ಕೋವಿಡ್‌ನಿಂದ ಕ್ಷಯರೋಗಿಗಳು ಬಚಾವ್‌


Team Udayavani, Jun 2, 2021, 10:09 PM IST

2-19

„ಎಚ್‌.ಕೆ. ನಟರಾಜ

ದಾವಣಗೆರೆ: ಶ್ವಾಸಕೋಶದ ಮೇಲೆ ದಾಳಿ ಇಡಬಹುದಾದ ಕ್ಷಯರೋಗ ಹಾಗೂ ಕೋವಿಡ್‌-19 ಎರಡನೇ ಅಲೆ ಹೊಡೆತಕ್ಕೆ ಸಿಲುಕಿದ ಜಿಲ್ಲೆಯ ಆರು ಜನರು ಎರಡೂ ಮಹಾಮಾರಿಗಳ ವಿರುದ್ಧ ಹೋರಾಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊರೊನಾ ಎರಡನೇ ಅಲೆಯ ಸೋಂಕು ಜಿಲ್ಲೆಯ ಒಟ್ಟು ಎಂಟು ಜನ ಕ್ಷಯರೋಗಿಗಳಿಗೆ ಹಬ್ಬಿತ್ತು. ಇವರಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಉಳಿದಂತೆ ಇದೇ ಅವಧಿಯಲ್ಲಿ ಕೊರೊನಾ ಸೋಂಕಿಗೆ ಒಳಗಾಗದಿದ್ದರೂ 46 ಜನರು ಕ್ಷಯರೋಗಿಗಳು ಕ್ಷಯದ ತೀವ್ರತೆ ಹೆಚ್ಚಾಗಿ ಮೃತಪಟ್ಟಿದ್ದಾರೆ. ಕ್ಷಯರೋಗದ ಪ್ರಾಥಮಿಕ ಲಕ್ಷಣಗಳು ಲಕ್ಷಣಗಳನ್ನೇ ಹೋಲುವ ಲಕ್ಷಣಗಳೊಂದಿಗೆ ಬಂದೆರಗಿದ ಕೋವಿಡ್‌-19 ಎರಡನೇ ಅಲೆಯ ಸೋಂಕು ಕ್ಷಯರೋಗಿಗಳಲ್ಲಿ ಭಾರೀ ಆತಂಕ ಸೃಷ್ಟಿಸಿದೆ. ಮೊದಲ ಅಲೆಯಲ್ಲಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದ ಕ್ಷಯರೋಗಿಗಳು, ಎರಡನೇ ಅಲೆಯ ಈ ಸಂದರ್ಭದಲ್ಲಿಯೂ ಹೆಚ್ಚಿನ ಸುರಕ್ಷತೆಗೆ ಮುಂದಾಗಿದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿಗೆ ಒಳಗಾಗಿಲ್ಲ .

ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಒಟ್ಟು 696 ಕ್ಷಯರೋಗಿಗಳು ಪತ್ತೆಯಾಗಿದ್ದಾರೆ. 640 ಕ್ಷಯರೋಗಿಗಳು ಈವರೆಗೆ ಕೋವಿಡ್‌-19 ವೈರಸ್‌ ತಮ್ಮತ್ತ ಸುಳಿಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸಿ ತಮ್ಮ “ಶ್ವಾಸ’ ಕಾಪಾಡಿಕೊಂಡಿದ್ದಾರೆ.

ಕೊರೊನಾ ಗೆದ್ದ ಕ್ಷಯರೋಗಿಗಳು: ಜಿಲ್ಲೆಯ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಮೂವರು, ಹರಿಹರ ಹಾಗೂ ಹೊನ್ನಾಳಿ ತಾಲೂಕಿನ ತಲಾ ಇಬ್ಬರು ಸೇರಿದಂತೆ ಒಟ್ಟು ಎಂಟು ಕ್ಷಯರೋಗಿಗಳು ಈವರೆಗೆ ಕೊರೊನಾ ಎರಡನೇ ಅಲೆಯ ಹೊಡೆತಕ್ಕೆ ಸಿಲುಕಿದ್ದಾರೆ.

