ರಾಜ್ಯದಲ್ಲಿ ಕೃಷಿ ಚಟುವಟಿಕೆಗೆ ಇಲ್ಲ ಅಡ್ಡಿ : ಸಚಿವ ಬಿ.ಸಿ. ಪಾಟೀಲ್‌


Team Udayavani, Jun 2, 2021, 6:50 AM IST

ರಾಜ್ಯದಲ್ಲಿ ಕೃಷಿ ಚಟುವಟಿಕೆಗೆ ಇಲ್ಲ ಅಡ್ಡಿ : ಸಚಿವ ಬಿ.ಸಿ. ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ ಜಾರಿ ಯಲ್ಲಿದ್ದರೂ ಕೃಷಿ ಚಟುವಟಿಕೆಗಳು ನಿರಂತರ ನಡೆಯುತ್ತಿ ರುವುದರಿಂದ ಈ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಅನು ಕೂಲಕ್ಕಾಗಿ ಕೈಗೊಂಡ ಕ್ರಮಗಳು, ಬೀಜ, ಗೊಬ್ಬರ ಒದಗಿ ಸುವುದು, ಗ್ರಾಮೀಣ ಭಾಗದಲ್ಲಿ ರೈತರ ಉತ್ಪನ್ನ ಮಾರಾಟಕ್ಕೆ ಮಾಡಿರುವ ಹೊಸ ವ್ಯವಸ್ಥೆಗಳ ಬಗ್ಗೆ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಉದಯವಾಣಿಯೊಂದಿಗೆ ಮಾತನಾಡಿದ್ದಾರೆ.

– ನಿಮ್ಮ ಇಲಾಖೆಯಿಂದ ರೈತರಿಗೆ ಯಾವ ರೀತಿ ಸಹಾಯ ಮಾಡುತ್ತಿದ್ದೀರಿ?
ಲಾಕ್‌ಡೌನ್‌ ಜಾರಿಯಲ್ಲಿದ್ದರೂ ರೈತರು ಬೆಳಗ್ಗೆ 6ರಿಂದ 10 ರವರೆಗೆ ಮಾರುಕಟ್ಟೆಗೆ ಹಣ್ಣು ತರಕಾರಿ ಮಾರಾಟ ಮಾಡಲು ಯಾವುದೇ ತೊಂದರೆ ಇಲ್ಲ. ಕೃಷಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಯಾವುದೇ ಅಡ್ಡಿಯಿಲ್ಲ. ಗೊಬ್ಬರ ದಾಸ್ತಾನು ಹಾಗೂ ಬಿತ್ತನೆ ಬೀಜ ಪಡೆದುಕೊಳ್ಳಲು ರೈತರಿಗೆ ನಿರ್ಬಂಧ ಇಲ್ಲ. ಬಿತ್ತನೆ ಕಾರ್ಯ ಸರಾಗವಾಗಿ ನಡೆಯುತ್ತಿದೆ.

– ರೈತರಿಗೆ ವಾರ್‌ ರೂಂ ಮಾಡಿದ್ದೀರಿ, ಇದರಿಂದ ರೈತರಿಗೆ ಅನುಕೂಲವಾಗುತ್ತಿದೆಯಾ?
ಕೃಷಿ ವಾರ್‌ ರೂಂ ಮೂಲಕ ರೈತರಿಗೆ ಏನಾದರೂ ಸಮಸ್ಯೆ ಇದ್ದರೆ, ಅವರಿಗೆ ಪರಿಹಾರ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಬೀಜ ಮತ್ತು ಗೊಬ್ಬರ ಖರೀದಿ ಮಾಡಲು ಗ್ರೀನ್‌ ಪಾಸ್‌ ಅವಕಾಶ ನೀಡಲಾಗಿದೆ. ನಾಲ್ಕು ವಿಶ್ವ ವಿದ್ಯಾನಿಲಯಗಳಲ್ಲಿ ಕಾಲ್‌ಸೆಂಟರ್‌ ಮಾಡಿ, ವಿವಿಗಳ ಪ್ರಾಧ್ಯಾಪಕರು ಸೂಕ್ತ ನಿರ್ದೇಶನ ಹಾಗೂ ಸಲಹೆ ನೀಡುತ್ತಿದ್ದಾರೆ.

