ಲಾಕ್‌ಡೌನ್‌ಗೆ ತರಕಾರಿ ಬೆಳೆದ ರೈತ ಹೈರಾಣ : ಹೊಲದಲ್ಲೇ ಕೊಳೆಯುತ್ತಿವೆ ಬೆಳೆ


Team Udayavani, Jun 3, 2021, 6:30 PM IST

ಲಾಕ್‌ಡೌನ್‌ಗೆ ತರಕಾರಿ ಬೆಳೆದ ರೈತ ಹೈರಾಣ

ಬೆಳಗಾವಿ: ಕಳೆದ ವರ್ಷ ಕೊರೊನಾ ಸೋಂಕು ನಮ್ಮನ್ನು ಸಂಪೂರ್ಣ ಸುಸ್ತು ಮಾಡಿತು. ಈಗ ಅದರಿಂದ ಸ್ವಲ್ಪ ಸುಧಾರಿಸಿಕೊಂಡು ಕಣ್ಣು ಬಿಡಬೇಕು ಎನ್ನುವಾಗಲೇ ಎರಡನೇ ಅಲೆ ಪ್ರವಾಹದಂತೆ ವಕ್ಕರಿಸಿ ಮತ್ತೆ ನಮ್ಮನ್ನು ನೆಲಕಚ್ಚುವಂತೆ ಮಾಡಿದೆ. ಏನು ಮಾಡಬೇಕು. ಆಗಿರುವ ನಷ್ಟ ಹೇಗೆ ಸರಿದೂಗಿಸಬೇಕು ಎಂಬುದು ಗೊತ್ತಾಗುತ್ತಿಲ್ಲ.

ಹೊಲದಾಗ ಭರಪೂರ ಬೆಳೆ ಇದೆ. ಇದರಿಂದ ಒಳ್ಳೆಯ ಹಣ ಮಾಡಬಹುದು. ನೆಮ್ಮದಿಯಿಂದ ಇರಬಹುದು ಎಂದು ಧೈರ್ಯದಿಂದ ಹೇಳುವಂತಿಲ್ಲ. ಟೊಮ್ಯಾಟೋ ಹಣ್ಣಾಗಿ ಕಣ್ಣಿಗೆ ಕುಕ್ಕಿತು. ಮೆಣಸಿನಕಾಯಿ ಖಾರವಾಗಿ ಕಣ್ಣಲ್ಲಿ ನೀರು ತರಿಸಿತು.
ಒಂದಲ್ಲಾ ಹತ್ತಾರು ತರಕಾರಿಗಳು ತುಂಬಿಕೊಂಡಿದೆ. ಆದರೆ ಯಾವುದೂ ನಮ್ಮ ಲೆಕ್ಕಕ್ಕೆ ತಕ್ಕಂತೆ ಮಾರಾಟ ಆಗುತ್ತಿಲ್ಲ. ಇನ್ನು ಒಳ್ಳೆಯ ಬೆಲೆ ಸಿಗುವ ಮಾತು ದೂರವೇ ಉಳಿಯಿತು.