ಇವರಲ್ಲಿ ದಾವಣಗೆರೆ ಗ್ರಾಮಾಂತರದ ಒಬ್ಬರು, ದಾವಣಗೆರೆ ನಗರದ ಇಬ್ಬರು, ಹರಿಹರ ತಾಲೂಕಿನ ಒಬ್ಬರು ಹಾಗೂ ಹೊನ್ನಾಳಿ ತಾಲೂಕಿನ ಇಬ್ಬರು ಕೊರೊನಾ ಸೋಂಕಿನ ವಿರುದ್ಧ ಹೋರಾಡಿ ಜೀವ ಕಾಪಾಡಿಕೊಂಡಿದ್ದಾರೆ. ದಾವಣಗೆರೆ ಗ್ರಾಮಾಂತರ ಹಾಗೂ ಹರಿಹರದ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಕ್ಷಯ ರೋಗಿಗಳು ಕೊರೊನಾ ಮಹಾಮಾರಿ ಎದುರಿಸಲಾಗದೆ ಮೃತಪಟ್ಟಿದ್ದಾರೆ.

ಚನ್ನಗಿರಿ ತಾಲೂಕಿನ 101, ದಾವಣಗೆರೆ ಗ್ರಾಮೀಣ ಭಾಗದ 81, ದಾವಣಗೆರೆ ನಗರ ಭಾಗದ 249, ಹರಿಹರ ತಾಲೂಕಿನ 62, ಹೊನ್ನಾಳಿ ತಾಲೂಕಿನ 80, ಜಗಳೂರು ತಾಲೂಕಿನ 67 ಕ್ಷಯರೋಗಿಗಳು ಕೊರೊನಾ ತಮ್ಮತ್ತ ಸುಳಿಯದಂತೆ ಅಗತ್ಯ ಸುರಕ್ಷತಾ ಕ್ರಮ ಪಾಲನೆಯೊಂದಿಗೆ ಕೊರೊನಾ ಸೋಂಕಿನಿಂದ ದೂರ ಇದ್ದಾರೆ. ಕೊರೊನಾ ಎರಡನೇ ಅಲೆಯ ಆರ್ಭಟ ಇಳಿಯುವವರೆಗೂ ಈ ಕ್ಷಯರೋಗಿಗಳು ಸುರಕ್ಷತೆ, ಜಾಗರೂಕತೆಯನ್ನು ಮರೆಯದೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗಿದೆ.

ಒಟ್ಟಾರೆ ಜಿಲ್ಲೆಯಲ್ಲಿರುವ ಬಹುತೇಕ ಕ್ಷಯರೋಗಿಗಳು ಕೋವಿಡ್‌ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ಕೊರೊನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡಿರುವುದು ಸಮಾಧಾನಕರ ಸಂಗತಿ.

ಟಾಪ್ ನ್ಯೂಸ್

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Gangolli; ಮಹಾಂಕಾಳಿ ದೇಗುಲದ ಚಿನ್ನಾಭರಣ ಕಳವು; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದ ಅರ್ಚಕ

Development of 2-dose vaccine for HIV prevention: MIT

HIV vaccine; ಎಚ್‌ಐವಿ ತಡೆಗೆ 2 ಡೋಸ್‌ ಲಸಿಕೆ ಅಭಿವೃದ್ಧಿ: ಎಂಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

ಕೋಡಿಹಳ್ಳಿ ಚಂದ್ರಶೇಖರ್

Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡ ಸದೃಶ ಪ್ರಾಣಾಪಾಯದಿಂದ ಪಾರು

Mangaluru: ಕೆಪಿಟಿ ಬಳಿ ಅಪಘಾತ; ಬೈಕ್ ಸವಾರ ಪವಾಡಸದೃಶ ರೀತಿ ಪ್ರಾಣಾಪಾಯದಿಂದ ಪಾರು

River: ನದಿಯೇ ಜೀವನ ಸಾಕ್ಷಾತ್ಕಾರ!

River: ನದಿಯೇ ಜೀವನ ಸಾಕ್ಷಾತ್ಕಾರ!

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

India secures a win against Bangladesh in the chennai test

INDvsBAN; ಅʼಸ್ಪಿನ್‌ʼಗೆ ಬಾಂಗ್ಲಾ ತತ್ತರ: ಚೆನ್ನೈ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.