ಸಂಕಷ್ಟದಲ್ಲಿ ನೆರವಾಗಲು 30 ಸಾವಿರ ದಿನಸಿ ಕಿಟ್ ವಿತರಣೆ
Team Udayavani, May 31, 2021, 10:43 PM IST
ಶಿವಮೊಗ್ಗ: ಕೋವಿಡ್ ಸಂಕಷ್ಟದಲ್ಲಿ ಸಾವು-ನೋವು ಉಂಟಾಗಿದೆ. ಸಮಾಜದ ಎಲ್ಲರೂ ಹಲವಾರು ಸವಾಲು ಎದುರಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸಮಾಜದ ವಿವಿಧ ವಿಭಾಗದಲ್ಲಿ ಕೆಲಸ ಮಾಡುತ್ತಿರುವರಿಗೆ, ಬಡವರಿಗೆ ನೆರವಾಗುವ ಉದ್ದೇಶದಿಂದ ಸುಮಾರು 30 ಸಾವಿರ ದಿನಸಿ ಕಿಟ್ಗಳನ್ನು ನೀಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಅವರು ಪಾಲಿಕೆ ಆವರಣದಲ್ಲಿ ಸೇವಾ ಭಾರತಿ, ಪ್ರೇರಣಾ ಎಜ್ಯುಕೇಷನಲ್ ಟ್ರಸ್ಟ್ ವತಿಯಿಂದ ಕೊರೊನಾ ವಾರಿಯರ್ಸ್ ಮತ್ತು ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕೊರೊನಾ ಹಬ್ಬುವುದನ್ನು ತಡೆಯಲು ಒಂದು ವಾರದ ಕಟ್ಟುನಿಟ್ಟಿನ ಲಾಕ್ ಡೌನ್ ಇದೆ. ಹೀಗಾಗಿ ಸಾಂಕೇತಿಕವಾಗಿ ದಿನಸಿ ಕಿಟ್ ನೀಡುತ್ತಿದ್ದು ಜೂನ್ 7 ರವರೆಗೆ ನಿಗದಿ ಪಡಿಸಿದ ಕಿಟ್ ವಿತರಣೆ ಕಾರ್ಯಕ್ರಮವನ್ನು ರದ್ದುಗೊಳಿಸಿ ಜೂನ್ 7 ರ ಕಠಿಣ ಲಾಕ್ಡೌನ್ ನಂತರ ವಿತರಿಸಲಾಗುವುದು ಎಂದರು.
ಕಿಟ್ ವಿತರಿಸುವ ಸಂದರ್ಭದಲ್ಲಿ ಹಾಜರಿದ್ದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಮಾತನಾಡಿ, ಸಮಾಜದ ಋಣ ತೀರಿಸುವ ಕೆಲಸವನ್ನು ಸಂಸದ ಬಿ.ವೈ. ರಾಘವೇಂದ್ರ ಮಾಡುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಸಮಾಜದ ಎಲ್ಲರ ಹಸಿವು ನೀಗಿಸಲು ತಮ್ಮಿಂದಾದ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.
ಭಾನುವಾರ ಪಾಲಿಕೆ ಆವರಣದಲ್ಲಿ ಪೌರಕಾರ್ಮಿಕರಿಗೆ ಬಳಿಕ ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ವೀರಶೈವ ಕಲ್ಯಾಣ ಮಂದಿರ ಪಕ್ಕ ನಿಜಲಿಂಗಪ್ಪ ಸಭಾಂಗಣದಲ್ಲಿ ಕಿಟ್ ವಿತರಣೆ ನಡೆಯಿತು.
ಮಾಂಗಲ್ಯ ಮಂದಿರದಲ್ಲಿ ಬಾಣಸಿಗರು ಹಾಗೂ ಅರ್ಚಕರಿಗೆ, ಪ್ರಸ್ ಟ್ರಸ್ಟ್ನಲ್ಲಿ ಪತ್ರಿಕಾ ಮತ್ತು ಮಾಧ್ಯಮ ಪ್ರತಿನಿಧಿಗಳು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್ ಗಳಿಗೆ ಕಿಟ್ ವಿತರಿಸಲಾಯಿತು. ಸಂಜೆ ನಿಜಲಿಂಗಪ್ಪ ಸಭಾಭವನದಲ್ಲಿ ರಿಕರು, ಬಸ್ ಏಜೆಂಟರು, ಡೈವರ್ ಗಳಿಗೆ ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನಲ್ಲಿ ಅರೋಗ್ಯ ಇಲಾಖೆ ಸಿಬ್ಬಂದಿಗೆ ಕಿಟ್ ಹಂಚಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.