ಸತತ ಎರಡು ವರ್ಷಗಳಿಂದ ಕೊರೊನಾ ವೈರಸ್‌ ದಿಂದ ಕಂಗೆಟ್ಟು ಹೋಗಿರುವ ಬೆಳಗಾವಿ ಜಿಲ್ಲೆಯ ರೈತರಲ್ಲಿ ಈಗ ನೋವಿನ ವಿಷಯ ಬಿಟ್ಟರೆ ಬೇರೆ ಮಾತು ಬರುತ್ತಲೇ ಇಲ್ಲ. ಮೊದಲು ಪ್ರಕೃತಿ ವಿಕೋಪಗಳಿಂದ ಕಂಗೆಟ್ಟುಹೋಗಿದ್ದ ರೈತ ಸಮುದಾಯ ಈಗ ಕೊರೊನಾದಿಂದಾಗಿ ಯಾವ ನಿರ್ಧಾರ ಕೈಗೊಳ್ಳಲೂ ಜರ್ಜರಿತರಾಗಿದ್ದಾರೆ. ಯಾವುದಕ್ಕೂ ಧೈರ್ಯ ಸಾಲುತ್ತಿಲ್ಲ. ಮುಂಗಾರು ಸಮೀಪಿಸಿದರೂ ಬಿತ್ತನೆ ಮಾಡುವ ಉತ್ಸಾಹ ಕಾಣುತ್ತಿಲ್ಲ. ಎರಡು ವರ್ಷದ ಹಿಂದೆ ಪ್ರವಾಹ ಬಂತು. 10 ಎಕರೆ
ಹೊಲದಲ್ಲಿ ಹಾಕಿದ ಕಬ್ಬು ನೀರಿನಲ್ಲಿ ಹೋಯಿತು. ಹೇಗೋ ಚೇತರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಕೊರೊನಾ ಕಾಟ ಆರಂಭವಾಯಿತು. ಕೊರೊನಾ ಲಾಕ್‌ ಡೌನ್‌ ಪರಿಣಾಮ ಬೆಳೆಯೆಲ್ಲ ಮಾರಾಟವಾಗದೆ ಹೊಲದಲ್ಲೇ ಕೊಳೆಯಿತು. ನಷ್ಟದ ಮೇಲೆ ನಷ್ಟ ಆಗುತ್ತಿದೆ. ಆರ್ಥಿಕ ಹೊರೆಯ ನಡುವೆ ಈಗ ಮುಂಗಾರು ಹಂಗಾಮು ಬಂದಿದೆ. ಬಿತ್ತನೆ ಮಾಡಬೇಕೋ ಬೇಡವೊ ಎಂಬ ಚಿಂತೆ ಆಗಿದೆ ಎನ್ನುತ್ತಾರೆ ಬೈಲಹೊಂಗಲ ತಾಲೂಕಿನ ಬಸವರಾಜ ಹಿರೇಮಠ.

ಇದನ್ನೂ ಓದಿ : ಮತ್ತೊಮ್ಮೆ ರೈತರ ಬದುಕನ್ನು ಕಸಿದುಕೊಂಡ ಕೋವಿಡ್ : ತೋಟದಲ್ಲೇ ಕೊಳೆಯುತ್ತಿದೆ ತರಕಾರಿ ಬೆಳೆ

ಚಿಕ್ಕೋಡಿ, ಖಾನಾಪುರ, ಬೆಳಗಾವಿ, ಬೈಲಹೊಂಗಲ ಸೇರಿದಂತೆ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಅಪಾರ ಪ್ರಮಾಣದ ಬೆಳೆ ಹೊಲದಲ್ಲೇ ಕೊಳೆತ ದೃಶ್ಯ ಕಣ್ಣಿಗೆ ರಾಚುತ್ತದೆ. ನೆರೆಯ ಮಹಾರಾಷ್ಟ್ರ, ಗೋವಾ ಮೊದಲಾದ ರಾಜ್ಯಗಳಿಗೆ ಲಾರಿಗಟ್ಟಲೇ
ಹೋಗುತ್ತಿದ್ದ ತರಕಾರಿ ಬೆಳೆಗಳು ಲಾಕ್‌ಡೌನ್‌ ಪರಿಣಾಮ ಖರೀದಿದಾರರಿಲ್ಲದೆ ಇದ್ದಲ್ಲೇ ಕೊಳೆತಿವೆ.

ಇನ್ನು ಅತೀ ಕಡಿಮೆ ಬೆಲೆ ಇದೆ ಎಂಬ ಕಾರಣಕ್ಕೆ ರೈತರೇ ಬೇಸರದಿಂದ ತಾವೇ ಬೆಳೆ ನಾಶ ಮಾಡಿದ್ದಾರೆ. ಇನ್ನೊಂದು ಕಡೆ ಸತತ ಆರ್ಥಿಕ ಸಂಕಷ್ಟ ಹಾಗೂ ಬೆಳೆ ಹಾನಿಯಿಂದ ಅಪಾರ ನಷ್ಟ ಅನುಭವಿಸುತ್ತಿರುವ ರೈತ ಸಮುದಾಯ ಈಗ ದೊಡ್ಡ ಹಾಗೂ ಉದಾರ ದಾನಿಗಳಾಗಿ ಕಾಣುತ್ತಿದ್ದಾರೆ. ಕೊರೊನಾದ ಕಷ್ಟ ಕಾಲದಲ್ಲಿ ತಾವು ಬೆಳೆದ ಕಲ್ಲಂಗಡಿ, ಟೊಮ್ಯಾಟೊ, ಪಪಾಯಿ ಸೇರಿದಂತೆ ವಿವಿಧ ತರಕಾರಿಗಳನ್ನು ತಮ್ಮದೇ ವಾಹನದಲ್ಲಿ ತುಂಬಿಕೊಂಡು ಜನರಿಗೆ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ದಾರೆ.

