM IST
ವೆಂಕೋಬಿ ಸಂಗನಕಲ್ಲು
ಬಳ್ಳಾರಿ: ತಾಲೂಕಿನ ಕುಡತಿನಿ ಬಳಿಯ ಬಳ್ಳಾರಿ ವಿದ್ಯುತ್ ಶಾಖೋತ್ಪನ್ನ ಕೇಂದ್ರದಲ್ಲಿ ವಿದ್ಯುತ್ ಉತ್ಪಾದಿಸುವ ಮೂರು ಘಟಕಗಳು ಕಳೆದ 10 ದಿನಗಳಿಂದ ಸ್ಥಗಿತಗೊಂಡಿವೆ. ವಿದ್ಯುತ್ ಪೂರೈಕೆಗೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ಬೇಡಿಕೆ ನೀಡದ ಹಿನ್ನೆಲೆಯಲ್ಲಿ ಕೇಂದ್ರದ ಘಟಕಗಳು ಸದ್ಯಕ್ಕೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿವೆ.
ಬಳ್ಳಾರಿ ವಿದ್ಯುತ್ ಶಾಖೋತ್ಪನ್ನ ಕೇಂದ್ರದಲ್ಲಿ ಹಿಂದಿನ ಎರಡು ವರ್ಷಗಳು ಬೇಸಿಗೆಯಲ್ಲಿ ಕಲ್ಲಿದ್ದಲು ಮತ್ತು ನೀರಿನ ಕೊರತೆ ಎದುರಾಗಿತ್ತು. ಆದರೂ, ರಾಜ್ಯ ಸರ್ಕಾರ ಬೇಸಿಗೆ ದಿನಗಳಲ್ಲಿ ವಿದ್ಯುತ್ ಪೂರೈಕೆಗೆ ಸಂಬಂಧಿ ಸಿದಂತೆ ಕೇಂದ್ರಕ್ಕೆ ಬೇಡಿಕೆ ನೀಡುತ್ತಿತ್ತು. ಅದರಂತೆ ಕೇಂದ್ರದಲ್ಲೂ ಮೂರು ಘಟಕಗಳಿಂದ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುತ್ತಿತ್ತು. ಈ ಬಾರಿಯೂ ಬೇಸಿಗೆ ದಿನಗಳಲ್ಲಿ ಸರ್ಕಾರ ಕೇಳಿದಷ್ಟು ವಿದ್ಯುತ್ ಉತ್ಪಾದಿಸಿ ಪೂರೈಸಲಾಗಿದೆ.
ಆದರೆ, ಬೇಸಿಗೆ ಕೊನೆ ದಿನಗಳಲ್ಲಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು, ಜಲಮೂಲಗಳಿಂದ ವಿದ್ಯುತ್ ಉತ್ಪಾದನೆ ಆರಂಭವಾಗಿದೆ. ಜತೆಗೆ ಪವನ, ಸೋಲಾರ್ ವಿದ್ಯುತ್ ಅಗತ್ಯಕ್ಕೆ ತಕ್ಕಷ್ಟು ಲಭಿಸಿದ್ದರಿಂದ ರಾಜ್ಯ ಸರ್ಕಾರದಿಂದ ಬಿಟಿಪಿಎಸ್ಗೆ ಯಾವುದೇ ಬೇಡಿಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕಳೆದ 10 ದಿನಗಳಿಂದ ಕೇಂದ್ರದಲ್ಲಿನ ಮೂರು ಘಟಕಗಳು ಸ್ಥಗಿತಗೊಂಡಿದ್ದು ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಿವೆ.