– ರೈತರು ಬೆಳೆದ ತರಕಾರಿ, ಹಣ್ಣು ಗ್ರಾಹಕರಿಗೆ ತಲುಪಿಸಲು ಏನು ವ್ಯವಸ್ಥೆ ಮಾಡಿದ್ದೀರಿ?
ತೋಟಗಾರಿಕೆ ಇಲಾಖೆ ಹಣ್ಣು ಮತ್ತು ತರಕಾರಿಗಳನ್ನು ಹಾಪ್‌ಕಾಮ್ಸ್‌ ಮೂಲಕ ಮಾರಾಟಕ್ಕೆ ವ್ಯವಸ್ಥೆ ಮಾಡಿದೆ. ಕಳೆದ ಬಾರಿಯಂತೆ ಈ ವರ್ಷ ಪೂರ್ಣ ಪ್ರಮಾಣದ ಲಾಕ್‌ಡೌನ್‌ ಇಲ್ಲ. ಬೆಳಗ್ಗೆ 10ರವರೆಗೆ ಮಾರಾಟಕ್ಕೆ ಅವಕಾಶ ಇದೆ. ಅದರ ಜತೆಗೆ ಹೂವು, ಹಣ್ಣು, ತರಕಾರಿ ಬೆಳೆದವರಿಗೆ ಪ್ರತೀ ಹೆಕ್ಟೇರ್‌ಗೆ 10 ಸಾವಿರ ರೂ. ಪರಿಹಾರವನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.

– ನಗರ ಪ್ರದೇಶದಿಂದ ಬಂದಿರುವವರಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ವಿಶೇಷ ಯೋಜನೆ ಘೋಷಣೆ ಮಾಡಿದ್ದೀರಾ ?
ಹಳ್ಳಿಗಳಿಗೆ ವಾಪಸ್‌ ಹೋದವರು ಬಹುತೇಕರು ಇದುವರೆಗೂ ಪಾಳು ಬಿಟ್ಟಿದ್ದ ಜಮೀನು ಸಾಗುವಳಿ ಮಾಡುತ್ತಿದ್ದಾರೆ. ಇದರಿಂದ ಕಳೆದ ವರ್ಷ ರಾಜ್ಯದ ಇತಿಹಾಸದಲ್ಲಿಯೇ 153.08 ಲಕ್ಷ ಮೆಟ್ರಿಕ್‌ ಟನ್‌ ಆಹಾರ ಉತ್ಪಾದನೆಯಾಗಿದೆ. ಇದರಿಂದ ರೈತರಿಗೆ ಕಾರ್ಮಿಕರ ಸಮಸ್ಯೆ ಇಲ್ಲದಂತಾಗಿದೆ.

– ಗ್ರಾಮೀಣ ಪ್ರದೇಶದಲ್ಲಿ ಅಗ್ರಿ ಸ್ಟಾರ್ಟ್‌ ಅಪ್‌ ಮಾಡಲು ಏನಾದರೂ ಯೋಜನೆ ಮಾಡಿದ್ದೀರಾ ?
ಕೃಷಿ ಇಲಾಖೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಫ್ಪಿಒ (ಕೃಷಿ ಉತ್ಪಾದಕ ಸಂಘಗಳು) ಇವೆ. ಆತ್ಮನಿರ್ಭರ ಯೋಜನೆಯಲ್ಲಿ ಕೇಂದ್ರ ಸರಕಾರ 10 ಸಾವಿರ ಕೋಟಿ ರೂ. ಪ್ಯಾಕೇಜ್‌ ಘೋಷಣೆ ಮಾಡಿದ್ದಾರೆ. 70 ಲಕ್ಷ ರೂ. ವರೆಗೂ ಸಾಲ ಪಡೆದು ಫ‌ುಡ್‌ ಪ್ರೊಸೆಸಿಂಗ್‌ ಕಂಪೆನಿಗಳನ್ನು ತೆರೆಯಲು ಅವಕಾಶವಿದೆ. ಅವರಿಗೆ ಶೇ.35 ರಿಯಾಯಿತಿ ನೀಡಲಾಗುತ್ತಿದೆ. ಯಾವುದೇ ರೈತರು ಎಫ್ಪಿಒ ಆರಂಭಿಸಬಹುದು.

– ಕೃಷಿ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಲು ಏನು ಕ್ರಮ ಕೈಗೊಂಡಿದ್ದೀರಾ ?
ಈ ವರ್ಷ 500 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 9 ಜನ ಸಾವಿಗೀಡಾಗಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಲು ಸಿಎಂಗೆ ಮನವಿ ಮಾಡಿದ್ದೇನೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.