ಬೆಲೆಯಲ್ಲಿ ಅಜಗಜಾಂತರ: ಕಷ್ಟದ ಸಮಯದಲ್ಲಿರುವ ತಮ್ಮ ನೆರವಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಹಾಪ್‌ಕಾಮ್ಸ್‌ಗಳು ಬರುತ್ತಿಲ್ಲ ಎಂಬ ನೋವು ರೈತರಲ್ಲಿದೆ. ತರಕಾರಿಗಳಿಗೆ ಎಪಿಎಂಸಿ ಮಾರುಕಟ್ಟೆಯಲ್ಲಿ ಸಿಗುತ್ತಿರುವ ಬೆಲೆಗೂ ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬೆಲೆಗೂ ಅಜಗಜಾಂತರ ವ್ಯತ್ಯಾಸ ಇದೆ. ಸಗಟು ಮಾರುಕಟ್ಟೆಯಲ್ಲಿ ಟೊಮ್ಯಾಟೋಗೆ ಪ್ರತಿ ಕೆಜಿ ಗೆ ಕೇವಲ 2 ರೂ ಸಿಗುತ್ತಿದ್ದರೆ ಚಿಲ್ಲರೆ ಮಾರುಕಟ್ಟೆಗಳಲ್ಲಿ ಪ್ರತಿ ಕೆ ಜಿ 30 ರೂ ದಂತೆ ಮಾರಾಟವಾಗುತ್ತಿದೆ. ಅದೇ ರೀತಿ ಮೆಣಸಿನಕಾಯಿಗೆ ಎಪಿಎಂಸಿ ಯಲ್ಲಿ ಎಜೆಂಟರು ಪ್ರತಿ ಕೆ ಜಿ ಗೆ 5 ರಿಂದ 10 ರೂ ನೀಡುತ್ತಿದ್ದರೆ ಅದೇ ಮೆಣಸಿನಕಾಯಿ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ ಜಿ ಗೆ 60 ರೂ. ಇದೆ. ಇದರಿಂದ ರೈತರು ಹಾಗೂ ಗ್ರಾಹಕರಿಬ್ಬರೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದು ರೈತ ಸಂಘದ ಮುಖಂಡ ರಾಘವೇಂದ್ರ ನಾಯಕ ಆರೋಪ.

ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ಲಾಕ್‌ಡೌನ್‌ ಜಾರಿಯಾದಾಗಿನಿಂದ ನಮ್ಮ ಬೆಳೆಗಳನ್ನು ಕೇಳುವವರೇ ಇಲ್ಲ. ಲಾಕ್‌ಡೌನ್‌ಗೆ ಮೊದಲು ಪ್ರತಿ ಹತ್ತು ಕೆ ಜಿ ಮೆಣಸಿನಕಾಯಿಗೆ 500 ರೂ. ಸಿಗುತ್ತಿತ್ತು. ಈಗ ಅದೇ 10 ಕೆ ಜಿ ಗೆ 50 ರಿಂದ 60 ರೂ ಮಾತ್ರ ಕೊಡುತ್ತಿದ್ದಾರೆ. ದಲ್ಲಾಳಿಗಳು ತಮ್ಮ ಮನಸ್ಸಿಗೆ ಬಂದಂತೆ ದರ ನಿಗದಿ ಮಾಡುತ್ತಿದ್ದಾರೆ. ಹೀಗಾಗಿ ಲಾಭದ ಆಸೆ ಬಿಟ್ಟು ಮತ್ತಷ್ಟು ನಷ್ಟ ಆಗುವದು ಬೇಡ ಎಂದು ಹೊಲದಲ್ಲೇ ಕೊಳೆಯಲು ಬಿಟ್ಟಿದ್ದೇವೆ ಎಂಬುದು ರೈತರ ನೋವಿನ ಮಾತು.

– ಕೇಶವ ಆದಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.