ಶವ ಸಂಸ್ಕಾರಕ್ಕೆ ಮುಕ್ತಿ ವಾಹನ-ಜೆಸಿಬಿ
Team Udayavani, May 31, 2021, 9:54 PM IST
ಹರಪನಹಳ್ಳಿ: ಕೊರಾನಾ ಹಿನ್ನೆಲೆ ಶವ ಸಂಸ್ಕಾರಕ್ಕಾಗಿ ಪುರಸಭೆ ವತಿಯಿಂದ ಮುಕ್ತಿ ವಾಹನ ಮತ್ತು ಜೆಸಿಬಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಯೋಗ್ಯ ದರ ನಿಗ ದಿಪಡಿಸಿ ನೀಡಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಇಜಾಂತಕರ್ ತಿಳಿಸಿದರು.
ಪಟ್ಟಣದ ಪುರಸಭೆ ಅಧ್ಯಕ್ಷರ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕರ ಹಿತದೃಷ್ಟಿಯಿಂದ ಬಡವರಿಗೆ, ದಿನ ದಲಿತರಿಗೆ ಅನುಕೂಲವಾಗಲೆಂದು ಪುರಸಭೆಯಿಂದ ಮುಕ್ತಿವಾಹನ ಜೊತೆಗೆ ಜೆಸಿಬಿಯನ್ನು ಸಹ ಯೋಗ್ಯದರದಲ್ಲಿ ಬಾಡಿಗೆಯೊಂದಿಗೆ ಅಂತಿಮ ಸಂಸ್ಕಾರಕ್ಕಾಗಿ ನೀಡಲಾಗುತ್ತದೆ ಎಂದು ಹೇಳಿದರು.
ಪುರಸಭೆ ಮುಖ್ಯಾ ಧಿಕಾರಿ ಬಿ.ಆರ್.ನಾಗರಾಜ್ ನಾಯ್ಕ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಖಾಸಗಿ ಜೆಸಿಬಿಯವರು ಶವ ಸಂಸ್ಕಾರಕ್ಕಾಗಿ ಗುಂಡಿ ತೆಗೆಯಲು ನಿರಾಕರಿಸುವುದರೊಂದಿಗೆ ಸಾರ್ವಜನಿಕರಿಂದ ಹೆಚ್ಚಿನ ಬೇಡಿಕೆಯನ್ನು ಇಡುವುತ್ತಿರುವುದರಿಂದ, ಪಟ್ಟಣದ ಸಾರ್ವಜನಿಕರ ಮತ್ತು ಎಲ್ಲ ಸರ್ವ ಸದಸ್ಯರ ಒತ್ತಾಸೆಯ ಮೇರೆಗೆ ಮುಕ್ತಿ ವಾಹನ ಮತ್ತು ಜೆಸಿಬಿಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಹೆಚ್ಚಿನ ಮಾಹಿತಿಗಾಗಿ ಮಂಜುನಾಥ .ಬಿ ಹಿರಿಯ ಆರೋಗ್ಯ ನಿರೀಕ್ಷಕರು ಮೊ-9844936776ಗೆ ಸಂಪರ್ಕಿಸಬಹುದು. ಈ ವೇಳೆ ಪುರಸಭೆ ಸದಸ್ಯರಾದ ಕಿರಣ್ ಶ್ಯಾನ್ ಭೋಗ್, ಸಮುದಾಯ ಸಂಘಟನಾಧಿ ಕಾರಿ ಸಿ.ಲೋಕಾನಾಯ್ಕ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Bellary; ಕಳಪೆ ಆಹಾರ ಪೂರೈಕೆ; ಎಸ್ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ
Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್ ದೂರು?
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Ballari: ಕೊನೆಗೂ ನಟ ದರ್ಶನ್ ಸೆಲ್ಗೆ ಟಿವಿ; ಡಿಡಿ ಚಾನೆಲ್ ಮಾತ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.