ಮತ್ತೆ ಜೈಲು ಸೇರಲು ಪ್ರಧಾನಿ ಮೋದಿಯನ್ನು ಹತ್ಯೆಗೈಯುವುದಾಗಿ ಬೆದರಿಕೆಯೊಡ್ಡಿದ ಯುವಕ!
ಮತ್ತೆ ಜೈಲು ಸೇರಲು ಸಲ್ಮಾನ್ ಪೊಲೀಸರಿಗೆ ಕರೆ ಮಾಡಿ ಪ್ರಧಾನಿ ಮೋದಿ ಅವರನ್ನು ಹತ್ಯೆಗೈಯುವುದಾಗಿ ತಿಳಿಸಿದ್ದ!
Team Udayavani, Jun 4, 2021, 12:50 PM IST
ನವದೆಹಲಿ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಯುವಕನೊಬ್ಬ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯುವುದಾಗಿ ಬೆದರಿಕೆಯೊಡ್ಡಿ ಮತ್ತೆ ಜೈಲು ಸೇರಿರುವ ಘಟನೆ ದೆಹಲಿಯ ಖಾಜುರಿ ಖಾಸ್ ನಲ್ಲಿ ನಡೆದಿದೆ.
ಇದನ್ನೂ ಓದಿ:ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ SSLC ಪರೀಕ್ಷೆ, ಇಲ್ಲದಿದ್ದರೆ ರದ್ದು: ಬಿಎಸ್ ವೈ
ಬೆದರಿಕೆಯೊಡ್ಡಿದ ಯುವಕನನ್ನು ಸಲ್ಮಾನ್(22ವರ್ಷ) ಎಂದು ಗುರುತಿಸಲಾಗಿದೆ. ಈತ ಗುರುವಾರ(ಜೂನ್ 03) ಗುರುವಾರ ರಾತ್ರಿ ದೂರವಾಣಿ ಮೂಲಕ ಕೊಲೆ ಬೆದರಿಕೆ ಕರೆಯನ್ನು ಮಾಡಿದ್ದ. ಪೊಲೀಸರಿಗೆ ಕರೆ ಮಾಡಿದ್ದ ಸಲ್ಮಾನ್, ನಾನು ಪ್ರಧಾನಿ ಮೋದಿ ಅವರನ್ನು ಕೊಲ್ಲಬೇಕು ಎಂದು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ ಎಂದು ವರದಿ ವಿವರಿಸಿದೆ.
ಫೋನ್ ಕರೆಯ ಜಾಡನ್ನು ಹಿಡಿದು ಹೊರಟಿದ್ದ ಪೊಲೀಸರಿಗೆ ದೆಹಲಿಯ ಖಾಜುರಿ ಖಾಸ್ ನಲ್ಲಿ ಯುವಕನನ್ನು ಬಂಧಿಸಿ, ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ತಾನು ಮತ್ತೆ ಜೈಲು ಸೇರಬೇಕು ಎಂಬ ಕಾರಣದಿಂದ ಹೀಗೆ ಬೆದರಿಕೆ ಕರೆ ಮಾಡಿರುವುದಾಗಿ ತನಿಖೆ ವೇಳೆ ತಿಳಿಸಿದ್ದ.
ಸಲ್ಮಾನ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದು, ಈತ ಜಾಮೀನಿನ ಮೇಲೆ ಹೊರಬಂದಿದ್ದ. ಮತ್ತೆ ಜೈಲು ಸೇರಲು ಸಲ್ಮಾನ್ ಪೊಲೀಸರಿಗೆ ಕರೆ ಮಾಡಿ ಪ್ರಧಾನಿ ಮೋದಿ ಅವರನ್ನು ಹತ್ಯೆಗೈಯುವುದಾಗಿ ತಿಳಿಸಿದ್ದ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.