ಲಾಕ್‌ಡೌನ್‌ ನಿರ್ಬಂಧದಲ್ಲಿ ಬದಲಾವಣೆ


Team Udayavani, Jun 1, 2021, 9:05 PM IST

1-16

 

ಚಿಕ್ಕಮಗಳೂರು: ಕೋವಿಡ್‌ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ವಿಧಿ ಸಿದ್ದ ಲಾಕ್‌ಡೌನ್‌ ಜೂ.1ರ ಬೆಳಗ್ಗೆ 6ಗಂಟೆಗೆ ಮುಕ್ತಾಯವಾಗಲಿದ್ದು, ದಿನಸಿ ಅಂಗಡಿ, ಮೀನು ಮಾಂಸ, ಮದ್ಯ ಮಾರಾಟಕ್ಕೆ ಬೆಳಗ್ಗೆ 6ರಿಂದ 10ಗಂಟೆಯವರೆಗೂ ಅವಕಾಶ ನೀಡಿ ಪರಿಷ್ಕೃತ ಆದೇಶವನ್ನು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಹೊರಡಿಸಿದ್ದಾರೆ.

ಸೋಮವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಿನಸಿ ಅಂಗಡಿಗಳು, ಹಣ್ಣು, ತರಕಾರಿ, ಮೀನುಮಾಂಸದ ಅಂಗಡಿಗಳು ಬೆಳಗ್ಗೆ 6ಗಂಟೆಯಿಂದ 10 ಗಂಟೆವರೆಗೂ ವ್ಯಾಪಾರ- ವಹಿವಾಟು ನಡೆಸಲು ಅವಕಾಶ ನೀಡಲಾಗಿದ್ದು, ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಜನರ ಓಡಾಟವನ್ನು ನಿರ್ಬಂ ಧಿಸಲಾಗಿದೆ ಎಂದು ತಿಳಿಸಿದ್ದಾರೆ.

ತಳ್ಳುಗಾಡಿ ಮತ್ತು ಗೂಡ್ಸ್‌ ವಾಹನಗಳಲ್ಲಿ ಹಣ್ಣು ಮತ್ತು ತರಕಾರಿಯನ್ನು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮನೆ- ಮನೆಗಳಿಗೆ ತೆರಳಿ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ. ಜಿಲ್ಲೆಯಲ್ಲಿರುವ ಹಾಪ್‌ಕಾಮ್ಸ್‌ಗಳು ಹಣ್ಣು ಮತ್ತು ತರಕಾರಿಯನ್ನು ವಾಹನಗಳ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಿದ್ದು ಹಾಪ್‌ಕಾಮ್ಸ್‌ ಮಳಿಗೆಳಲ್ಲಿ ವ್ಯಾಪಾರ- ವಹಿವಾಟು ನಿಷೇ ಧಿಸಲಾಗಿದೆ ಎಂದಿದ್ದಾರೆ.

ಮಾಲ್‌ಗ‌ಳು ಹಾಗೂ ಸೂಪರ್‌ ಮಾರ್ಕೆಟ್‌ಗಳು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹೋಮ್‌ ಡೆಲಿವರಿಗೆ ಅವಕಾಶ ನೀಡಲಾಗಿದೆ. ಸಾರ್ವಜನಿಕರ ಭೇಟಿಯನ್ನು ನಿರ್ಬಂಧಿ ಸಲಾಗಿದೆ. ಪ್ರತ್ಯೇಕ ಮದ್ಯದಂಗಡಿಗಳು ಮತ್ತು ಓಟ್‌ಲೆಟ್‌ಗಳಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದ್ದು, ಪಾರ್ಸಲ್‌ ಕೊಂಡೊಯ್ಯಲು ಮಾತ್ರ ಅವಕಾಶ ನೀಡಲಾಗಿದೆ.