ಬಳ್ಳಾರಿ ವಿದ್ಯುತ್ ಶಾಖೋತ್ಪನ್ನ ಕೇಂದ್ರದಲ್ಲಿ 2,700 ಮೆಗಾವ್ಯಾಟ್ ಸಾಮರ್ಥ್ಯದ 1 ಘಟಕ ಸೇರಿ ಒಟ್ಟು ಮೂರು ಘಟಕಗಳಲ್ಲಿ ವಿದ್ಯುತ್ ಉತ್ಪಾದಿಸಲಾಗುತ್ತದೆ. ಇದರಲ್ಲಿ 500 ಮೆಗಾವ್ಯಾಟ್ ಸಾಮರ್ಥ್ಯದ 1ನೇ ಘಟಕದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದ್ದು, ದುರಸ್ತಿ ಕಾರ್ಯ ನಡೆಯುತ್ತಿದೆ. ಘಟಕವನ್ನು ಪರೀûಾರ್ಥ ಎರಡು ದಿನಗಳ ಕಾಲ ಚಾಲನೆ ನೀಡಲಾಗುತ್ತಿದೆ.
ಯಶಸ್ವಿಯಾದಲ್ಲಿ ಮೂರು ಘಟಕಗಳು ವಿದ್ಯುತ್ ಉತ್ಪಾದಿಸಲು ಸಿದ್ಧವಾಗಿರಲಿವೆ. ರಾಜ್ಯ ಸರ್ಕಾರದಿಂದ ಬೇಡಿಕೆ ನೀಡುವುದೊಂದೆ ಬಾಕಿ ಇದೆ. ಆದರೆ, ರಾಜ್ಯದಲ್ಲಿ ಸೋಲಾರ್, ಪವನ ಶಕ್ತಿಯಂತಹ ಪರ್ಯಾಯ ಮೂಲಗಳಿಂದ ವಿದ್ಯುತ್ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಪರಿಣಾಮ ರಾಜ್ಯ ಸರ್ಕಾರ ವಿದ್ಯುತ್ ಪೂರೈಸುವಂತೆ ಬಿಟಿಪಿಎಸ್ಗೆ ನೀಡುವ ಬೇಡಿಕೆಯೂ ಕಡಿಮೆಯಾಗುತ್ತಿದೆ.
ಆದರೂ, ಮೂರು ಘಟಕಗಳನ್ನು ಸದಾ ಸಿದ್ಧವಾಗಿರಲಿವೆ. ಸರ್ಕಾರದಿಂದ ಬೇಡಿಕೆ ಬಂದಾಕ್ಷಣ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುವುದು ಎಂದು ಬಿಟಿಪಿಎಸ್ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.
3ನೇ ಘಟಕ ಚಾಲನೆ: ಬಿಟಿಪಿಎಸ್ನಲ್ಲಿ ಮೂರು ಘಟಕಗಳಲ್ಲಿ ಎರಡು ಮತ್ತು ಮೂರನೇ ಘಟಕಗಳು ಸದ್ಯ ವಿದ್ಯುತ್ ಉತ್ಪಾದನೆಗೆ ಸಿದ್ಧ ಇವೆ. ಕೆಪಿಟಿಸಿಎಲ್ ನವರು 700 ಮೆಗಾವ್ಯಾಟ್ ಸಾಮರ್ಥ್ಯದ ಮೂರನೇ ಘಟಕವನ್ನು ಆರಂಭಿಸಿ ವಿದ್ಯುತ್ ಉತ್ಪಾದಿಸುವಂತೆ ಸೂಚಿಸಿದ್ದಾರೆ.
ಆದರೆ, ಎಷ್ಟು ವಿದ್ಯುತ್ ಉತ್ಪಾದಿಸಿ ಪೂರೈಸಬೇಕು ಎಂಬುದು ತಿಳಿದಿಲ್ಲ. ಅವರ ಸೂಚನೆಯಂತೆ ಘಟಕ ಆರಂಭಿಸಿ ಕಾರ್ಯಾರಂಭ ಮಾಡಲಾಗುವುದು ಎಂದು ಬಿಟಿಪಿಎಸ್ನ ಕಾರ್ಯನಿರ್ವಾಹಕ ಅಧಿ ಕಾರಿ ಪ್ರೇಮನಾಥ್ ತಿಳಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.