ಕೃಷಿ ಚಟುವಟಿಕೆಗೆ ಸಂಬಂಧಿ ಸಿದಂತೆ ಸರಕು ವಾಹನಗಳು ಓಡಾಡಲು ಅವಕಾಶ ನೀಡಲಾಗಿದೆ. ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೃಷಿ ಚಟುವಟಿಕೆ ನಡೆಸಬಹುದಾಗಿದ್ದು, ತೋಟ ಕಾರ್ಮಿಕರಿಗೆ ಬೆಳಗ್ಗೆ ಕೆಲಸದ ಸ್ಥಳಕ್ಕೆ ತೆರಳಲು ಮತ್ತು ಸಂಜೆ ಮನೆಗೆ ವಾಪಸ್‌ ಬರಲು ಅನುಮತಿ ನೀಡಲಾಗಿದೆ. ಆದರೆ, ವಾಹನಗಳಲ್ಲಿ ಕಾರ್ಮಿಕರನ್ನು ಕರೆದೊಯ್ಯುವುದು ನಿರ್ಬಂ ಸಲಾಗಿದೆ. ಬ್ಯಾಂಕ್‌ಗಳು, ಇಶ್ಯೂರೆನ್ಸ್‌ ಕಚೇರಿಗಳು, ಗ್ರಾಮ ಒನ್‌ ಕೇಂದ್ರಗಳು, ಎಟಿಎಂ, ಪೋಸ್ಟ್‌ ಆಸ್‌ಗಳು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ತೆರೆಯಲು ಅನುಮತಿಸಲಾಗಿದ್ದು, ಕನಿಷ್ಠ ಪ್ರಮಾಣದ ಸಿಬ್ಬಂದಿಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕಂಟೈನ್‌ಮೆಂಟ್‌ ವಲಯಗಳನ್ನು ಹೊರತುಪಡಿಸಿ ಆಯುಷ್‌, ಪಶು ವೈದ್ಯಕೀಯ ಆಸ್ಪತ್ರೆಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಆಸ್ಪತ್ರೆಗಳು ನರ್ಸಿಂಗ್‌ ಹೋಮ್‌, ಪ್ರಯೋಗಾಲಯಗಳು, ಔಷಧಾಲಯಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಕೈಗಾರಿಕೆಗಳು, ಕೈಗಾರಿಕಾ ಸಂಸ್ಥೆಗಳು, ಅಗತ್ಯ ವಸ್ತುಗಳ ಉತ್ಪಾದನಾ ಘಟಕಗಳು ಅಗತ್ಯವಿ ರುವ ಸಿಬ್ಬಂದಿ ಗಳನ್ನು ಬಳಸಿಕೊಂಡು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಸರಕು ಸಾಗಣೆಗೆ ಅನುಮತಿ ನೀಡಿದ್ದು, ಕಾರ್ಯನಿರ್ವಹಿಸುವ ಸ್ಥಳಕ್ಕೆ ತೆರಳುವಾಗ ಮತ್ತು ವಾಪಸ್‌ ಬರುವಾಗ ತಪಾಸಣೆ ಸಂದರ್ಭದಲ್ಲಿ ಗುರುತಿನ ಚೀಟಿಯನ್ನು ಪ್ರದರ್ಶಿಸುವಂತೆ ತಿಳಿಸಲಾಗಿದೆ.

ಮದುವೆ ಕಾರ್ಯಕ್ರಮದಲ್ಲಿ 10ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಎಲ್ಲಾ ಸಭೆ ಸಮಾರಂಭಗಳನ್ನು ಜೂ.7ರವರೆಗೂ ನಿರ್ಬಂ ಧಿಸಲಾಗಿದೆ. ಕಟ್ಟಡ ಕಾರ್ಮಿಕರು ಸ್ಥಳೀಯವಾಗಿ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಕಡೆಯಿಂದ ಮತ್ತೂಂದು ಕಡೆಗೆ ತೆರಳುವುದನ್ನು ನಿರ್ಬಂಧಿ  ಸಲಾಗಿದೆ. ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹೋಮ್‌ ಡೆಲಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಅಂತ್ಯಕ್ರಿಯೆಯಲ್ಲಿ 5 ಜನರು ಪಾಲ್ಗೊಳ್ಳಲು ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಗೆ ಹೊರ ಜಿಲ್ಲೆಯಿಂದ ಆಗಮಿಸುವರನ್ನು 14ದಿನಗಳವರೆಗೂ ಕ್ವಾರಂಟೈನ್‌ ಗೆ ಒಳಪಡಿಸಲಾಗುವುದು. ತುರ್ತು ಸಂದರ್ಭದಲ್ಲಿ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದ್ದು ದಾಖಲೆಗಳನ್ನು ಪ್ರದರ್ಶಿಸುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.